Homeಮುಖಪುಟಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

ಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

- Advertisement -
- Advertisement -

ಒಬಿಸಿ ವರ್ಗದಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ಒಬಿಸಿ ಮುಖಂಡರು ವಿರೋಧಿಸಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರಗಳನ್ನು ನೀಡುವ ಸರ್ಕಾರದ ಉದ್ದೇಶಿತ ಕ್ರಮವನ್ನು ವಿರೋಧಿಸಲು ಒಬಿಸಿ ನಾಯಕರು ನಿರ್ಧಾರವನ್ನು ತೆಗೆದುಕೊಂಡಿದ್ದು, ನ್ಯಾಯಾಲಯದ ಮೊರೆ ಹೋಗುವುದಾಗಿ ಕೂಡ ಹೇಳಿದ್ದಾರೆ.

ಸರ್ಕಾರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಲು ಮುಂದಿನ 20 ದಿನಗಳಲ್ಲಿ 3 ರ್ಯಾಲಿಗಳನ್ನು ಆಯೋಜಿಸಲು ಒಬಿಸಿ ಸಮುದಾಯದ ನಾಯಕರು ಒಟ್ಟಾಗಿ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಈ ಸಭೆಗಳಲ್ಲಿ ತೇಜಸ್ವಿ ಯಾದವ್ ಸೇರಿದಂತೆ ದೇಶಾದ್ಯಂತದ ವಿವಿಧ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಒಬಿಸಿ ನಾಯಕರು ಭಾಗವಹಿಸುವ ಸಾಧ್ಯತೆಯಿದೆ.

ಮೊದಲ ಸಭೆ ನ 17ರಂದು ಜಲ್ನಾದ ಅಂಬಾಡ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಇದೇ ಸ್ಥಳದಲ್ಲಿ ಮರಾಠ ಮೀಸಲಾತಿ ಪರ ಹೊರಾಟಗಾರ ಮನೋಜ್ ಜಾರಂಗೆ ಪಾಟೀಲ್ ಅವರು ಈ ಹಿಂದೆ ಅಮರಣಾಂತ ಉಪವಾಸ ಕುಳಿತಿದ್ದರು. ನ.26 ರಂದು ಹಿಂಗೋಲಿಯಲ್ಲಿ 2ನೇ ಸಭೆ ಮತ್ತು 3ನೇ ಸಭೆಯನ್ನು ಯವತ್ಮಾಲ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಲವು OBC ನಾಯಕರ ನಿಯೋಗ ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿ ನಾಯಕರಾದ (ಅಜಿತ್ ಪವಾರ್ ಬಣ) ಛಗನ್ ಭುಜಬಲ್ ಅವರನ್ನು ವಿಷಯದ ಕುರಿತು ಚರ್ಚಿಸಲು ಭೇಟಿಯಾಗಿದ್ದರು. ಈ ಹಿಂದೆ ಭುಜಬಲ್ ಅವರು ಒಬಿಸಿಗಳಿಗೆ ಅನ್ಯಾಯವಾಗುವುದನ್ನು ಸಹಿಸುವುದಿಲ್ಲ ಮತ್ತು ಮೌನವಾಗಿರುವುದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಏಕನಾಥ್ ಶಿಂಧೆ ಸರ್ಕಾರವು 2024ರ ಜ.2ರೊಳಗೆ ಮರಾಠರಿಗೆ ಒಬಿಸಿ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಮೀಸಲಾತಿ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದೆ ಮತ್ತು ಅವರನ್ನು ಒಬಿಸಿ ಕುಂಬಿ ವರ್ಗಕ್ಕೆ ಸೇರಿಸುವುದಾಗಿ ಹೇಳಿದೆ. ಈ ಬೆಳವಣಿಗೆಯು ಒಬಿಸಿ ಸಮುದಾಯದ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಮರಾಠರು ಒಬಿಸಿಗಳ ಮೀಸಲಾತಿಯನ್ನು ಕಸಿದುಕೊಳ್ಳುತ್ತಾರೆ ಎಂದು ಆತಂಕದಲ್ಲಿದ್ದಾರೆ.

ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ಅಡಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಮರಾಠರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ.  ಶೀಘ್ರದಲ್ಲೇ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಮತ್ತು ಅಗತ್ಯವಿದ್ದರೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಒಬಿಸಿ ನಾಯಕ ಪ್ರಕಾಶ್ ಶೆಂಡ್ಗೆ ಹೇಳಿದ್ದಾರೆ.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ಶಿಂಧೆ ಆಯೋಗಕ್ಕೆ ಯಾವುದೇ ಸಾಂವಿಧಾನಿಕ ಆಧಾರವಿಲ್ಲ ಎಂದು ಪ್ರಕಾಶ್ ಶೆಂಡ್ಗೆ ಅಭಿಪ್ರಾಯಪಟ್ಟಿದ್ದಾರೆ. ಸಮಿತಿಯು ಯಾರಿಗೂ ಕುಂಬಿ ಪ್ರಮಾಣಪತ್ರಗಳನ್ನು ನೀಡುವ ಸಾಂವಿಧಾನಿಕ ಹಕ್ಕು ಹೊಂದಿಲ್ಲ.  ಆ ಸ್ಥಾನಮಾನ ನೀಡಲು ಅದು ಹಿಂದುಳಿದ ವರ್ಗಗಳ ಆಯೋಗವಲ್ಲ. ಮರಾಠರು ಎಂದಿಗೂ ಹಿಂದುಳಿದಿಲ್ಲ ಮತ್ತು ಇದು ಹಲವಾರು ಬಾರಿ ಸಾಬೀತಾಗಿದೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ತಮ್ಮ ಆಂದೋಲನವನ್ನು ಪ್ರಾರಂಭಿಸಲು ದೀಪಾವಳಿ ಹಬ್ಬಗಳು ಮುಕ್ತಾಯಗೊಳ್ಳಲು ಕಾಯುತ್ತಿದ್ದೇವೆ ಅದರ ನಂತರ ನಾವು ರಾಜ್ಯದಲ್ಲಿ ಒಬಿಸಿ ಜನರ ರ್ಯಾಲಿಗಳನ್ನು ನಡೆಸುತ್ತೇವೆ. ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಜನಸಂಖ್ಯಾ ನಿಯಂತ್ರಣದ ಕುರಿತ ಹೇಳಿಕೆ: ಬಿಹಾರ ಸಿಎಂ ನಿತೀಶ್‌ ಕುಮಾರ್ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...