Homeಮುಖಪುಟಇಸ್ರೇಲ್ ಮಿಲಿಟರಿಯಿಂದ ಆಸ್ಪತ್ರೆಗಳ ಮೇಲೆ ದಾಳಿ: ಗಾಜಾ ಅಧಿಕಾರಿಗಳು

ಇಸ್ರೇಲ್ ಮಿಲಿಟರಿಯಿಂದ ಆಸ್ಪತ್ರೆಗಳ ಮೇಲೆ ದಾಳಿ: ಗಾಜಾ ಅಧಿಕಾರಿಗಳು

- Advertisement -
- Advertisement -

ಇಸ್ರೇಲ್ ಕನಿಷ್ಠ ಮೂರು ಆಸ್ಪತ್ರೆಗಳ ಮೇಲೆ ಅಥವಾ ಅದರ ಸಮೀಪ ವೈಮಾನಿಕ ದಾಳಿ ನಡೆಸಿತು ಎಂದು ಪ್ಯಾಲೆಸ್ತೀನ್ ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

”ಏಕಕಾಲದಲ್ಲಿಯೇ ಇಸ್ರೇಲಿ ಮಿಲಿಟರಿ ಹಲವಾರು ಆಸ್ಪತ್ರೆಗಳ ಮೇಲೆ ದಾಳಿ ಪ್ರಾರಂಭಿಸಿತು” ಎಂದು ಗಾಜಾ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕಿದ್ರಾ ಅಲ್ ಜಜೀರಾಗೆ ತಿಳಿಸಿದರು.

ಗಾಜಾ ನಗರದ ಅತಿದೊಡ್ಡ ಆಸ್ಪತ್ರೆಯಾದ ಅಲ್ ಶಿಫಾ ಅಂಗಳದ ಮೇಲೆ ವೈಮಾನಿಕ ದಾಳಿ ನಡೆಸಲಾಯಿತು. ಅಲ್ ಶಿಫಾ ಆಸ್ಪತ್ರೆಯ ಕೆಳಗೆ ಹಮಾಸ್ ಕಮಾಂಡ್ ಸೆಂಟರ್‌ಗಳು ಮತ್ತು ಸುರಂಗಗಳನ್ನು ಹೊಂದಿದೆ ಎಂದು ಇಸ್ರೇಲ್ ಹೇಳಿದೆ. ಅಲ್-ರಾಂಟಿಸಿ ಪೀಡಿಯಾಟ್ರಿಕ್ ಆಸ್ಪತ್ರೆ ಮತ್ತು ಅಲ್-ನಾಸ್ರ್ ಮಕ್ಕಳ ಆಸ್ಪತ್ರೆಯನ್ನೂ ಇಸ್ರೇಲ್ ಗುರಿಯಾಗಿಸಿದೆ.

ಇಸ್ರೇಲ್ ಕದನ ವಿರಾಮವನ್ನು ಒಪ್ಪಿಕೊಂಡಿಲ್ಲ ಆದರೆ ಮಾನವೀಯ ನೆರವು ನೀಡಲು ಗಾಜಾದಲ್ಲಿ ತನ್ನ ಸಶಸ್ತ್ರ ಕಾರ್ಯಾಚರಣೆಗಳಲ್ಲಿ ನಾಲ್ಕು ಗಂಟೆಗಳ ಸ್ಥಳೀಯ ವಿರಾಮಗಳನ್ನು ಅನುಮತಿಸುತ್ತದೆ ಎಂದು ದೇಶದ ಮಿಲಿಟರಿ ಗುರುವಾರ ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಪ್ಯಾಲೆಸ್ತೀನ್‌ನ ಹಮಾಸ್ ಸಶಸ್ತ್ರ ಗುಂಪನ್ನು ಹತ್ತಿಕ್ಕಲು ಇಸ್ರೇಲಿ ಮಿಲಿಟರಿ ಗಾಜಾ ನಗರವನ್ನು ಸುತ್ತುವರಿಯುತ್ತಿದ್ದಂತೆ ಇದು ಸಂಭವಿಸುತ್ತದೆ. ಪ್ರತಿ ದಿನ ಮೂರು ಗಂಟೆಗಳ ಕಾಲ ನಾಗರಿಕರು ಸುರಕ್ಷಿತ ಮಾರ್ಗಗಳಲ್ಲಿ ಓಡಾಡಬಹುದು ಎಂದು ಇಸ್ರೇಲಿ ಮಿಲಿಟರಿ ಹೇಳಿದೆ.

ಫೆಲೆಸ್ತೀನಿಯರು ದಕ್ಷಿಣ ಗಾಜಾಕ್ಕೆ ಪಲಾಯನ ಮಾಡಲು ಎರಡು ಮಾನವೀಯ ಕಾರಿಡಾರ್‌ಗಳಿವೆ ಎಂದು ಯುನೈಟೆಡ್ ಸ್ಟೇಟ್ಸ್ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ ಗುರುವಾರ ಹೇಳಿದ್ದಾರೆ.

ಯುದ್ಧದ ನಂತರ ಗಾಜಾವನ್ನು ವಶಪಡಿಸಿಕೊಳ್ಳಲು, ಅಥವಾ ಆಡಳಿತ ನಡೆಸಲುನಾವು ಪ್ರಯತ್ನಿಸುವುದಿಲ್ಲ ಎಂದು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ ಹೇಳಿದ್ದಾರೆ.

ಅಕ್ಟೋಬರ್ 7 ರಿಂದ ಪ್ಯಾಲೇಸ್ಟಿನಿಯನ್‌ನ 4,412 ಮಕ್ಕಳು ಸೇರಿದಂತೆ 10,812 ಸಾವಿಗೀಡಾಗಿದ್ದಾರೆ. ಗಾಜಾ ಅಲ್ಲದೆ, ಅಕ್ಟೋಬರ್ 7 ರಿಂದ ಇಸ್ರೇಲಿ ಮಿಲಿಟರಿ ವೆಸ್ಟ್ ಬ್ಯಾಂಕ್ ಪ್ರದೇಶದಲ್ಲಿ ಕನಿಷ್ಠ 182 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ.

ಇದನ್ನೂ ಓದಿ: ಗಾಜಾ ದಾಳಿಗೆ ತಾತ್ಕಾಲಿಕ ವಿರಾಮ, ಕದನ ವಿರಾಮ ಇಲ್ಲ ಎಂದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...