Homeಕರ್ನಾಟಕವಿಜಯೇಂದ್ರ ಒಬ್ಬರಿಂದಲೇ ಎಲ್ಲವೂ ಆಗಲ್ಲ: ಕೆ.ಎಸ್ ಈಶ್ವರಪ್ಪ

ವಿಜಯೇಂದ್ರ ಒಬ್ಬರಿಂದಲೇ ಎಲ್ಲವೂ ಆಗಲ್ಲ: ಕೆ.ಎಸ್ ಈಶ್ವರಪ್ಪ

- Advertisement -
- Advertisement -

ಬಿಜೆಪಿ ನೂತನ ಅಧ್ಯಕ್ಷರನ್ನಾಗಿ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು, ವಿಜಯೇಂದ್ರ ಒಬ್ಬರಿಂದಲೇ ಎಲ್ಲವೂ ಆಗಲ್ಲ. ಅವರು ಒಬ್ಬ ನಾಯಕ ಮಾತ್ರ ಎಂದಿದ್ದಾರೆ.

ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಯಾರೋ ಒಬ್ಬ ವ್ಯಕ್ತಿಯಿಂದ ಪಕ್ಷ ಬೆಳೆಯಲ್ಲ ಭಾರತೀಯ ಜನತಾ ಪಾರ್ಟಿ ಯಾರ ಮೇಲೂ ನಿಂತಿಲ್ಲ. ನರೇಂದ್ರ ಮೋದಿ ಕೂಡಾ ಓರ್ವ ಬಿಜೆಪಿಯಲ್ಲಿ ಕಾರ್ಯಕರ್ತರು. ನಾನು ಕೂಡ ಕಾರ್ಯಕರ್ತ” ಎಂದು ಹೇಳಿದ್ದಾರೆ.

”ವಿಜಯೇಂದ್ರ ಒಬ್ಬರಿಂದಲೇ ಎಲ್ಲವೂ ಆಗಲ್ಲ. ಅವರು ಒಬ್ಬ ನಾಯಕ ಮಾತ್ರ, ಎಲ್ಲರೂ ಒಟ್ಟಾಗಿ 28 ಸ್ಥಾನ ಗೆಲ್ಲುತ್ತೇವೆ. ಸಾಮೂಹಿಕ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂದು ಹೇಳಿದರು. “ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿದೆ ಎನ್ನುವುದು ಗೊತ್ತಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಕಾಂಗ್ರೆಸ್ ಪಕ್ಷ ಎಲ್ಲಿದೆ? ಕರ್ನಾಟಕದಲ್ಲಿ ಕಾಂಗ್ರೆಸ್ ಒಡೆದು ಚೂರಾಗಿದೆ” ಎಂದು ಟೀಕಿಸಿದ್ದಾರೆ.

”ಕುಟುಂಬ ರಾಜಕಾರಣದ ಬಗ್ಗೆ ಟ್ವಿಟ್ ಮಾಡಲು ಕಾಂಗ್ರೆಸ್ ಗೆ ಅಧಿಕಾರ ಇದೆಯೇ? ನೆಹರೂ, ಇಂದಿರಾಗಾಂಧಿ, ಎಎಸಿಸಿ ಅಧ್ಯಕ್ಷರು ಕುಟುಂಬದವರು. ಎಲ್ಲೂ ವಿರೋಧವಿಲ್ಲ, ಬಿಜೆಪಿಯಲ್ಲಿ ಎಲ್ಲಾ ಒಟ್ಟಾಗಿದ್ದೇವೆ. ವಿಜಯೇಂದ್ರ ಅವರಿಂದ ಸಂಘಟನೆ ಬೆಳೆಯುತ್ತದೆ” ಎಂದು ಹೇಳಿದರು.

ರಾಜ್ಯ ಬಿಜೆಪಿಯ ಅಧ್ಯಕ್ಷರನ್ನಾಗಿ ವಿಜಯೇಂದ್ರ ನೇಮಕವಾದ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಯಡಿಯೂರಪ್ಪನವರ ಮಗನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡುವ ಮೂಲಕ ಬಿಜೆಪಿ ಲೀಡರ್ ಲೆಸ್ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ. ದಶಕಗಳ ಕಾಲ ಪಕ್ಷದಲ್ಲಿ ದುಡಿದವರು ಹಲವರಿದ್ದರೂ “ಎಳೆ ಹುಡುಗ”ನಿಗೆ ಪಟ್ಟ ಕಟ್ಟುವ ಮೂಲಕ ಉಳಿದವರೆಲ್ಲ ಅನರ್ಹರು ಎಂಬ ಸಂದೇಶ ನೀಡಿದ್ದೇ ಅಥವಾ ಕುಟುಂಬ ರಾಜಕಾರಣಕ್ಕೆ ಮಣಿದಿದ್ದೇ ? ರಾಜ್ಯ ಬಿಜೆಪಿ ಉತ್ತರಿಸುವುದೇ?” ಎಂದು ಕೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...