Homeಎಕಾನಮಿಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

ಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಸರ್ಕಾರಕ್ಕೆ ಈಗ 100 ದಿನಗಳು ತುಂಬಿವೆ. ಇಲ್ಲಿ ಜನಸಾಮಾನ್ಯರ ಜೀವನ ದುರ್ಗತಿಗೆ ತಲುಪಿದ್ದರೂ ‘ಎಲ್ಲವನ್ನೂ’ ಶೇರು ಮಾರುಕಟ್ಟೆಯ ಆಧಾರದಲ್ಲಿ ಲೆಕ್ಕ ತೋರಿಸುವ ಸಮರ್ಥಕರಿಗೆ ಗೊತ್ತಿರಲಿ, ಈ ನೂರು ದಿನದಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂ ಸಹ ಹಳ್ಳ ಹಿಡಿದಿದೆ ಎಂಬ ಸತ್ಯ…..

ಮಾಧ್ಯಮಗಳ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಈ ಎರಡನೇ ಅವಧಿಯ ನೂರು ದಿನಗಳಲ್ಲಿ ಅದ್ಹೇಗೋ ಮಿಂಚುತ್ತ ಬಂದಿರಬಹುದು. ಆದರೆ ಶೇರು ಮಾರುಕಟ್ಟೆಯ ‘ದಲಾಲ್ ಸ್ಟ್ರೀಟ್’ ಅಂತೂ ಆತಂಕಗೊಂಡಿದೆ.

ಎನ್‍ಡಿಎ ಎರಡನೇ ಬಾರಿ ಗೆದ್ದಾಗ ‘ಫೀಲ್ ಗುಡ್’ ಮೂಡ್‍ನಲ್ಲಿ ಇದ್ದ ಶೇರು ಮಾರುಕಟ್ಟೆ ಈ 100 ದಿನಗಳಲ್ಲಿ ತತ್ತರ ಹೊಡೆದಿದೆ. ಶೇರು ವಹಿವಾಟು ಕಂಪನಿಗಳು ಮತ್ತು ದಲ್ಲಾಳಿಗಳನ್ನು ಬಿಡಿ, ಆದರೆ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಜನ/ಕಂಪನಿಗಳಿಗಳೂ ಈಗ ಗಾಬರಿಗೊಂಡಿವೆ. ಈ ನೂರು ದಿನಗಳಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂಪಾಯಿ ಕರಗಿ ಮಾಯವಾಗಿದೆ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂಥದನ್ನೆಲ್ಲ ಸರಿಪಡಿಸಲು ಕಳೆದ ತಿಂಗಳಿಂದ ಸಾಲುಸಾಲು ಕ್ರಮಗಳನ್ನು ಘೋಷಿಸುತ್ತಿದ್ದರೂ ಶೇರು ಹೂಡಿಕೆದಾರರಿಗೆ ಯಾವುದೇ ಧೈರ್ಯ-ಸ್ಥೈಯ್ ತುಂಬಲು ಸಾಧ್ಯವಾಗಿಲ್ಲ. ಏಕೆಂದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ.
ಈ ನೂರು ದಿನಗಳಲ್ಲಿ ಬಿಎಸ್‍ಇ (ಬಾಂಬೆ ಸ್ಟಾಕ್ ಎಕ್ಸೆಂಜ್)ಯಲ್ಲಿ 2,290ರ ಪೈಕಿ ಚಾಲ್ತಿಯಾಗಿರುವ 2,264 ಶೇರುಗಳು ಶೇ. 90ರಷ್ಟನ್ನು ಮೌಲ್ಯವನ್ನು ಕಳೆದುಕೊಂಡಿವೆ. ಹೀಗಾಗಿಯೇ ಆರ್ಥಿಕ ತಜ್ಞರು ‘ಈ ಹಿಂಜರಿತ ಈಗಲೇ ಬಗೆಹರಿಯುವಂತದ್ದಲ್ಲ, ಅದಕ್ಕೇ ಶೇರು ಹೂಡಿಕೆದಾರರು ಪರಿಸ್ಥಿತಿ ಸುಧಾರಿಸುವವರೆಗೂ ಕಾಯುವುದು ಉತ್ತಮ’ ಎಂದು ಸಲಹೆ ನೀಡುತ್ತಿದ್ದಾರೆ.

ಮೇ 30ರಂದು ನರೇಂದ್ರ ಮೋದಿ ಮರಳಿ ಅಧಿಕಾರಕ್ಕೆ ಬಂದ ನಂತರ ಕೇವಲ ಶೇ.14ರಷ್ಟು ಶೇರುಗಳು ಮಾತ್ರ ಹೆಣಗಾಡಿ ಮೌಲ್ಯ ಉಳಿಸಿಕೊಂಡಿವೆ.

ಸದಾ ಮೋದಿ ಮತ್ತು ಬಿಜೆಪಿಯ ಆರಾಧಕರಾಗಿದ್ದ ‘ದಲಾಲ್ ಸ್ಟ್ರೀಟ್’ನ ಮಂದಿಗೆ ಈಗೀಗ ಸತ್ಯ ಅರಿವಾಗುತ್ತಿದೆ. ಮಧ್ಯಮ ಮತ್ತು ಮೇಲ್ ಮಧ್ಯಮ ವರ್ಗದ ಜನರಿಗೆ ಇನ್ನೂ ಎಚ್ಚರವಾದಂತಿಲ್ಲ ಎಂಬುದೇ ಆತಂಕದ ವಿಷಯ….. ದೇಶದಲ್ಲಿ ಕೊಂಡುಕೊಳ್ಳುವ ಶಕ್ತಿಯೇ ಕುಸಿದ ಹೊತ್ತಲ್ಲಿ ಯಾವ ಶೇರು ಮಾರ್ಕೆಟ್ಟೂ, ದಲಾಲ್ ಸ್ಟ್ರೀಟೂ ಏನೂ ಮಾಡಲಾಗಲ್ಲ ಅಲ್ಲವೇ?
(ಮಾಹಿತಿ: ಎಕನಾಮಿಕ್ ಟೈಮ್ಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. One time 2008 and 2009 chart Open Madi nodbhuditu
    2008 nali sensex 20000 ninda 9000 GE down aytu amele iga 40000 reach agide Monday 37145 close agide

    Company Share Gold Alla Anta frst tilkoli

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...