Homeಎಕಾನಮಿಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

ಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಸರ್ಕಾರಕ್ಕೆ ಈಗ 100 ದಿನಗಳು ತುಂಬಿವೆ. ಇಲ್ಲಿ ಜನಸಾಮಾನ್ಯರ ಜೀವನ ದುರ್ಗತಿಗೆ ತಲುಪಿದ್ದರೂ ‘ಎಲ್ಲವನ್ನೂ’ ಶೇರು ಮಾರುಕಟ್ಟೆಯ ಆಧಾರದಲ್ಲಿ ಲೆಕ್ಕ ತೋರಿಸುವ ಸಮರ್ಥಕರಿಗೆ ಗೊತ್ತಿರಲಿ, ಈ ನೂರು ದಿನದಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂ ಸಹ ಹಳ್ಳ ಹಿಡಿದಿದೆ ಎಂಬ ಸತ್ಯ…..

ಮಾಧ್ಯಮಗಳ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಈ ಎರಡನೇ ಅವಧಿಯ ನೂರು ದಿನಗಳಲ್ಲಿ ಅದ್ಹೇಗೋ ಮಿಂಚುತ್ತ ಬಂದಿರಬಹುದು. ಆದರೆ ಶೇರು ಮಾರುಕಟ್ಟೆಯ ‘ದಲಾಲ್ ಸ್ಟ್ರೀಟ್’ ಅಂತೂ ಆತಂಕಗೊಂಡಿದೆ.

ಎನ್‍ಡಿಎ ಎರಡನೇ ಬಾರಿ ಗೆದ್ದಾಗ ‘ಫೀಲ್ ಗುಡ್’ ಮೂಡ್‍ನಲ್ಲಿ ಇದ್ದ ಶೇರು ಮಾರುಕಟ್ಟೆ ಈ 100 ದಿನಗಳಲ್ಲಿ ತತ್ತರ ಹೊಡೆದಿದೆ. ಶೇರು ವಹಿವಾಟು ಕಂಪನಿಗಳು ಮತ್ತು ದಲ್ಲಾಳಿಗಳನ್ನು ಬಿಡಿ, ಆದರೆ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಜನ/ಕಂಪನಿಗಳಿಗಳೂ ಈಗ ಗಾಬರಿಗೊಂಡಿವೆ. ಈ ನೂರು ದಿನಗಳಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂಪಾಯಿ ಕರಗಿ ಮಾಯವಾಗಿದೆ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂಥದನ್ನೆಲ್ಲ ಸರಿಪಡಿಸಲು ಕಳೆದ ತಿಂಗಳಿಂದ ಸಾಲುಸಾಲು ಕ್ರಮಗಳನ್ನು ಘೋಷಿಸುತ್ತಿದ್ದರೂ ಶೇರು ಹೂಡಿಕೆದಾರರಿಗೆ ಯಾವುದೇ ಧೈರ್ಯ-ಸ್ಥೈಯ್ ತುಂಬಲು ಸಾಧ್ಯವಾಗಿಲ್ಲ. ಏಕೆಂದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ.
ಈ ನೂರು ದಿನಗಳಲ್ಲಿ ಬಿಎಸ್‍ಇ (ಬಾಂಬೆ ಸ್ಟಾಕ್ ಎಕ್ಸೆಂಜ್)ಯಲ್ಲಿ 2,290ರ ಪೈಕಿ ಚಾಲ್ತಿಯಾಗಿರುವ 2,264 ಶೇರುಗಳು ಶೇ. 90ರಷ್ಟನ್ನು ಮೌಲ್ಯವನ್ನು ಕಳೆದುಕೊಂಡಿವೆ. ಹೀಗಾಗಿಯೇ ಆರ್ಥಿಕ ತಜ್ಞರು ‘ಈ ಹಿಂಜರಿತ ಈಗಲೇ ಬಗೆಹರಿಯುವಂತದ್ದಲ್ಲ, ಅದಕ್ಕೇ ಶೇರು ಹೂಡಿಕೆದಾರರು ಪರಿಸ್ಥಿತಿ ಸುಧಾರಿಸುವವರೆಗೂ ಕಾಯುವುದು ಉತ್ತಮ’ ಎಂದು ಸಲಹೆ ನೀಡುತ್ತಿದ್ದಾರೆ.

ಮೇ 30ರಂದು ನರೇಂದ್ರ ಮೋದಿ ಮರಳಿ ಅಧಿಕಾರಕ್ಕೆ ಬಂದ ನಂತರ ಕೇವಲ ಶೇ.14ರಷ್ಟು ಶೇರುಗಳು ಮಾತ್ರ ಹೆಣಗಾಡಿ ಮೌಲ್ಯ ಉಳಿಸಿಕೊಂಡಿವೆ.

ಸದಾ ಮೋದಿ ಮತ್ತು ಬಿಜೆಪಿಯ ಆರಾಧಕರಾಗಿದ್ದ ‘ದಲಾಲ್ ಸ್ಟ್ರೀಟ್’ನ ಮಂದಿಗೆ ಈಗೀಗ ಸತ್ಯ ಅರಿವಾಗುತ್ತಿದೆ. ಮಧ್ಯಮ ಮತ್ತು ಮೇಲ್ ಮಧ್ಯಮ ವರ್ಗದ ಜನರಿಗೆ ಇನ್ನೂ ಎಚ್ಚರವಾದಂತಿಲ್ಲ ಎಂಬುದೇ ಆತಂಕದ ವಿಷಯ….. ದೇಶದಲ್ಲಿ ಕೊಂಡುಕೊಳ್ಳುವ ಶಕ್ತಿಯೇ ಕುಸಿದ ಹೊತ್ತಲ್ಲಿ ಯಾವ ಶೇರು ಮಾರ್ಕೆಟ್ಟೂ, ದಲಾಲ್ ಸ್ಟ್ರೀಟೂ ಏನೂ ಮಾಡಲಾಗಲ್ಲ ಅಲ್ಲವೇ?
(ಮಾಹಿತಿ: ಎಕನಾಮಿಕ್ ಟೈಮ್ಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. One time 2008 and 2009 chart Open Madi nodbhuditu
    2008 nali sensex 20000 ninda 9000 GE down aytu amele iga 40000 reach agide Monday 37145 close agide

    Company Share Gold Alla Anta frst tilkoli

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...