Homeಕರ್ನಾಟಕ545 ಪಿಎಸ್‌ಐ ನೇಮಕಾತಿ ಹಗರಣ: ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ

545 ಪಿಎಸ್‌ಐ ನೇಮಕಾತಿ ಹಗರಣ: ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ

- Advertisement -
- Advertisement -

545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್‌ ತನ್ನ ಮಹತ್ವದ ತೀರ್ಪು ಪ್ರಕಟಿಸಿದ್ದು, ಮರು ಪರೀಕ್ಷೆ ನಡೆಸಲು ಆದೇಶಿಸಿದೆ.

545 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಪರೀಕ್ಷೆ ಹಗರಣ ಹಿನ್ನೆಲೆಯಲ್ಲಿ, ಈ ಮೊದಲೇ ಲಿಖಿತ ಪರೀಕ್ಷೆ, ಆಯ್ಕೆಪಟ್ಟಿಯನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸುವುದಾಗಿ ಹಿಂದಿನ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇದನ್ನು ಪ್ರಶ್ನಿಸಿ 269 ಅಭ್ಯರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇವರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಇಂದು ತೀರ್ಪು ನೀಡಿದೆ. ಈ ಮೂಲಕ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಭ್ಯರ್ಥಿಗಳಿಗೆ ಹಿನ್ನೆಡೆಯಾಗಿದೆ.

ಸರಕಾರದ ಆದೇಶ ರದ್ದು ಕೋರಿ ಎನ್.ವಿ. ಚಂದನ್ ಸೇರಿದಂತೆ ಆಯ್ಕೆಪಟ್ಟಿಯಲ್ಲಿ ಹೆಸರಿದ್ದ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ಕಾಯ್ದಿರಿಸಿರುವ ತೀರ್ಪುನ್ನು ನ್ಯಾಯಮೂರ್ತಿಗಳಾದ ಪಿ.ಎಸ್. ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ, ಶುಕ್ರವಾರ ಪ್ರಕಟಿಸಿತು.

ರಾಜ್ಯ ಸರಕಾರವು ನ್ಯಾಯಯುತ ಮತ್ತು ಪಾರದರ್ಶಕ ಮರು ಪರೀಕ್ಷೆ ನಡೆಸುವುದನ್ನು ಖಾತರಿಪಡಿಸಲು ಸ್ವತಂತ್ರ ಸಂಸ್ಥೆಯಿಂದ ಹೊಸದಾಗಿ ಲಿಖಿತ ಪರೀಕ್ಷೆ ನಡೆಸುವ ಜವಾಬ್ದಾರಿ ವಹಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಪರೀಕ್ಷೆ, ಆಯ್ಕೆಪಟ್ಟಿ ಎಲ್ಲವನ್ನು ರದ್ದುಪಡಿಸಿದ್ದನ್ನು ಪ್ರಶ್ನಿಸಿ 269 ಅಭ್ಯರ್ಥಿಗಳು ಕೆಎಸ್‌ಸಿ ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲದೇ ಮರು ಪರೀಕ್ಷೆಗೆ ವಿರೋಧ ವ್ಯಕ್ತಪಡಿಸಿದ್ದರು. ಅಕ್ರಮ ಎಸಗಿದವರನ್ನು ಹೊರತುಪಡಿಸಿ, ಉಳಿದವರನ್ನು ನೇಮಕಾತಿ ಪಟ್ಟಿಗೆ ಪರಿಗಣಿಸಿ ಎಂದಿದ್ದರು. ಇವರ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಉಚ್ಚನ್ಯಾಯಾಲಯವು ಮರು ಪರೀಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ನಂತರ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಲಾಗಿತ್ತು.

ಇಂದು ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠವು ತೀರ್ಪು ನೀಡಿದೆ. ಈ ಆದೇಶದ ಆಧಾರದಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯು ಮರು ಪರೀಕ್ಷೆಯನ್ನು ಯಾವಾಗ ನಡೆಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ ಪಿಎಸ್‌ಐ ಹಗರಣದ ಆರೋಪಿ ರುದ್ರಗೌಡ ಪಾಟಿಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...