Homeಮುಖಪುಟಇಸ್ರೇಲ್‌- ಪ್ಯಾಲೆಸ್ತೀನ್‌ ಸಂಘರ್ಷ ತಡೆಗೆ ನಿರ್ಣಯ ಅಂಗೀಕರಿಸಲು ಯುಎನ್ ಭದ್ರತಾ ಮಂಡಳಿ ವಿಫಲ

ಇಸ್ರೇಲ್‌- ಪ್ಯಾಲೆಸ್ತೀನ್‌ ಸಂಘರ್ಷ ತಡೆಗೆ ನಿರ್ಣಯ ಅಂಗೀಕರಿಸಲು ಯುಎನ್ ಭದ್ರತಾ ಮಂಡಳಿ ವಿಫಲ

- Advertisement -
- Advertisement -

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಸಲುವಾಗಿ ಯುಎನ್ ಭದ್ರತಾ ಮಂಡಳಿಯು ಕರಡು ನಿರ್ಣಯವನ್ನು ಅಂಗೀಕರಿಸಲು ಮತ್ತೊಮ್ಮೆ ವಿಫಲವಾಗಿದೆ.

ಸೋಮವಾರ ಎನ್ ಭದ್ರತಾ ಮಂಡಳಿ ಸಭೆಯಲ್ಲಿ 2 ಗಂಟೆಗಳ ಕಾಲ ಚರ್ಚೆಗಳು ನಡೆದಿದ್ದು, ಆದರೂ ಭಿನ್ನಾಭಿಪ್ರಾಯಗಳು ಮುಂದುವರಿದಿದೆ. ಕೌನ್ಸಿಲ್‌ನ ಸದಸ್ಯರು ಕದನ ವಿರಾಮಕ್ಕೆ ಒತ್ತಾಯಿಸಿದ್ದು, ಅಗತ್ಯವಿರುವ ಸಹಾಯವನ್ನು ನೀಡಿ ಗಾಝಾದಲ್ಲಿ ಹೆಚ್ಚಿನ ನಾಗರಿಕರ ಸಾವುಗಳನ್ನು ತಡೆಯಲು ಒತ್ತಾಯಿಸಿದ್ದಾರೆ.

ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಅವರು ಸುದ್ದಿಗಾರರ ಜೊತೆ ಮಾತನಾಡಿದ್ದು, ಗಾಝಾದಲ್ಲಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿದ್ದಾರೆ. ನಾಗರಿಕರ ರಕ್ಷಣೆ ಕುರಿತ ಅಂತರಾಷ್ಟ್ರೀಯ ಮಾನವೀಯ ಕಾನೂನನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗುತ್ತಿದೆ ಎಂದು ಗುಟೆರೆಸ್ ಹೇಳಿದ್ದಾರೆ.

ಭದ್ರತಾ ಮಂಡಳಿಯ 10 ಶಾಶ್ವತವಲ್ಲದ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿರುವ E-10 ರಾಷ್ಟ್ರಗಳು ನಿರ್ಣಯವನ್ನು ಮುಂದಿಟ್ಟಿದ್ದಾರೆ. ಆದರೆ ಖಾಯಂ ಕೌನ್ಸಿಲ್ ಸದಸ್ಯರು ವೀಟೋ ಅಧಿಕಾರವನ್ನು ಹೊಂದಿರುವ US ಮತ್ತು UK UNSC ಅಧಿವೇಶನದಲ್ಲಿ ಸೋಮವಾರ ಇದನ್ನು ವಿರೋಧಿಸಿದರು.

ಈ ಹಂತದಲ್ಲಿ ಯಾವುದೇ ಒಪ್ಪಂದವಿಲ್ಲ ಎಂದು ರಾಬರ್ಟ್ ವುಡ್ ಹೇಳಿದರು. ಆದರೆ ಇಲ್ಲಿ ಮಾನವೀಯ ನೆರವಿಗೆ ತಡೆ ನೀಡಿರುವ ಬಗ್ಗೆ ಚರ್ಚೆಗಳು ನಡೆದಿವೆ ಎಂದು ಒಪ್ಪಿಕೊಂಡರು. ಅದು ಸ್ವೀಕಾರಾರ್ಹವೇ ಎಂಬ ಬಗ್ಗೆ ಭದ್ರತಾ ಮಂಡಳಿಯಲ್ಲಿ ಭಿನ್ನಾಭಿಪ್ರಾಯವಿದೆ ಎಂದು ಅವರು ಹೇಳಿದರು.

ಚೀನಾದ ಯುಎನ್ ರಾಯಭಾರಿ ಜುನ್ ಜಾಂಗ್ ಅವರು ಗಾಝಾಕ್ಕೆ ಮಾನವೀಯ ನೆರವು ತಲುಪಿಸಲು ಅನುಕೂಲವಾಗುವಂತೆ ತುರ್ತು ಕದನ ವಿರಾಮಕ್ಕೆ ಕರೆ ನೀಡಿದ್ದಾರೆ. ನಾವು ಮಾತನಾಡುತ್ತಿರುವಂತೆ ಪ್ಯಾಲೆಸ್ತೀನ್‌ ನಾಗರಿಕರು ಕೊಲ್ಲಲ್ಪಡುತ್ತಿದ್ದಾರೆ. ಹಲವಾರು ಅಧಿಕಾರಿಗಳು ಈಗಾಗಲೇ ಹೇಳಿದಂತೆ ಗಾಝಾ, ಮಕ್ಕಳ ಸ್ಮಶಾನವಾಗುತ್ತಿದೆ. ಯಾರೂ ಸುರಕ್ಷಿತವಾಗಿಲ್ಲ ಎಂದು ಚೀನಾ ರಾಯಭಾರಿಯನ್ನು ಉಲ್ಲೇಖಿಸಿ ಸಿಎನ್‌ಎನ್ ವರದಿ ಮಾಡಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ರಾಯಭಾರಿ ಲಾನಾ ಝಕಿ ನುಸ್ಸೆಬೆಹ್, ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಅ.7ರ ದಾಳಿಯನ್ನು ನಾವು ಖಂಡಿಸುತ್ತೇವೆ. ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ವಿವೇಚನಾರಹಿತ ದಾಳಿಯನ್ನು ಕೂಡ ನಾವು ಖಂಡಿಸುತ್ತೇವೆ. ಎಲ್ಲಾ ಒತ್ತೆಯಾಳುಗಳನ್ನು ತಕ್ಷಣದ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಬೇಕೆಂದು ನಾವು ಆಗ್ರಹಿಸುತ್ತೇವೆ ಜೊತೆಗೆ ಸುರಕ್ಷತೆ, ಯೋಗಕ್ಷೇಮ ಮತ್ತು ಅಂತರಾಷ್ಟ್ರೀಯ ಕಾನೂನಿಗೆ ಅನುಗುಣವಾಗಿ ಮಾನವೀಯ ನೆರವು ನೀಡುತ್ತೇವೆ ಎಂದು ನುಸ್ಸೆಬೆಹ್ ಹೇಳಿದರು.

ಮಕ್ಕಳನ್ನು ಕೊಲ್ಲುವುದು ಮತ್ತು ಅಂಗವಿಕಲಗೊಳಿಸುವುದು, ಶಾಲೆಗಳು ಮತ್ತು ಆಸ್ಪತ್ರೆಗಳು ಮತ್ತು ಗಾಝಾ ಪಟ್ಟಿಯ ಮೇಲಿನ ದಾಳಿ ನಡೆಸುವುದು, ಮಕ್ಕಳಿಗೆ ಮಾನವೀಯ ಸಹಾಯ ನೀಡುವುದನ್ನು ತಡೆಯುವುದು  ಅತ್ಯಂತ ಗಂಭೀರ ಕಾನೂನುಗಳ ಉಲ್ಲಂಘನೆಗಳಾಗಿವೆ ಎಂದು ಹೇಳಿದ್ದಾರೆ. ಸಭೆಯಲ್ಲಿ ಯುಎನ್ ಅಧಿಕಾರಿಗಳು ಈ ಪ್ರದೇಶದಲ್ಲಿನ ಭೀಕರ ಪರಿಸ್ಥಿತಿಯ ಬಗ್ಗೆ ಭದ್ರತಾ ಮಂಡಳಿಗೆ ವಿವರಿಸಿದ್ದರು.

ಇದನ್ನು ಓದಿ: ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...