Homeಕರ್ನಾಟಕನ. 20ರಿಂದ 'ಶಂಕರ್‌ನಾಗ್ ನಾಟಕೋತ್ಸವ' ಆರಂಭ

ನ. 20ರಿಂದ ‘ಶಂಕರ್‌ನಾಗ್ ನಾಟಕೋತ್ಸವ’ ಆರಂಭ

- Advertisement -
- Advertisement -

ಸಾಮಾಜಿಕ ವಿಚಾರಗಳನ್ನು ಇಟ್ಟುಕೊಂಡು ಹೊಸಹೊಸ ಪ್ರಯೋಗಗಳನ್ನು ನಡೆಸುವ ರಂಗಪಯಣ ತಂಡವು ಪ್ರತಿ ವರ್ಷದಂತೆ ಈ ವರ್ಷವೂ ‘ಶಂಕರ್‌ನಾಗ್ ನಾಟಕೋತ್ಸವ’ ಕಾರ್ಯಕ್ರಮ ನಡೆಸುತ್ತಿದೆ. ಈ ಉತ್ಸವವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದು, ಕಲಾಪ್ರೇಮಿಗಳು ಭಾಗಿಯಾಗಿ ರಂಗಭೂಮಿಗೆ ಜೀವ ತು೦ಬಬೇಕು ಎಂದು ರಂಗಪಯಣ ತಂಡ ಮನವಿ ಮಾಡಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ರಂಗಪಯಣ ತಂಡ, ”ಕನ್ನಡ ರಂಗಭೂಮಿಯಲ್ಲಿ ಇಲ್ಲಿನ ತನಕ ಸತತ 14 ವರ್ಷಗಳಿಂದ ನಡೆದಾಡುವ ರಂಗಭೂಮಿಯಾಗಿ ಸದಾ ಚಾಲ್ತಿಯಲ್ಲಿದೆ. ಸದಾ ಹೊಸ ಹೊಸ ಪಯೋಗಗಳ ಮೂಲಕ ಇಲ್ಲಿಯ ತನಕ 15 ನಾಟಕಗಳನ್ನು ಕಟ್ಟಿದ್ದು, 1500ಕ್ಕೂ ಹೆಚ್ಚು ಪುಯೋಗಗಳನ್ನು ಕಂಡಿದೆ” ಎಂದು ತಿಳಿಸಿದ್ದಾರೆ.

”ನಮ್ಮ ಮಧ್ಯೆ ನಡೆಯುವ ಮತ್ತು ನಡೆಯುತ್ತಿರುವ ಹಲವು ಘಟನೆಗಳ ವಿಚಾರಗಳನ್ನು ಹುಡುಕಿ ತೆಗೆದು ಸಾಮಾಜಿಕ ವಿಚಾರಗಳನ್ನೇ ನಾಟಕವನ್ನಾಗಿ “ರಂಗಪಯಣ” ಕಟ್ಟಿದ್ದು, ಈ ತಂಡದ ಯಶಸ್ವಿ ಉತ್ಸವ ಎಂದರೆ ಅದು ಶಂಕರ್‌ನಾಗ್ ನಾಟಕೋತ್ಸವ” ಎಂದು ಹೇಳಿದ್ದಾರೆ.

”ಶಂಕರ್‌ನಾಗ್ ಎಂಬ ಚೇತನ ಉತ್ಸಾಹದ ಚಿಲುಮೆ ರಂಗಭೂಮಿ ಮತ್ತು ಚಿತ್ರರಂಗದಲ್ಲಿ ಹಲವಾರು ಕನಸುಗಳನ್ನು ಕಂಡ ಶಕ್ತಿ ಅಂತಹ ಎಷ್ಟೋ ಕನಸುಗಳು ಇಂದಿನ ಯುವಕ ಮಿತ್ರರಿಗೆ ತಲುಪಲಿ ರಂಗಭೂಮಿ ಜೀವಂತಿಕೆಯ ನೆಲದ ಕಡೆ ಆಕರ್ಷಿತರಾಗಲಿ ಎಂಬ ಉದ್ದೇಶದಿಂದ ಈ ಶಂಕರ್‌ನಾಗ್ ರಂಗೋತ್ಸವ ಕಾರ್ಯಕ್ರಮ ಆರಂಭಿಸಲಾಯಿತು. ಸತತ 5 ವರ್ಷ ಯಶಸ್ವಿಯಾಗಿ ಈ ಉತ್ಸವ ನಡೆಸಿಕೊಂಡು ಬಂದಿದ್ದು, ಆರನೇ ವರ್ಷಕ್ಕೆ ಕಾಲಿಟ್ಟಿದೆ” ಎಂದು ಹೇಳಿದ್ದಾರೆ.

”ತಂಡದ ನಾಯಕಿಯಾದ ನಯನಸೂಡರ ನಿರ್ದೇಶನದಲ್ಲಿ ಪ್ರತಿವರ್ಷ ಈ ಉತ್ಸವ ನಡೆಯುತ್ತದೆ. ಸರ್ಕಾರದಿಂದ ಯಾವುದೇ ಸಹಾಯ ಪಡೆಯದೆ ನಡೆಯುವ ಈ ಉತ್ಸವ ಜನರ, ರಂಗಹಿರಿಯರ, ರಂಗತಂಡಗಳ ಕಲಾಭಿಮಾನಿಗಳ ಸಹಕಾರದಿಂದ ನಡೆಯುತ್ತಾ ಬಂದಿದ್ದು, ಈಗ ಆರನೇ ವರ್ಷಕ್ಕೆ ಕಾಲಿಡುತ್ತಿದೆ. ಇದೇ ನವೆಂಬರ್ 20ರಂದು  ನಾಟಕೋತ್ಸವ ಆರಂಭವಾಗಿ 24ಕ್ಕೆ ಮುಕ್ತಾಯಗೊಳ್ಳಲಿದೆ. ಈ ಉತ್ಸವದಲ್ಲಿ ತಾವು ಸಾಕ್ಷಿಯಾಗಬೇಕು” ಎಂದು ರಂಗಪಯಣ ತಂಡ ಮನವಿ ಮಾಡಿದೆ.

ನಾಟಕಗಳ ವಿವರ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...