HomeಮುಖಪುಟSP ನಾಯಕ ಆಝಂ ಖಾನ್‌ಗೆ ಸೇರಿದ ಶಾಲೆಯನ್ನು ವಶಪಡಿಸಿಕೊಂಡ ಸರಕಾರ

SP ನಾಯಕ ಆಝಂ ಖಾನ್‌ಗೆ ಸೇರಿದ ಶಾಲೆಯನ್ನು ವಶಪಡಿಸಿಕೊಂಡ ಸರಕಾರ

- Advertisement -
- Advertisement -

ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್‌ ಅವರ ಟ್ರಸ್ಟ್ ನಡೆಸುತ್ತಿದ್ದ ರಾಮ್‌ಪುರ ಪಬ್ಲಿಕ್ ಸ್ಕೂಲ್‌, ಆಝಂ ಖಾನ್‌ ಕಚೇರಿ ಮತ್ತು ಪಕ್ಷದ ಚಟುವಟಿಕೆಗಳನ್ನು ನಡೆಸುತ್ತಿದ್ದ ಇನ್ನೊಂದು ಕಚೇರಿಯನ್ನು ರಾಜ್ಯ ಸಚಿವ ಸಂಪುಟದ ನಿರ್ಧಾರದಂತೆ ಪ್ರೌಢ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಲಲ್ತಾ ಪ್ರಸಾದ್ ಶಾಕ್ಯಾ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸನ್ಸಾರ್ ಸಿಂಗ್ ನೇತೃತ್ವದ ಭಾರಿ ಪೊಲೀಸ್ ಪಡೆಗಳ ಸಮ್ಮುಖದಲ್ಲಿ ಎರಡು ಕಟ್ಟಡಗಳಿಗೆ ಬೀಗ ಹಾಕಲಾಗಿದೆ. ಎರಡೂ ಆಸ್ತಿಗಳ ಸ್ವಾಧೀನವನ್ನು ಜಿಲ್ಲಾ ಶಾಲೆಗಳ ಇನ್ಸ್‌ಪೆಕ್ಟರ್ (ಡಿಐಒಎಸ್) ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ನ.2ರಂದು ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್‌ ಅವರ ಮೌಲಾನಾ ಮುಹಮ್ಮದ್ ಅಲಿ ಜೌಹರ್ ಟ್ರಸ್ಟ್ ರಾಂಪುರದಲ್ಲಿ ಆಕ್ರಮಿಸಿಕೊಂಡಿರುವ ಕಟ್ಟಡವನ್ನು ತೆರವು ಮಾಡುವಂತೆ ಡಿಐಒಎಸ್ ನೋಟಿಸ್ ನೀಡಿತ್ತು. ಆದರೆ ತೆರವು ಮಾಡದ ಕಾರಣ, ನಾವು ಅದನ್ನು ಸೀಲ್ ಮಾಡಿದ್ದೇವೆ ಎಂದು ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಕ್ಕೂ ಮೊದಲು ಅ.31ರಂದು ಉತ್ತರಪ್ರದೇಶ ಕ್ಯಾಬಿನೆಟ್ ಮುಹಮ್ಮದ್ ಅಲಿ ಜೌಹರ್ ಟ್ರಸ್ಟ್‌ಗೆ ಲೀಸ್‌ಗೆ ನೀಡಲಾದ 41,000 ಚದರ ಅಡಿ ಭೂಮಿಯನ್ನು ಹಿಂಪಡೆಯುವ ಪ್ರಸ್ತಾವನೆಯನ್ನು ಅನುಮೋದಿಸಿತ್ತು ಮತ್ತು ಅದನ್ನು ರಾಜ್ಯ ಸರ್ಕಾರದ ಪ್ರೌಢ ಶಿಕ್ಷಣ ಇಲಾಖೆಗೆ ವರ್ಗಾಯಿಸಲು ಆದೇಶ ನೀಡಿತ್ತು.

ಗುತ್ತಿಗೆ ಪತ್ರದ ಉಲ್ಲಂಘನೆಯ ಕುರಿತು ಸಮಿತಿಯ ವರದಿಯ ನಂತರ ಭೂಮಿಯ ಮಾಲೀಕತ್ವವನ್ನು ಹಿಂಪಡೆಯಲಾಗಿದೆ ಎನ್ನಲಾಗಿದೆ. ಈ ಹಿಂದೆ ಡಿಐಒಎಸ್ ಕಚೇರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಂಪುರ ಕೋಟೆಯ ಬಳಿ ಇರುವ ಹಳೆಯ ಮುರ್ತಾಜಾ ಶಾಲೆಯ ಕಟ್ಟಡವನ್ನು ಮಹಮ್ಮದ್ ಅಲಿ ಜೌಹರ್ ಟ್ರಸ್ಟ್‌ಗೆ  ಖಾನ್ ಎಸ್‌ಪಿ ಸರ್ಕಾರದಲ್ಲಿ ಸಚಿವರಾಗಿದ್ದಾಗ ಲೀಸ್‌ಗೆ ಮಂಜೂರು ಮಾಡಲಾಗಿತ್ತು. ಇಲ್ಲಿ ಶಾಲೆಗಾಗಿ ಎರಡು ಕಟ್ಟಡಗಳನ್ನು ನಿರ್ಮಿಸಲಾಗಿತ್ತು. ಅವುಗಳನ್ನೂ ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ 30 ವರ್ಷಗಳ ಗುತ್ತಿಗೆ ಕೊನೆಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ದಲಿತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಸಬ್ ಇನ್ಸ್‌ಪೆಕ್ಟರ್‌ಗೆ ಸ್ಥಳೀಯರಿಂದ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...