Homeಮುಖಪುಟಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

ಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

- Advertisement -
- Advertisement -

61 ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದಿದ್ದಕ್ಕಾಗಿ ಬೆಂಗಳೂರು ಪೊಲೀಸರಿಂದ ಬಂಧಿಸಲ್ಪಟ್ಟಿರುವ ಶಿವಾಜಿ ರಾವ್ ಜಾಧವ್ ವಿಡಿ ಸಾವರ್ಕರ್ ಬಗೆಗಿನ ಪುಸ್ತಕ ಸೇರಿದಂತೆ ಬಲಪಂಥೀಯ ರಾಷ್ಟ್ರೀಯವಾದದ ಬಗ್ಗೆ ಓದುತ್ತಿದ್ದ ಎನ್ನವುದು ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿರುವ ಬಗ್ಗೆ ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ಸಹಿಷ್ಣ ಹಿಂದೂ ಎಂಬ ಹೆಸರಿನಲ್ಲಿ ಅನಾಮಧೇಯ ಪತ್ರಗಳನ್ನು ಬರೆಯುತ್ತಿದ್ದ ಜಾಧವ್‌ನ ನಿಕಟ ಜಾಲವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಪೊಲೀಸರು ಆತನ ಸಂಪರ್ಕದಲ್ಲಿದ್ದ ಜನರ ಬಗ್ಗೆ ತನಿಖೆ ಮಾಡುತ್ತಿದ್ದು ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಿದ್ದಾರೆ.

ಜಾಧವ್ 8ನೇ ತರಗತಿಗೆ ಶಾಲೆಯನ್ನು ಬಿಟ್ಟಿದ್ದು, ದಾವಣಗೆರೆಯಲ್ಲಿ ಮುದ್ರಣಾಲಯದಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಮುದ್ರಣಾಲಯದಲ್ಲಿ ಮುದ್ರಿಸಲ್ಪಟ್ಟ ಸಾಹಿತ್ಯವನ್ನು ಓದುವ ಮೂಲಕ ಬಲಪಂಥೀಯ ಸಿದ್ಧಾಂತದಿಂದ ಪ್ರಭಾವಿತನಾಗಿದ್ದ.

ಸೆ.30ರಂದು ಜಾಧವ್‌ನನ್ನು ಬಂಧಿಸಿದ ನಂತರ ಪೊಲೀಸರು ದಾವಣಗೆರೆಯ ಆತನ ನಿವಾಸದಲ್ಲಿ ಶೋಧ ನಡೆಸಿದ್ದು, ಕರಪತ್ರಗಳು ಮತ್ತು ಆತ ಓದುತ್ತಿದ್ದ ಪುಸ್ತಕಗಳನ್ನು ವಶಪಡಿಸಿಕೊಂಡಿದ್ದಾರೆ. ಆತ ಯಾರ ಜೊತೆ ಸಂಪರ್ಕ ಹೊಂದಿದ್ದ? ಏನು ಮಾತನಾಡುತ್ತಿದ್ದ ಬಗ್ಗೆ ಪೊಲೀಸರು ತನಿಖೆ ನಡೆಸಲು ಮೊಬೈಲ್‌ನ್ನು ವಶಪಡಿಸಿಕೊಂಡಿದ್ದರು.

ಈ ವೇಳೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 13ನೇ ಆರೋಪಿಯಾಗಿರುವ ಸುಜಿತ್ ಕುಮಾರ್ ನಡುವೆ ಈತನಿಗೆ ಸಂಪರ್ಕ ಇರುವುದು ಬಯಲಾಗಿದೆ. ಸುಜಿತ್ ಸನಾತನ ಸಂಸ್ಥೆ ಮತ್ತು ಇತರ ಹಿಂದುತ್ವದ ಗುಂಪುಗಳಿಗೆ ಹಿಂದುತ್ವದ ಬಗ್ಗೆ ಒಲವು ಇರುವ ಮತ್ತು ಅಪರಾಧಗಳನ್ನು ಮಾಡುವ ಸಾಮರ್ಥ್ಯವಿರುವ ಯುವಕರನ್ನು ಗುರುತಿಸುತ್ತಿದ್ದ. ಬಳಿಕ  ಅವರನ್ನು ಬ್ರೈನ್‌ ವಾಶ್‌ ಮಾಡಿ ಗ್ಯಾಂಗ್‌ಗೆ ಸೇರಿಸಿಕೊಳ್ಳುತ್ತಿದ್ದ.

ಸುಜಿತ್ ಕುಮಾರ್ ಜಾದವ್‌ಗೆ ಪರಿಚಿತನಾಗಿದ್ದ. ಜಾದವ್‌ನನ್ನು ಸುಜಿತ್‌ ಬೇರೆ ಬೇರೆ ಸಂದರ್ಭಗಳಲ್ಲಿ ಭೇಟಿಯಾಗಿದ್ದ. ಸುಜಿತ್‌ಗೆ ಭೇಟಿಯಾಗುವ ಮುನ್ನ ಜಾದವ್ ಎರಡು ಮೂರು ಬೆದರಿಕೆ ಪತ್ರಗಳನ್ನು ಬರೆದಿದ್ದ. ಆದರೆ ಅದು ಕಠೋರವಾಗಿರಲಿಲ್ಲ. ಆದರೆ ಸುಜಿತ್‌ಗೆ ಭೇಟಿ ಬಳಿಕ ಜಾಧವ್ ಬರೆದ ಪತ್ರಗಳು ಕಠೋರವಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಧವ್ ದಾವಣಗೆರೆಯ ತನ್ನ ಮನೆಯ ಸಮೀಪದಲ್ಲಿರುವ ಲೈಬ್ರರಿಯಲ್ಲಿ ಎಲ್ಲಾ ದಿನಪತ್ರಿಕೆಗಳನ್ನು ಓದುತ್ತಿದ್ದ. ನಂತರ ಅವನು ಹಿಂದುತ್ವವನ್ನು ವಿರೋಧಿಸುವ ಬರಹಗಾರರು ಮತ್ತು ಬುದ್ಧಿಜೀವಿಗಳ ಪಟ್ಟಿಯನ್ನು ಮಾಡಿದ್ದ. ಬಳಿಕ ಅವರು ಬರೆದ ಪುಸ್ತಕಗಳನ್ನು ಸಂಗ್ರಹಿಸಿ ಪುಸ್ತಕದಿಂದ ಅವರ ವಿಳಾಸವನ್ನು ಸಂಗ್ರಹಿಸಿದ್ದಾನೆ. ಪತ್ರ ಬರೆದ ಬಳಿಕ ಪತ್ರಿಕೆಯಲ್ಲಿ ವರದಿಯಾಗಿದೆಯಾ ಎಂದು ಕೂಡ ಪರಿಶೀಲಿಸಿ ತನ್ನ ಬೆದರಿಕೆ ಪತ್ರಗಳ ಬಗ್ಗೆ ಬರೆದ ಕಟ್ಟಿಂಗ್‌ಗಳನ್ನು ತೆಗೆದಿಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಜಾಧವ್ ದಾವಣಗೆರೆಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಯಾಗಿದ್ದಾನೆ. ಶಿವಮೊಗ್ಗದಲ್ಲಿ ಹತ್ಯೆಯಾದ ಭಜರಂಗದಳದ ಕಾರ್ಯಕರ್ತ ಹರ್ಷನ ಬಗ್ಗೆ ಹಲವು ಪ್ರತಿಭಟನೆ ಸಭೆ ಆಯೋಜಿಸಿದ್ದ. ಕರ್ನಾಟಕದಲ್ಲಿ ಹಿಜಾಬ್ ಮತ್ತು ಹಲಾಲ್ ವಿವಾದದ ವೇಳೆ ಮಾತನಾಡಿದ್ದ. ಈ ವೇಳೆ ದಾವಣಗೆರೆ ಪೊಲೀಸರು ಜಾಧವ್ ವಿರುದ್ಧ ಐಪಿಸಿ ಸೆಕ್ಷನ್ 107ರ ಅಡಿಯಲ್ಲಿ ಶಾಂತಿ ಭಂಗ ಅಥವಾ ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಸಿದ್ದರು.

ಏ.2022ರಿಂದ ಹಿಂದುತ್ವದ ವಿರುದ್ಧ ಮಾತನಾಡಿದ ಸುಮಾರು 6 ಪ್ರಗತಿಪರ ಬರಹಗಾರರು ಮತ್ತು ಚಿಂತಕರಿಗೆ ಜಾಧವ್ ನಿಯಮಿತವಾಗಿ ಪತ್ರವನ್ನು ಬರೆದಿದ್ದಾನೆ. ಖ್ಯಾತ ಸಾಹಿತಿಗಳಾದ ಕೆ ಮರುಳಸಿದ್ದಪ್ಪ, ಲೇಖಕ ಕುಂ ವೀರಭದ್ರಪ್ಪ, ಬಿಎಲ್ ವೇಣು, ಬರಗೂರು ರಾಮಚಂದ್ರಪ್ಪ, ಬಂಜಗೆರೆ ಜಯಪ್ರಕಾಶ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಸೇರಿದಂತೆ 61 ಮಂದಿಗೆ ಪತ್ರ ಬರೆದಿದ್ದಾನೆ.

ಪತ್ರದಲ್ಲಿ ಜಾಧವ್, ಸಾಹಿತಿಗಳಿಗೆ ದೇಶದ್ರೋಹಿ, ರಾಷ್ಟ್ರವಿರೋಧಿ ಮತ್ತು ಹಿಂದೂ ವಿರೋಧಿ ಎಂದು ಕರೆದಿದ್ದಾನೆ. ಪತ್ರಗಳು ಸಾಮಾನ್ಯವಾಗಿ ಸಾರ್ವಜನಿಕ ಕ್ಷಮೆಯಾಚನೆಯೊಂದಿಗೆ ಕೊನೆಗೊಳ್ಳುತ್ತವೆ. ಬರಹಗಾರರು ತಮ್ಮ ನಿಲುವನ್ನು ಬದಲಾಯಿಸದಿದ್ದರೆ ಅವರು ಯಾವುದೇ ರೂಪದಲ್ಲಿ ಸಾವಿಗೆ ಸಿದ್ಧರಾಗಬೇಕು, ಅದು ಶೀಘ್ರದಲ್ಲೇ ಬರಲಿದೆ ಎಂದು ಪತ್ರದಲ್ಲಿ ಕೊನೆಗೆ ಉಲ್ಲೇಖಿಸಲಾಗುತ್ತಿತ್ತು.

ಪತ್ರಗಳನ್ನು ಸ್ವೀಕರಿಸಿದವರು ಒಟ್ಟು 7 ದೂರುಗಳನ್ನು ಸಲ್ಲಿಸಿದ್ದರು. ಆದರೆ ಸಿಎಂ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಪತ್ರ ಬರೆದವರನ್ನು ಪತ್ತೆ ಹಚ್ಚಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದರು.

ಆ.22, 2023ರಂದು, ಬರಹಗಾರರ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕ್ರಮಕ್ಕೆ ಆಗ್ರಹಿಸಿದೆ. ನಂತರ ಪ್ರಕರಣವನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಪೋಸ್ಟಲ್‌ ಸ್ಟಾಂಪ್‌ನ ಆಧಾರದಲ್ಲಿ ಮತ್ತು ಅಂಚೆ ಕಚೇರಿ ಬಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಜಾದವ್‌ ಬಂಧನ ನಡೆದಿದೆ.

ಇದನ್ನು ಓದಿ: ಕೇರಳ: ಇಡಿಯಿಂದ ಕಾಂಗ್ರೆಸ್‌ ನಾಯಕ ಕೆ.ಕೆ.ಅಬ್ರಹಾಂ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...