Homeಮುಖಪುಟಸುಡಾನ್‌ನಲ್ಲಿ ಸಶಸ್ತ್ರ ಗುಂಪಿನಿಂದ 800ಕ್ಕೂ ಹೆಚ್ಚು ಜನರ ಹತ್ಯೆ

ಸುಡಾನ್‌ನಲ್ಲಿ ಸಶಸ್ತ್ರ ಗುಂಪಿನಿಂದ 800ಕ್ಕೂ ಹೆಚ್ಚು ಜನರ ಹತ್ಯೆ

- Advertisement -
- Advertisement -

ಸುಡಾನ್‌ನ ದಾರ್ಫುರ್ ಪ್ರಾಂತ್ಯದ ಅರ್ದಮಾಟಾದಲ್ಲಿ ಸಶಸ್ತ್ರ ದಂಗೆಯಿಂದಾಗಿ ಕಳೆದ 6 ತಿಂಗಳಲ್ಲಿ 800ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 4.8 ಮಿಲಿಯನ್‌ಗಿಂತಲೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಎಂಬ ಅಚ್ಚರಿಯ ವರದಿಯನ್ನು ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ (UNHCR) ಬಹಿರಂಗಪಡಿಸಿದೆ.

ಸುಡಾನ್ ಸೇನೆಯ ಮುಖ್ಯಸ್ಥ ಜನರಲ್‌ ಅಬ್ದೆಲ್ ಫತಾ ಬುರ್ಹಾನ್ ಮತ್ತು ಅರೆಸೇನಾ ಪಡೆಗಳ ಮುಖ್ಯಸ್ಥ ಜನರಲ್ ಮೊಹಮ್ಮದ್ ಹಮ್ದಾನ್ ಡಗಾಲೊ ನಡುವಿನ ಬಿಕ್ಕಟ್ಟಿನಿಂದಾಗಿ ಯುದ್ಧದ ವಾತಾವರಣ ಸೃಷ್ಟಿಯಾಗಿತ್ತು. ಸೇನೆ ಮತ್ತು ಅರೆಸೇನಾ ನಡುವಿನ ಆಂತರಿಕ ಕಲಹದಲ್ಲಿ 800ಕ್ಕೂ ಹೆಚ್ಚು ಮಂದಿ ಹತ್ಯೆಯಾಗಿದ್ದು, ಇತ್ತೀಚೆಗೆ 8000ಕ್ಕೂ ಹೆಚ್ಚು ಮಂದಿ ನೆರೆಯ ದೇಶಕ್ಕೆ ವಲಸೆ ಹೋಗಿದ್ದಾರೆ.

ವಿಶ್ವಸಂಸ್ಥೆ ಹೊರಡಿಸಿದ ಹೇಳಿಕೆಯ ಪ್ರಕಾರ, ಸುಡಾನ್‌ನ ದಾರ್ಫುರ್ ಪ್ರದೇಶದಾದ್ಯಂತ ಹೆಚ್ಚುತ್ತಿರುವ ಹಿಂಸಾಚಾರವು 2 ದಶಕಗಳ ಹಿಂದೆ ನಡೆದ ದುಷ್ಕೃತ್ಯಗಳು ಮತ್ತೆ ಪುನರಾವರ್ತನೆಯಾಗಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ ಎಂದು ಹೇಳಿದೆ. 20 ವರ್ಷಗಳ ಹಿಂದೆ ದಾರ್ಫುರ್ ಪ್ರಾಂತ್ಯದಲ್ಲಿ ಉದ್ಭವಿಸಿದ್ದ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಶೋಷಣೆಗಳು ಇಡೀ ವಿಶ್ವವನ್ನೇ ಆಘಾತಗೊಳಿಸಿದ್ದವು ಎಂದು UN ಹೈ ಕಮಿಷನರ್ ಫಿಲಿಪ್ಪೊ ಗ್ರಾಂಡಿ ಹೇಳಿದ್ದಾರೆ.

ದಾರ್ಫುರ್ ಪ್ರಾಂತ್ಯದಲ್ಲಿ ಸುಮಾರು 100  ನಿರಾಶ್ರಿತರ ಶಿಬಿರಗಳನ್ನು ನೆಲಸಮಗೊಳಿಸಲಾಗಿದ್ದು, ಯುಎನ್‌ಎಚ್‌ಸಿಆರ್ ಪರಿಹಾರ ಸಾಮಾಗ್ರಿಗಳ ವ್ಯಾಪಕ ಲೂಟಿ ಕೂಡ ನಡೆದಿದೆ. 2 ದಶಕಗಳ ಹಿಂದೆ ಡಾರ್ಫೂರ್‌ನಾದ್ಯಂತ ಸಾವಿರಾರು ಜನರು ಕೊಲ್ಲಲ್ಪಟ್ಟರು ಮತ್ತು ಲಕ್ಷಾಂತರ ಜನರು ಸ್ಥಳಾಂತರಗೊಂಡಿದ್ದರು.

ಜನಾಂಗೀಯ ಹತ್ಯೆಯನ್ನು ತಡೆಗಟ್ಟುವಲ್ಲಿ UN ವಿಶೇಷ ಸಲಹೆಗಾರರಾದ ಆಲಿಸ್ ವೈರಿಮುನ್ಡೆರಿಟು ಅವರು ಜೂನ್‌ನಲ್ಲಿ ಈ ಬಗ್ಗೆ ಎಚ್ಚರಿಸಿದ್ದರು. ಜನಾಂಗೀಯತೆಯ ಆಧಾರದ ದಾಳಿಗಳು ಪಶ್ಚಿಮ ದಾರ್ಫುರ್‌ನಲ್ಲಿ ಮುಂದುವರಿಯುವುದು ಯುದ್ಧ ಅಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಕಾರಣವಾಗಬಹುದು. ನಿರಂತರ ಲೈಂಗಿಕ ಹಿಂಸೆ, ಚಿತ್ರಹಿಂಸೆ, ಅನಿಯಂತ್ರಿತ ಹತ್ಯೆಗಳು, ನಾಗರಿಕರ ಸುಲಿಗೆ ಮತ್ತು ನಿರ್ದಿಷ್ಟ ಜನಾಂಗೀಯ ಗುಂಪುಗಳನ್ನು ಗುರಿಯಾಗಿಸಿರುವ ಬಗ್ಗೆ UN ನಿರಾಶ್ರಿತರ ಸಂಸ್ಥೆ ಎಚ್ಚರಿಕೆಯನ್ನು ನೀಡಿದೆ.

ಸೇನೆ ಮತ್ತು ಅರೆಸೈನಿಕ ಗುಂಪಿನ ನಡುವೆ ಏಪ್ರಿಲ್ ಮಧ್ಯದಲ್ಲಿ ಉದ್ವಿಗ್ನತೆ ಪ್ರಾರಂಭವಾದಾಗಿನಿಂದ ಸುಡಾನ್‌ನಲ್ಲಿ 4.8 ಮಿಲಿಯನ್‌ಗಿಂತಲೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. 1.2 ಮಿಲಿಯನ್ ಜನರು ನೆರೆಯ ದೇಶಗಳಲ್ಲಿ ಆಶ್ರಯ ಪಡೆದಿದ್ದಾರೆ.

ಇದನ್ನು ಓದಿ: ಕೊಚ್ಚಿ: ಸರಣಿ ಸ್ಪೋಟ ಪ್ರಕರಣ; ಮೃತರ ಸಂಖ್ಯೆ 5ಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಪಂಚಾಯತ್ ಚುನಾವಣೆಯ ನಂತರ 500 ಬೀದಿ ನಾಯಿಗಳ ಸಾಮೂಹಿಕ ಕೊಲೆ; ‘ನಾಯಿ ಮುಕ್ತ ಗ್ರಾಮ’ದ ಭರವಸೆ ನೀಡಿದ್ದ ಅಭ್ಯರ್ಥಿಗಳು

ತೆಲಂಗಾಣದ ಹನಮಕೊಂಡ ಮತ್ತು ಕಾಮರೆಡ್ಡಿ ಜಿಲ್ಲೆಗಳಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಜನವರಿಯ ಮೊದಲ ಎರಡು ವಾರಗಳಲ್ಲಿ ಸುಮಾರು 500 ನಾಯಿಗಳನ್ನು ವಿಷ ಹಾಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ....

ಕಾನ್ಪುರ ದೇಹತ್‌ನಲ್ಲಿ ನೆರೆಯವರ ಹಲ್ಲೆಯಿಂದ ದಲಿತ ರೈತ ಸಾವು; ಆರು ಮಂದಿ ಬಂಧನ

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ 50 ವರ್ಷದ ದಲಿತ ರೈತನೊಬ್ಬ ತನ್ನ ನೆರೆಹೊರೆಯವರು ಮತ್ತು ಅವರ ಸಂಬಂಧಿಕರಿಂದ ಥಳಿತಕ್ಕೊಳಗಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಆತನ...

ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ‘ಹರಿಜನ-ಗಿರಿಜನ’ ಪದಗಳನ್ನು ನಿಷೇಧಿಸಿದ ಹರಿಯಾಣ ಸರ್ಕಾರ

ಹರಿಯಾಣ ಸರ್ಕಾರವು ತನ್ನ ಎಲ್ಲಾ ಅಧಿಕೃತ ಸಂವಹನಗಳಲ್ಲಿ 'ಹರಿಜನ' ಮತ್ತು 'ಗಿರಿಜನ' ಪದಗಳ ಬಳಕೆಯನ್ನು ನಿಷೇಧಿಸಿದೆ. ಇಲಾಖೆಗಳು 'ಪರಿಶಿಷ್ಟ ಜಾತಿ (ಎಸ್‌ಸಿ)' ಮತ್ತು 'ಪರಿಶಿಷ್ಟ ಪಂಗಡ (ಎಸ್‌ಟಿ)' ಅಥವಾ ಅವುಗಳ ಸಮಾನ ಪದಗಳನ್ನು...

ಐಎಎಸ್ ಅಧಿಕಾರಿ ಮಾನನಷ್ಟ ಮೊಕದ್ದಮೆ ಪ್ರಕರಣ: ಎನ್‌ಟಿವಿ ಸಂಪಾದಕ, ಇಬ್ಬರು ಪತ್ರಕರ್ತರ ಬಂಧನ

ತೆಲಂಗಾಣ ಸರ್ಕಾರದ ರಸ್ತೆ ಮತ್ತು ಕಟ್ಟಡಗಳ ಸಚಿವ ಕೋಮತಿರೆಡ್ಡಿ ವೆಂಕಟ್ ರೆಡ್ಡಿ ಹಾಗೂ ಮಹಿಳಾ ಐಎಎಸ್ ಅಧಿಕಾರಿ ಅವರ ಕುರಿತು ವಿವಾದಾತ್ಮಕ ಸುದ್ದಿ ವರದಿಗೆ ಸಂಬಂಧಿಸಿದಂತೆ, ಹೈದರಾಬಾದ್ ಕೇಂದ್ರ ಅಪರಾಧ ಠಾಣೆ...

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...