Homeಮುಖಪುಟಅಮಿತ್ ಶಾರ ನೆಕ್ಸ್ಟ್ ಟಾರ್ಗೆಟ್ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್: ಸಿಖ್ ವಿರೋಧಿ ಗಲಭೆಯ ಪ್ರಕರಣ...

ಅಮಿತ್ ಶಾರ ನೆಕ್ಸ್ಟ್ ಟಾರ್ಗೆಟ್ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್: ಸಿಖ್ ವಿರೋಧಿ ಗಲಭೆಯ ಪ್ರಕರಣ ರೀಓಪನ್..

- Advertisement -
- Advertisement -

1984 ರ ಸಿಖ್ ವಿರೋಧಿ ಗಲಭೆಯ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಹಿರಿಯ ಮುಖಂಡ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್  ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವಾಲಯವು ಆ ಕೇಸ್ ಅನ್ನು ರೀಓಪನ್ ಮಾಡಲು ಮುಂದಾಗಿದೆ. ಗಲಭೆಯಲ್ಲಿ ನನ್ನ ಪಾತ್ರವಿಲ್ಲ ಎಂದು ಕಮಲ್ ನಾಥ್ ನಿರಾಕರಿಸಿದ್ದಾರೆ. ಆದರೆ ಸಾಲು ಸಾಲು ವಿರೋಧ ಪಕ್ಷದ ನಾಯಕರನ್ನು ಬೇಟೆಯಾಡಲು ಮುಂದಾಗಿರುವ ಅಮಿತ್ ಶಾ ಧೃಡ ತೀರ್ಮಾನ ಮಾಡಿದಂತಿದೆ.

ಕಳೆದ ವರ್ಷ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಪಕ್ಷ ಕೂದಲೆಳೆ ಅಂತರದಲ್ಲಿ ಬಿಜೆಪಿಯನ್ನು ಸೋಲಿಸಿ ಸರಳ ಬಹುಮತ ಪಡೆಯಿತು. ಆಗ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ವೇಳೆಗೆ ಸಿಖ್ ಗುಂಪುಗಳು ಈ ಪ್ರಕರಣವನ್ನು ಉಲ್ಲೇಖಿಸಿ ಪ್ರತಿಭಟನೆ ನಡೆಸಿದ್ದರು. ಈಗ ಭಾರೀ ಬಹುಮತದೊಂದಿಗೆ ಎರಡನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ವಿರೋಧ ಪಕ್ಷದ ನಾಯಕರನ್ನು ಮುಗಿಸಲು ನಿರ್ಧರಿಸಿದೆ. ಅದರ ಭಾಗವಾಗಿ ಸಣ್ಣ ಕೇಸಿನಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಕರ್ನಾಟಕದ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಜೈಲಿನಲ್ಲಿದ್ದಾರೆ. ಆ ಲಿಸ್ಟಿಗೆ ಹೊಸ ಸೇರ್ಪಡೆ ಕಮಲ್ ನಾಥ್ ಆಗಿದ್ದಾರೆ.

ಅಗಸ್ಟಾ ವೆಸ್ಟ್‌ಲ್ಯಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲ್ ನಾಥ್ ಅವರ ಸೋದರಳಿಯ ರತುಲ್ ಪುರಿಯನ್ನು ಬಂಧಿಸಿದ ಕೆಲ ದಿನಗಳ ನಂತರ ಗೃಹ ಸಚಿವಾಲಯದ ಈ ನಿರ್ಧಾರ ಬಂದಿದೆ. 1984ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿಯನ್ನು ಸಿಖ್ ಸಮುದಾಯಕ್ಕೆ ಸೇರಿದ್ದ ಅವರ ಅಂಗರಕ್ಷಕರು ಗುಂಡಿಕ್ಕಿ ಕೊಂದರು. ಇದಕ್ಕೆ ಪ್ರತೀಕಾರಕ್ಕಾಗಿ ಕಮಲ್ ನಾಥ್ ಮತ್ತು ಪಕ್ಷದ ದೆಹಲಿ ನಾಯಕರಾದ ಜಗದೀಶ್ ಟೈಟ್ಲರ್ ಮತ್ತು ಸಜ್ಜನ್ ಕುಮಾರ್ ಅವರೊಂದಿಗೆ 1984 ರಲ್ಲಿ ಸಿಖ್ಖರ ಮೇಲಿನ ಗಲಭೆಗೆ ಜನಸಂದಣಿಯನ್ನು ಪ್ರಚೋದಿಸಿದ ಆರೋಪ ಹೊರಿಸಲಾಗಿದೆ.

ಕಮಲ್ ನಾಥ್ ಅವರು ಗಲಭೆಯಲ್ಲಿ ಕೇಂದ್ರ ದೆಹಲಿಯ ರಾಕಬ್‌ಗಂಜ್ ಗುರುದ್ವಾರದ ಹೊರಗೆ ಜನಸಮೂಹವನ್ನು ಮುನ್ನಡೆಸಿದ್ದಾರೆ ಮತ್ತು ಇಬ್ಬರು ಸಿಖ್ಖರು ಆತನ ಸಮ್ಮುಖದಲ್ಲಿ ಕೊಲ್ಲಲ್ಪಟ್ಟರು ಎಂದು ಸಾಕ್ಷಿಗಳು ಆರೋಪಿಸಿದ್ದರು. ಗಲಭೆಗಳ ಬಗ್ಗೆ ತನಿಖೆ ನಡೆಸುತ್ತಿದ್ದ ನಾನಾವತಿ ಆಯೋಗವು ಆಗಿನ ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಸಂಜಯ್ ಸೂರಿ ಸೇರಿದಂತೆ ಇಬ್ಬರು ವ್ಯಕ್ತಿಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು ಕಮಲ್ ನಾಥ್ ಸ್ಥಳದಲ್ಲಿದ್ದರು ಎಂದು ಉಲ್ಲೇಖಿಸಿದೆ.

ತಾನು ಹಾಜರಿದ್ದನ್ನು ಒಪ್ಪಿಕೊಂಡ ಕಮಲ್ ನಾಥ್, ಆದರೆ ತಾನು ಜನಸಮೂಹವನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಿರುವುದಾಗಿ ಹೇಳಿದ್ದರು. ಹಾಗಾಗಿ ಗಲಭೆಯಲ್ಲಿ ಆತನ ಭಾಗಿಗೆ ಯಾವುದೇ ಪುರಾವೆಗಳಿಲ್ಲ ಎಂದು ಆಯೋಗ ಹೇಳಿದೆ. ಸಜ್ಜನ್ ಕುಮಾರ್ ಈ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದರು.

ಗಲಭೆಗೆ ಸಂಬಂಧಿಸಿದ 220 ಕ್ಕೂ ಹೆಚ್ಚು ಮುಚ್ಚಿದ ಪ್ರಕರಣಗಳ ತನಿಖೆಗಾಗಿ ಕೇಂದ್ರವು ವಿಶೇಷ ತನಿಖಾ ತಂಡವನ್ನು ಸ್ಥಾಪಿಸಲು ನಿರ್ಧರಿಸಿದ ಎರಡು ವರ್ಷಗಳ ನಂತರ, ಗಲಭೆಗೆ ಸಂಬಂಧಿಸಿದಂತೆ 88 ಜನರ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಕಳೆದ ವರ್ಷ ಎತ್ತಿಹಿಡಿದಿತ್ತು. ಈ ನಿರ್ಧಾರವನ್ನು ಮಾಜಿ ಗೃಹ ಸಚಿವ ರಾಜನಾಥ್ ಸಿಂಗ್ ಅವರು “ನರಮೇಧ” ಎಂದು ಬಣ್ಣಿಸಿದ್ದರು. ಆ ಸಂದರ್ಭದಲ್ಲಿ ಬಿಜೆಪಿ ಮಿತ್ರಪಕ್ಷವಾಗಿರುವ ಅಕಾಲಿ ದಳ, ಸರ್ಕಾರ ತಮ್ಮ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಿದೆ ಎಂದು ಹೇಳಿ ಕಮಲ್ ನಾಥ್ ಅವರ ರಾಜೀನಾಮೆಗೆ ಒತ್ತಾಯಿಸಿತ್ತು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಕ್ಷಣ ಕಮಲ್ ನಾಥ್ ಅವರಿಂದ ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕೆಂದು ಶಿರೋಮಣಿ ಅಕಾಲಿ ದಳದ ಸದಸ್ಯ ದೆಹಲಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಒತ್ತಾಯಿಸಿದ್ದಾರೆ. ಕಮಲ್ ನಾಥ್ ವಿರುದ್ಧ ನ್ಯಾಯಾಲಯದಲ್ಲಿ ಸಾಕ್ಷ್ಯ ಹೇಳಲು ಸಿದ್ಧವಾಗಿರುವ ಇಬ್ಬರು ಸಾಕ್ಷಿಗಳಿಗೆ ಅವರು ರಕ್ಷಣೆ ಕೋರಿದ್ದಾರೆ.

“ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ವಿರುದ್ಧದ 1984 ರ ಸಿಖ್ ನರಮೇಧ ಪ್ರಕರಣವನ್ನು ಮತ್ತೆ ತೆರೆದಿರುವುದು ಸಿಖ್ಖರ ವಿಜಯವಾಗಿದೆ. ಮುಚ್ಚಲ್ಪಟ್ಟ ಪ್ರಕರಣಗಳನ್ನು ಪುನಃ ತೆರೆಯುವಂತೆ ಒತ್ತಾಯಿಸಿ ನಾವು ನಡೆಸಿದ ನಿರಂತರ ಪ್ರಯತ್ನಗಳ ಫಲಿತಾಂಶವಾಗಿದೆ. ಈಗ ಕಮಲ್ ನಾಥ್ ಅವರ ಅಪರಾಧಗಳಿಗೆ ಬೆಲೆ ತೆರಲಿಲದ್ದಾರೆ” ಎಂದು ಕೇಂದ್ರ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಟ್ವೀಟ್ ಮಾಡಿದ್ದಾರೆ.

“ಶುಭಾಶಯಗಳು. ಇದು ಅಗತ್ಯವಾಗಿದ್ದ ಕ್ರಮವಾಗಿದೆ. ಹಾಗೆಯೇ ನಾವು ಕೂಡ ನ್ಯಾಯದ ನಿರೀಕ್ಷೆಯಲ್ಲಿರುವುದರಿಂದ ಗೃಹ ಸಚಿವಾಲಯವು 2002ರ ಗುಜರಾತ್ ಗಲಭೆ ಪ್ರಕರಣವನ್ನು ಮತ್ತೆ ತೆರೆಯಬಹುದೇ?” ಎಂದು ಖ್ಯಾತ ತನಿಖಾ ಪರ್ತಕರ್ತೆ ರಾಣಾ ಅಯ್ಯೂಬ್ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...