Homeಮುಖಪುಟಗಾಝಾದಲ್ಲಿ ನಾಗರಿಕರ ಹತ್ಯಾಕಾಂಡ: ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ ಸೌದಿ, ಇರಾನ್

ಗಾಝಾದಲ್ಲಿ ನಾಗರಿಕರ ಹತ್ಯಾಕಾಂಡ: ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ ಸೌದಿ, ಇರಾನ್

- Advertisement -
- Advertisement -

ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಶನಿವಾರ ನಡೆದ ಶೃಂಗಸಭೆಯಲ್ಲಿ ಇರಾನ್ ಮತ್ತು ಸೌದಿ ಅರೇಬಿಯಾ ನಾಯಕರು ಗಾಝಾ ಪಟ್ಟಿಯಲ್ಲಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿದ್ದು, ಮಾನವೀಯ ನೆರವಿಗೆ ಸೂಚಿಸಿದ್ದಾರೆ. ಜೊತೆಗೆ ಯುದ್ಧ ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್‌ನ ಯುದ್ಧದ ಬಳಿಕ ಸೌದಿ ಅರೇಬಿಯಾ ಮತ್ತು ಇರಾನ್ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಸೌದಿ ಅರೇಬಿಯಾಕ್ಕೆ ತೆರಳಿದ್ದಾರೆ. ಕಳೆದ ಒಂದು ದಶಕದಲ್ಲಿ ಇದೇ ಮೊದಲ ಬಾರಿಗೆ ಇರಾನ್ ಅಧ್ಯಕ್ಷರೋರ್ವರು ಸೌದಿ ಅರೇಬಿಯಾಗೆ ಭೇಟಿ ನೀಡಿದ್ದಾರೆ. ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಇಬ್ರಾಹಿಂ ರೈಸಿ ಅವರನ್ನು ಶೃಂಗಸಭೆಗೆ ಸ್ವಾಗತಿಸಿದ್ದಾರೆ.

ಶೃಂಗಸಭೆಯಲ್ಲಿ ರೈಸಿ ಅವರು, ಗಾಝಾದಲ್ಲಿ ನಾಗರಿಕರ ವಿರುದ್ಧ ಮಾಡುತ್ತಿರುವ ಅನ್ಯಾಯದ ಬಗ್ಗೆ ಅಂತರಾಷ್ಟ್ರೀಯ ಸಮುದಾಯ ಮೌನವಾಗಿದೆ ಎಂದು ಟೀಕಿಸಿದ್ದಾರೆ. ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್  ಕದನ ವಿರಾಮವನ್ನು ವಿರೋಧಿಸುತ್ತವೆ, ಇದು ಹಮಾಸ್‌ನ ಮಿಲಿಟರಿ ವಿಭಾಗವನ್ನು ಮರುಸಂಘಟಿಸಲು  ಅವಕಾಶ ನೀಡುತ್ತದೆ ಎಂದು ಅವರು ವಾದಿಸುತ್ತಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ ನಡೆಸಿದ ದಾಳಿಯನ್ನು ಉಲ್ಲೇಖಿಸಿ, ಇಸ್ರೇಲ್‌ನೊಂದಿಗೆ ಸಂಬಂಧವನ್ನು ಕಡಿದುಹಾಕಲು ಇಸ್ಲಾಮಿಕ್ ಸರ್ಕಾರಗಳಿಗೆ ಒತ್ತಾಯಿಸಿದ್ದಾರೆ. ಪ್ಯಾಲೆಸ್ತೀನಿಯಾದವರಿಗೆ ಹೆಚ್ಚಿನ ಬೆಂಬಲ ನೀಡುವಂತೆ ಅವರು ಕರೆ ನೀಡಿದ್ದಾರೆ. ಇಸ್ರೇಲ್‌ನ ಸೈನ್ಯಕ್ಕೆ ಭಯೋತ್ಪಾದಕ ಗುಂಪು ಎಂದು ಹೆಸರಿಸಲು ಇಸ್ಲಾಮಿಕ್ ದೇಶಗಳಿಗೆ ರೈಸಿ ಒತ್ತಾಯಿಸಿದ್ದಾರೆ.

ಈ ಬಿಕ್ಕಟ್ಟು ಇಸ್ರೇಲ್‌ ಮಾಡಿದ ಅಂತರಾಷ್ಟ್ರೀಯ ಕಾನೂನು ಉಲ್ಲಂಘನೆಗಳನ್ನು ಕೊನೆಗೊಳಿಸಲು ಭದ್ರತಾ ಮಂಡಳಿ ಮತ್ತು ಅಂತರಾಷ್ಟ್ರೀಯ ಸಮುದಾಯ ವೈಫಲ್ಯವಾಗಿರುವುದನ್ನು ತೋರಿಸುತ್ತದೆ ಎಂದು ಸೌದಿ ಕ್ರೌನ್ ಪ್ರಿನ್ಸ್ ಹೇಳಿದ್ದಾರೆ.

ಗಾಝಾ ಮೇಲೆ ಇಸ್ರೇಲ್‌ ಅ.7ರಂದು ಯುದ್ಧ ಘೋಷಣೆಯ ಬಳಿಕ ಗಾಝಾ ಪಟ್ಟಿಯಲ್ಲಿ ಮೃತರ ಸಂಖ್ಯೆ 11,078ಕ್ಕೆ ತಲುಪಿದೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ತಿಳಿಸಿದೆ. ಮೃತರಲ್ಲಿ 4,506 ಮಕ್ಕಳು, 3,027 ಮಹಿಳೆಯರು, 6,78 ವಯಸ್ಕರು ಸೇರಿದ್ದಾರೆ. ಇದೇ ವೇಳೆ  27,490ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಇಸ್ರೇಲ್ ದಾಳಿಯಿಂದ ನೆಲಸಮವಾದ ಕಟ್ಟಡಗಳ ಅವಶೇಷಗಳಡಿಯಲ್ಲಿ 1,500 ಮಕ್ಕಳು ಸೇರಿದಂತೆ 2,700 ಜನರು ಸಿಲುಕಿಕೊಂಡಿದ್ದಾರೆ. ಇಸ್ರೇಲ್‌ ಆಕ್ರಮಣಕ್ಕೆ 198 ವೈದ್ಯಾಧಿಕಾರಿಗಳು ಮೃತಪಟ್ಟಿದ್ದಾರೆ.  53 ಆಂಬ್ಯುಲೆನ್ಸ್‌ಗಳನ್ನು ಧ್ವಂಸಗೊಳಿಸಲಾಗಿದೆ. ಇಸ್ರೇಲ್ 135 ಆರೋಗ್ಯ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ ಮತ್ತು 21 ಆಸ್ಪತ್ರೆಗಳು ಮತ್ತು 47 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದ್ ಮಾಡುವಂತಾಗಿದೆ ಎಂದು ಅಶ್ರಫ್ ಅಲ್-ಕುದ್ರಾ ಹೇಳಿದ್ದಾರೆ.

ಹಮಾಸ್ ಇಸ್ರೇಲ್‌ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ 1,600 ಇಸ್ರೇಲ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. 200ಕ್ಕೂ ಅಧಿಕ ಮಂದಿಯನ್ನು ಒತ್ತೆಯಾಳಾಗಿ ಇಡಲಾಗಿದೆ.

ಗಾಝಾ ಮೇಲಿನ ಬಾಂಬ್ ದಾಳಿ ಹಾಗೂ ನಾಗರಿಕರ ಹತ್ಯೆಯನ್ನು ಇಸ್ರೇಲ್ ನಿಲ್ಲಿಸಬೇಕು ಎಂದು ಶುಕ್ರವಾರ  ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಹೇಳಿದ್ದರು. ಬಾಂಬ್ ದಾಳಿಗೆ ಯಾವುದೇ ಸಮರ್ಥನೆಗಳಿಲ್ಲ ಎಂದು ಹೇಳಿರುವ ಮ್ಯಾಕ್ರನ್, ಹಮಾಸ್ ದಾಳಿಯನ್ನು ಫ್ರಾನ್ಸ್ ಸ್ಪಷ್ಟವಾಗಿ ಖಂಡಿಸುತ್ತದೆ. ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕು ಇದ್ದರೂ, ಗಾಝಾದಲ್ಲಿ ನಡೆಯುತ್ತಿರುವ ಬಾಂಬ್ ದಾಳಿಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ್ದರು.

ಇದನ್ನು ಓದಿ: ಗುಜರಾತ್‌: ಹಝರತ್ ಶಹೀದ್ ದರ್ಗಾ ತೆರವಿಗೆ ಹೈಕೋರ್ಟ್‌ ತಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...