Homeಮುಖಪುಟಛತ್ತೀಸ್‌ಗಢ: ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 15,000ರೂ. ಘೋಷಿಸಿದ ಕಾಂಗ್ರೆಸ್

ಛತ್ತೀಸ್‌ಗಢ: ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 15,000ರೂ. ಘೋಷಿಸಿದ ಕಾಂಗ್ರೆಸ್

- Advertisement -
- Advertisement -

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಗೃಹಲಕ್ಷ್ಮೀ ಯೋಜನೆಯನ್ನು ಘೋಷಿಸಿದ್ದು, ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯ ಖಾತೆಗೆ ವರ್ಷಕ್ಕೆ 15,000 ರೂ.ಗಳನ್ನು ನೀಡುವುದಾಗಿ ಘೋಷಿಸಿದೆ.

ಈ ಕುರಿತು ಘೋಷಣೆಯನ್ನು ಮಾಡಿದ  ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ದೀಪಾವಳಿಯ ಶುಭ ಸಂದರ್ಭದಲ್ಲಿ ತಾಯಿ ಲಕ್ಷ್ಮಿ ದೇವಿಯ ಕೃಪೆ ಮತ್ತು ಛತ್ತೀಸ್‌ಗಢ ಮಹಾ ತಾಯಿಯಂದಿರ ಆಶೀರ್ವಾದದೊಂದಿಗೆ ರಾಜ್ಯದ ಸ್ತ್ರೀಗಳ ಬಲವರ್ಧನೆಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ರಚನೆಯಾದ ತಕ್ಷಣ ರಾಜ್ಯದ ಮಹಿಳೆಯರಿಗೆ ಛತ್ತೀಸ್‌ಗಢ ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ ಅವರ ಖಾತೆಗಳಿಗೆ ನೇರವಾಗಿ ವರ್ಷಕ್ಕೆ 15,000ರೂ.ಗಳನ್ನು ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಸಾಮಾಜಿಕ ವೆಲ್ಪೇರ್‌ ಸ್ಕೀಂನ ಭಾಗವಾಗಿ ಛತ್ತೀಸ್‌ಗಢದ ಪ್ರತಿ ಮಹಿಳೆಗೆ ವರ್ಷಕ್ಕೆ 15,000ರೂಗಳನ್ನು ಛತ್ತೀಸ್‌ಗಢ ಗೃಹಲಕ್ಷ್ಮಿ ಯೋಜನೆಯ ಭಾಗವಾಗಿ ನೀಡಲಾಗುವುದು. ದೀಪಾವಳಿಯ ಸಂದರ್ಭದಲ್ಲಿ ನಾನು ಇದನ್ನು ಘೋಷಿಸಲು ಬಯಸುತ್ತೇನೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮತ್ತೆ ಸರಕಾರವನ್ನು ರಚಿಸಿದರೆ ಎಲ್ಲಾ ತಾಯಿಯಂದಿರು ಮತ್ತು ಸಹೋದರಿಯರಿಗೆ 15,000ರೂ. ವರ್ಷಕ್ಕೆ ಅವರ ಖಾತೆಗೆ ಜಮೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಛತ್ತೀಸ್‌ಗಢದ ಸಿಎಂ ಭೂಪೇಶ್ ಬಘೇಲ್, ದೀಪಾವಳಿಯ ಸಂದರ್ಭದಲ್ಲಿ ರಾಜ್ಯದಲ್ಲಿ ಮಹಿಳೆಯರನ್ನು ಶಕ್ತಿಗೊಳಿಸಲು ಮಹತ್ವದ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು.

ನ.5ರಂದು ಕಾಂಗ್ರೆಸ್‌ ಛತ್ತೀಸ್‌ಗಢ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯಲ್ಲಿ ಜಾತಿಗಣತಿ, ಕೃಷಿ ಸಾಲ ಮನ್ನಾ, ಭತ್ತದ ಖರೀದಿ ಬೆಲೆಯಲ್ಲಿ ಹೆಚ್ಚಳ, 200 ಯುನಿಟ್‌ವರೆಗೆ ಉಚಿತ ವಿದ್ಯುತ್‌, 400ರವರೆಗಿನ ವಿದ್ಯುತ್‌ ಬಿಲ್‌ಗಳಲ್ಲಿ 50% ರಿಯಾಯಿತಿ, ಗ್ಯಾಸ್‌ ಸಿಲಿಂಡರ್‌ಗಳಲ್ಲಿ 500ರೂ. ಸಬ್ಸಿಡಿ ಸೇರಿ ಹಲವು ಘೋಷಣೆಗಳನ್ನು ಮಾಡಿದೆ.

90 ವಿಧಾನಸಭಾ ಕ್ಷೇತ್ರಗಳಿರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಹಂತದ ಚುನಾವಣೆ ನ.7ರಂದು ನಡೆದಿದೆ. ಎರಡನೆ ಹಂತದ ಚುನಾವಣೆ ನ.17ರಂದು ನಡೆಯಲಿದೆ. ಡಿ.3ರಂದು ಇತರ ರಾಜ್ಯಗಳ ಜೊತೆ ಚುನಾವಣಾ ಫಲಿತಾಂಶ ಹೊರ ಬರಲಿದೆ.

ಇನ್ನು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಶುಕ್ರವಾರ ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆಯನ್ನು ಕಾಂಗ್ರೆಸ್ ‘ನಕಲು’ ಎಂದು ಕರೆದಿದೆ. ಕಾಂಗ್ರೆಸ್‌ನ ಚುನಾವಣಾ ಗ್ಯಾರೆಂಟಿಗಳನ್ನು ‘ಬಿಟ್ಟಿ’ ಎಂದು ಟೀಕಿಸುವವರು ಈಗ ಚುನಾವಣೆಯಲ್ಲಿ ಗೆಲ್ಲಲು ಗ್ಯಾರೆಂಟಿಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಇನ್ನು ಕಾಂಗ್ರೆಸ್‌ ಗ್ಯಾರೆಂಟಿ ಘೋಷಣೆ ಬೆನ್ನಲ್ಲೇ ಬಿಜೆಪಿಯು ಛತ್ತೀಸ್‌ಗಢದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದೆ. 2 ವರ್ಷಗಳಲ್ಲಿ ಛತ್ತೀಸ್‌ಗಢದಲ್ಲಿ ಖಾಲಿ ಇರುವ 1 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದು. ಬಡ ಕುಟುಂಬದ ಮಹಿಳೆಯರಿಗೆ ತಲಾ  500ರ ದರದಲ್ಲಿ ಅಡುಗೆ ಅನಿಲ ಸಿಲಿಂಡರ್ ನೀಡುವುದು, ಘರ್ ಘರ್ ನಿರ್ಮಲ್ ಜಲ ಅಭಿಯಾನ, ಭೂರಹಿತ ಕೃಷಿ ಕಾರ್ಮಿಕರಿಗೆ ವರ್ಷಕ್ಕೆ 10,000ರೂ. ಸೇರಿ ಹಲವು ಭರವಸೆಗಳನ್ನು ಘೋಷಿಸಿದೆ.

ಇದನ್ನು ಓದಿ:ಗುಜರಾತ್‌: ಹಝರತ್ ಶಹೀದ್ ದರ್ಗಾ ತೆರವಿಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...