HomeಮುಖಪುಟSP ನಾಯಕ ಆಝಂ ಖಾನ್‌ಗೆ ಸೇರಿದ ಶಾಲೆಯನ್ನು ವಶಪಡಿಸಿಕೊಂಡ ಸರಕಾರ

SP ನಾಯಕ ಆಝಂ ಖಾನ್‌ಗೆ ಸೇರಿದ ಶಾಲೆಯನ್ನು ವಶಪಡಿಸಿಕೊಂಡ ಸರಕಾರ

- Advertisement -
- Advertisement -

ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್‌ ಅವರ ಟ್ರಸ್ಟ್ ನಡೆಸುತ್ತಿದ್ದ ರಾಮ್‌ಪುರ ಪಬ್ಲಿಕ್ ಸ್ಕೂಲ್‌, ಆಝಂ ಖಾನ್‌ ಕಚೇರಿ ಮತ್ತು ಪಕ್ಷದ ಚಟುವಟಿಕೆಗಳನ್ನು ನಡೆಸುತ್ತಿದ್ದ ಇನ್ನೊಂದು ಕಚೇರಿಯನ್ನು ರಾಜ್ಯ ಸಚಿವ ಸಂಪುಟದ ನಿರ್ಧಾರದಂತೆ ಪ್ರೌಢ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಲಲ್ತಾ ಪ್ರಸಾದ್ ಶಾಕ್ಯಾ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸನ್ಸಾರ್ ಸಿಂಗ್ ನೇತೃತ್ವದ ಭಾರಿ ಪೊಲೀಸ್ ಪಡೆಗಳ ಸಮ್ಮುಖದಲ್ಲಿ ಎರಡು ಕಟ್ಟಡಗಳಿಗೆ ಬೀಗ ಹಾಕಲಾಗಿದೆ. ಎರಡೂ ಆಸ್ತಿಗಳ ಸ್ವಾಧೀನವನ್ನು ಜಿಲ್ಲಾ ಶಾಲೆಗಳ ಇನ್ಸ್‌ಪೆಕ್ಟರ್ (ಡಿಐಒಎಸ್) ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ನ.2ರಂದು ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್‌ ಅವರ ಮೌಲಾನಾ ಮುಹಮ್ಮದ್ ಅಲಿ ಜೌಹರ್ ಟ್ರಸ್ಟ್ ರಾಂಪುರದಲ್ಲಿ ಆಕ್ರಮಿಸಿಕೊಂಡಿರುವ ಕಟ್ಟಡವನ್ನು ತೆರವು ಮಾಡುವಂತೆ ಡಿಐಒಎಸ್ ನೋಟಿಸ್ ನೀಡಿತ್ತು. ಆದರೆ ತೆರವು ಮಾಡದ ಕಾರಣ, ನಾವು ಅದನ್ನು ಸೀಲ್ ಮಾಡಿದ್ದೇವೆ ಎಂದು ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಕ್ಕೂ ಮೊದಲು ಅ.31ರಂದು ಉತ್ತರಪ್ರದೇಶ ಕ್ಯಾಬಿನೆಟ್ ಮುಹಮ್ಮದ್ ಅಲಿ ಜೌಹರ್ ಟ್ರಸ್ಟ್‌ಗೆ ಲೀಸ್‌ಗೆ ನೀಡಲಾದ 41,000 ಚದರ ಅಡಿ ಭೂಮಿಯನ್ನು ಹಿಂಪಡೆಯುವ ಪ್ರಸ್ತಾವನೆಯನ್ನು ಅನುಮೋದಿಸಿತ್ತು ಮತ್ತು ಅದನ್ನು ರಾಜ್ಯ ಸರ್ಕಾರದ ಪ್ರೌಢ ಶಿಕ್ಷಣ ಇಲಾಖೆಗೆ ವರ್ಗಾಯಿಸಲು ಆದೇಶ ನೀಡಿತ್ತು.

ಗುತ್ತಿಗೆ ಪತ್ರದ ಉಲ್ಲಂಘನೆಯ ಕುರಿತು ಸಮಿತಿಯ ವರದಿಯ ನಂತರ ಭೂಮಿಯ ಮಾಲೀಕತ್ವವನ್ನು ಹಿಂಪಡೆಯಲಾಗಿದೆ ಎನ್ನಲಾಗಿದೆ. ಈ ಹಿಂದೆ ಡಿಐಒಎಸ್ ಕಚೇರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಂಪುರ ಕೋಟೆಯ ಬಳಿ ಇರುವ ಹಳೆಯ ಮುರ್ತಾಜಾ ಶಾಲೆಯ ಕಟ್ಟಡವನ್ನು ಮಹಮ್ಮದ್ ಅಲಿ ಜೌಹರ್ ಟ್ರಸ್ಟ್‌ಗೆ  ಖಾನ್ ಎಸ್‌ಪಿ ಸರ್ಕಾರದಲ್ಲಿ ಸಚಿವರಾಗಿದ್ದಾಗ ಲೀಸ್‌ಗೆ ಮಂಜೂರು ಮಾಡಲಾಗಿತ್ತು. ಇಲ್ಲಿ ಶಾಲೆಗಾಗಿ ಎರಡು ಕಟ್ಟಡಗಳನ್ನು ನಿರ್ಮಿಸಲಾಗಿತ್ತು. ಅವುಗಳನ್ನೂ ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ 30 ವರ್ಷಗಳ ಗುತ್ತಿಗೆ ಕೊನೆಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ದಲಿತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಸಬ್ ಇನ್ಸ್‌ಪೆಕ್ಟರ್‌ಗೆ ಸ್ಥಳೀಯರಿಂದ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...