Homeಕರ್ನಾಟಕಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ...

ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ ಗುರು!

- Advertisement -
- Advertisement -

ಸೆಪ್ಟೆಂಬರ್ 6ರಂದು ಗದಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ನೀಡಲಾಗಿತ್ತು. ಅದು ನಿವೃತ್ತ ಶಾಲಾ ಶಿಕ್ಷಕರೊಬ್ಬರ ಸಾವಿಗೆ ಗೌರವ ಸಲ್ಲಿಸಲು ಜಿಲ್ಲಾಡಳಿತ ತೆಗೆದುಕೊಂಡ ಸಜ್ಜನಿಕೆಯ ಕ್ರಮವಾಗಿತ್ತು.

‘ಅಣ್ಣಿಗೇರಿ ಮಾಸ್ತರು’ ಎಂದೇ ಗದಗಿನಲ್ಲಿ ಜನಪ್ರಿಯರಾಗಿದ್ದ ಮತ್ತು ಗೌರವಯುತರಾಗಿದ್ದ ಬಸಪ್ಪ ಗುರಪ್ಪ ಅಣ್ಣಿಗೇರಿಯವರು ಸೆಪ್ಟೆಂಬರ್ 5ರಂದು ಶಿಕ್ಷಕ ದಿನಾಚರಣೆಯಂದೇ ನಿಧನರಾಗಿದ್ದು ಕಾಕತಾಳೀಯವೇ ಇರಬಹುದು. ಆದರೆ, ಗದಗಿನಲ್ಲಿ ಅವರೆಂದೂ ಮರೆಯದ ‘ಶಿಕ್ಷಣ ಸಂತ’ ಎಂಬ ಹೆಸರಿನಿಂದ ಸದಾ ಜೀವಂತವಾಗಿರಲಿದ್ದಾರೆ.

ಅವರು ಇಲ್ಲಿ ಸರ್ಕಾರಿ ಶಾಲೆಯ ಮಾಸ್ಟರ್ ಆಗಿದ್ದಾಗ ಆರಂಭಿಸಿದ ಉಚಿತ ಟ್ಯೂಷನ್ ತರಗತಿಗಳನ್ನು ತಮ್ಮ ಕೊನೆಯ ದಿನದವರೆಗೂ ನಡೆಸಿಕೊಂಡು ಬಂದರು. ಅವರ ವಿಶೇಷಾಸಕ್ತಿಯಿಂದ ಪಠ್ಯ ಮತ್ತು ಬದುಕಿನ ಅರಿವು ಪಡೆದ ಸಾವಿರಾರು ಶಿಷ್ಯರು ಇವತ್ತು ದೇಶ-ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಗದಗ ಜಿಲ್ಲೆ ರೋಣ ತಾಲೂಕಿನ ಮುದೇನಗುಡಿ ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿದ ಮಾಸ್ತರರು ಬಡತನದಲ್ಲೇ ಶಿಕ್ಷಣ ಪಡೆದು, ನಂತರ ಧಾರವಾಡದ ಮುರುಘಾಮಠದ ಹಾಸ್ಟೇಲ್ ಸೌಲಭ್ಯದ ಕಾರಣಕ್ಕಾಗಿ ಬಿ.ಎ ಪದವಿ ಮತ್ತು ಶಿಕ್ಷಕ ತರಬೇತಿ ವಿಷಯದಲ್ಲಿ ಪಾಸಾಗುತ್ತಾರೆ. ಗದಗಿನ ಮಾಡೆಲ್ ಹೈಸ್ಕೂಲ್‍ನಲ್ಲಿ ಶಿಕ್ಷಕರಾಗಿ ಸೇವೆ ಆರಂಭಿಸಿದ ಅವರು, ತಮ್ಮ ಸಂಬಳದ ಹಣ ಉಳಿಸಿ ಮುಂಜಾನೆ ಮತ್ತು ಸಂಜೆ ಬಡ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತ ಬಂದರು. ಸಾಯುವವರೆಗೂ ಈ ಕಾಯಕ ಮುಂದುವರೆದೇ ಇತ್ತು.

‘ಅವ್ರ ಬಗ್ಗೆ ಏನ್ ಹೇಳೋದ್ ಬಿಡಿ. ಒಂಥರಾ ನಮಗೆಲ್ಲ ಅವ್ರು ದೇವರೇ’ ಎನ್ನುತ್ತಾರೆ ಅವರ ಬಳಿ ಗಣಿತ, ಇಂಗ್ಲಿಷ್ ಪಾಠಗಳನ್ನು ಕಲಿತ ಪಾಲಿಟೆಕ್ನಿಕ್ ಉಪನ್ಯಾಸಕ ವಕ್ಕಲದ. ಮಂಡ್ಯದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಫೀಕ್ ಕೆರೂರ್ ಹೇಳುತ್ತಾರೆ: ‘ಅವರು ಟ್ಯೂಷನ್ ಹೇಳ್ತಿದ್ದ ವಕಾರ ಜಾಗ ನಮ್ಮ ಮನೆಗೆ ದೂರ ಇದ್ದುದರಿಂದ ನಾನು ಕೇವಲ ಒಂದು ತಿಂಗಳು ಮಾತ್ರ ಅವರ ಹತ್ತಿರ ಮ್ಯಾಥ್ಸ್ ಕಲಿಯಲು ಸಾಧ್ಯವಾಯಿತು. ಆದರೆ, ಗದಗಿನ ಎರಡು-ಮೂರು ತಲೆಮಾರುಗಳ ಶಾಲಾ ವಿದ್ಯಾರ್ಥಿಗಳಲ್ಲಿ ಗಣಿತ ಮತ್ತು ಇಂಗ್ಲಿಷ್ ಜ್ಞಾನ ನೀಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ….’

ಬೆಂಗಳೂರಿನ ಸಾಫ್ಟ್ ವೇರ್ ಕಂಪನಿಯ ಹಿರಿಯ ಉದ್ಯೋಗಿ ಸತೀಶ್ ಕುರಿ, ಹುಬ್ಬಳ್ಳಿಯಲ್ಲಿ ವೈದ್ಯ ವೃತ್ತಿ ಮಾಡುವ ಪರಶುರಾಮ ಕಾಂಬಳೆ…. ಹೀಗೆ ಎಲ್ಲರೂ ಅವರು ಕಲಿಸಿದ ವಿಷಯ ಮತ್ತು ಅದಕ್ಕಿಂತ ಮುಖ್ಯವಾಗಿ ಬದುಕಿನ ಪಾಠಗಳನ್ನು ನೆನೆದು ಗದ್ಗದಿತರಾಗುತ್ತಾರೆ….

ಸಾಮಾನ್ಯ ಶಿಕ್ಷಕರೊಬ್ಬರು ಸಹಜ ಪಾಠ ಮತ್ತು ಜೀವನದ ಮೌಲ್ಯಗಳನ್ನು ನಿರಂತರವಾಗಿ ಕಲಿಸುವ ಮೂಲಕ ಅಸಾಮಾನ್ಯ ಬದುಕನ್ನು ಇಲ್ಲಿ ಸವೆಸಿ ಹೋಗಿದ್ದಾರೆ. ಹಿಂದಿನ ಸಿದ್ದಲಿಂಗ ತೋಂಟದಾರ್ಯ ಸ್ವಾಮೀಜಿ ಅವರಂತೂ ಬಿ.ಜಿ. ಅಣ್ಣಿಗೇರಿಯವರನ್ನು ‘ಶಿಕ್ಷಣ ಸಂತ’ ಎಂದೇ ಕರೆಯುತ್ತಿದ್ದರು. ಮುಂದೆ ಅದೇ ಟೈಟಲ್ಲಿನಲ್ಲಿ ಅಣ್ಣಿಗೇರಿ ಅವರ ಶಿಷ್ಯವೃಂದ ಒಂದು ಅಭಿನಂದನಾ ಗ್ರಂಥವನ್ನು ಪ್ರಕಟಿಸಿತ್ತು. ಅಣ್ಣಿಗೇರಿ ಮಾಸ್ತರು ಹೆಸರಲ್ಲೇ ಅವರ ಕುರಿತಾಗಿಯೇ ಇನ್ನೂ ಮೂರು ಕೃತಿಗಳು ಬಂದಿವೆ ಎಂಬುದನ್ನು ನಾವಿಲ್ಲಿ ಗಮನಿಸಬೇಕು.

ಸಮಾಜ ಕಲಿಸುತ್ತಿದ್ದ ಅಣ್ಣಿಗೇರಿ ಮಾಸ್ತರು ಕ್ರಮೇಣ ಗಣಿತ ವಿಷಯ ಬೋಧನೆಗಾಗಿಯೇ ಗದಗಿನಲ್ಲಿ ಪ್ರಸಿದ್ಧರಾದುದದರ ಹಿಂದೆ ಒಂದು ರೋಚಕ ಅಂಶ ಇದೆ. ಅವರ ಶಿಷ್ಯನೊಬ್ಬ ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಆತನಿಂದ ಹಲವು ತಿಂಗಳು ಕಾಲ ಸರಳ ಗಣಿತ ಕಲಿಕೆಯ ಬಗ್ಗೆ ಪಾಠ ಕಲಿತ ಅವರು, ಕ್ರಮೇಣ ಗದಿನಲ್ಲಿ ಜನಪ್ರಿಯ ಗಣಿತ ಶಿಕ್ಷಕರೆನಿಸಿದರು.
ವಕಾರು ಸಾಲಿನಲ್ಲಿ ಅವರು ಮೂರು ದಶಕಗಳಿಂದ ನಡೆಸುತ್ತ ಬಂದಿರುವ ಶಿಕ್ಷಣ ಆಶ್ರಮಕ್ಕೆ ‘ಗದಗಿನ ಶಾಂತಿನಿಕೇತನ’ ಎಂದೂ ಅವರ ಶಿಷ್ಯರು ಕರೆಯುತ್ತಾರೆ.

ಅವರ ಆಶ್ರಮ ಶಾಲೆಯ ಗೋಡೆಗಳ ಮೇಲಿರುವ ಕೆಲವು ಸಾಲುಗಳು:
‘ಸ್ವಾರ್ಥದಿಂದ ಕೂಡಿದುದು ಅನೈತಿಕ, ಸ್ವಾರ್ಥಶೂನ್ಯವಾದುದು ನೈತಿಕ…’
‘ಪೂರ್ಣತ್ಯಾಗವೇ ಪರಮಾದರ್ಶ, ನಿಸ್ವಾರ್ಥತೆಯೇ ದೇವರು….’
‘ಶಕ್ತಿಯೇ ಜೀವನ, ದುರ್ಬಲತೆಯೇ ಮರಣ…’

ಸಾವೇ ಇಲ್ಲದ ಇಂತಹ ‘ಮಾಸ್ತರು’ಗಳಿಗೆ ನಮ್ಮ ಕಡೆಯಿಂದ ಇದೊಂದು ಶ್ರದ್ಧಾಂಜಲಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...