Homeಮುಖಪುಟಬಿಹಾರ: ಮೀಸಲಾತಿ ಪ್ರಮಾಣ 50% ರಿಂದ 65%ಕ್ಕೆ ಹೆಚ್ಚಿಸಿ ಮಸೂದೆ ಅಂಗಿಕಾರ

ಬಿಹಾರ: ಮೀಸಲಾತಿ ಪ್ರಮಾಣ 50% ರಿಂದ 65%ಕ್ಕೆ ಹೆಚ್ಚಿಸಿ ಮಸೂದೆ ಅಂಗಿಕಾರ

- Advertisement -
- Advertisement -

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಜಾತಿ ಆಧಾರಿತ ಮೀಸಲಾತಿಯನ್ನು 50% ರಿಂದ 65% ಕ್ಕೆ ಹೆಚ್ಚಿಸುವ ಮಸೂದೆಯನ್ನು ಬಿಹಾರ ವಿಧಾನಸಭೆ ಗುರುವಾರ ಸರ್ವಾನುಮತದಿಂದ ಅಂಗೀಕರಿಸಿದೆ, ಇದು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಿತಿಯನ್ನು ದಾಟಿದೆ. ಈಗ ಮಸೂದೆ ಕಾನೂನಾಗಲು ರಾಜ್ಯಪಾಲರ ಒಪ್ಪಿಗೆ ಬೇಕಾಗಿದೆ.

ವಿಧಾನಸಭೆಯಲ್ಲಿ ಜಾತಿ ಗಣತಿ ಕುರಿತು ಸಂಪೂರ್ಣ ವರದಿಯನ್ನು ಬಿಡುಗಡೆ ಮಾಡಿದ ನಂತರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹೆಚ್ಚಳವನ್ನು ಪ್ರಸ್ತಾಪಿಸಿದ ಮೂರು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ಮಸೂದೆಯ ಅಡಿಯಲ್ಲಿ, ಪರಿಶಿಷ್ಟ ಜಾತಿಗಳಿಗೆ 16% ರಿಂದ 20% ಮೀಸಲಾತಿ ಸಿಗುತ್ತದೆ, ಪರಿಶಿಷ್ಟ ಪಂಗಡಗಳ ಕೋಟಾವನ್ನು 1% ರಿಂದ 2% ಕ್ಕೆ ದ್ವಿಗುಣಗೊಳಿಸಲಾಗಿದೆ. ಇತರೆ ಹಿಂದುಳಿದ ವರ್ಗಗಳಿಗೆ 12% ರಿಂದ 15% ಮೀಸಲಾತಿ ಸಿಗುತ್ತದೆ. ಅತ್ಯಂತ ಹಿಂದುಳಿದ ವರ್ಗಗಳಿಗೆ, ಕೋಟಾವನ್ನು 18% ರಿಂದ 25% ಕ್ಕೆ ಏರಿಸಲಾಗುತ್ತದೆ ಎಂದು PTI ವರದಿ ಮಾಡಿದೆ.

ಇನ್ನೂ 10% ಆರ್ಥಿಕವಾಗಿ ದುರ್ಬಲ ವರ್ಗಗಳ ಕೋಟಾವು ವಿಭಿನ್ನ ಕಾಯಿದೆಯಡಿಯಲ್ಲಿ ಪರಿಣಾಮಕಾರಿಯಾಗಿರುವುದರಿಂದ, ಅದು ಪ್ರಸ್ತುತ ಮಸೂದೆಯ ಭಾಗವಾಗಿರುವುದಿಲ್ಲ ಎಂದು ಸರ್ಕಾರ ವಿವರಿಸಿದೆ. 10% ಮೀಸಲಾತಿಯೊಂದಿಗೆ, ರಾಜ್ಯದಲ್ಲಿ ಒಟ್ಟು ಕೋಟಾ ಮಿತಿಯು ಈಗ 75% ಕ್ಕೆ ಹೆಚ್ಚಾಗುತ್ತದೆ.

1992ರಲ್ಲಿ ಸುಪ್ರೀಂ ಕೋರ್ಟ್ ಒಟ್ಟು ಜಾತಿ ಆಧಾರಿತ ಮೀಸಲಾತಿಗೆ ನಿಗದಿಪಡಿಸಿದ 50% ಮಿತಿಯನ್ನು ಇದು ಮೀರರುತ್ತದೆ.

ಮಸೂದೆಯ ಮೇಲಿನ ಚರ್ಚೆಯ ನಂತರ ಮಾತನಾಡಿದ ಕುಮಾರ್, ”ಮೀಸಲಾತಿಯನ್ನು ವಿಸ್ತರಿಸಲು ನಿರ್ಧರಿಸುವ ಮೊದಲು ಬಿಹಾರ ಎಲ್ಲಾ ಸತ್ಯಗಳನ್ನು ತಿಳಿದುಕೊಳ್ಳಲು ವಿವರವಾದ ಕೆಲಸವನ್ನು ಮಾಡಿದೆ” ಎಂದು ಹೇಳಿದರು.

”ಕೋಟಾ ಹೆಚ್ಚಳವು ಒಬಿಸಿಗಳು ಮತ್ತು ಇಬಿಸಿಗಳು ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿನ ಪಾಲನ್ನು ಹೊಂದಲು ಅನುವು ಮಾಡಿಕೊಡುತ್ತದೆ” ಎಂದು ಮುಖ್ಯಮಂತ್ರಿ ಹೇಳಿದರು.

”ತಮ್ಮ ಜಾತಿ ಸಂಖ್ಯೆ ಕಡಿಮೆಯಾಗಿದೆ ಅಥವಾ ಕೆಲವು ಜಾತಿಗಳು ಅಂಕಿಅಂಶಗಳನ್ನು ಹೆಚ್ಚಿಸಿವೆ ಎಂದು ಹೇಳುವವರು ಕಸದ ಮಾತುಗಳನ್ನಾಡುತ್ತಿದ್ದಾರೆ. 1931ರ ನಂತರ ಇದು ಮೊದಲ ಜಾತಿ ಸಮೀಕ್ಷೆಯಾಗಿದೆ. ಯಾವುದೇ ಅಧ್ಯಯನವಿಲ್ಲದೆ ಅವರು ತಮ್ಮ ಸಂಖ್ಯೆಯನ್ನು ಹೇಗೆ ತಿಳಿಯುತ್ತಾರೆ?” ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿಯು ಈ ಕೋಟಾ ಹೆಚ್ಚಳದ ನಿರ್ಧಾರಕ್ಕೆ ಗುರುವಾರ ತನ್ನ ಬೆಂಬಲವನ್ನು ನೀಡಿತು.

ಬಿಹಾರದಲ್ಲಿ ಮೀಸಲಾತಿ ಮಿತಿ ಹೆಚ್ಚಳಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಿದೆ. ಮೀಸಲಾತಿಗಾಗಿ ಯಾವುದೇ ಪಕ್ಷಕ್ಕಾಗಲಿ ಬಿಜೆಪಿಯು ಯಾವಾಗಲೂ ಬೆಂಬಲ ನೀಡುತ್ತದೆ ಎಂದು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಸಾಮ್ರಾಟ್ ಚೌಧರಿ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಬಡತನದಲ್ಲಿರುವ 94 ಲಕ್ಷಕ್ಕೂ ಹೆಚ್ಚು ಕುಟುಂಬಗಳು: ಜಾತಿಗಣತಿಯಲ್ಲಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....