HomeಮುಖಪುಟED, CBI ರಾಜಕೀಯವನ್ನು ರಾಜಸ್ಥಾನದ ಜನರು ತಿರಸ್ಕರಿಸುತ್ತಾರೆ: ಜೈರಾಮ್ ರಮೇಶ್

ED, CBI ರಾಜಕೀಯವನ್ನು ರಾಜಸ್ಥಾನದ ಜನರು ತಿರಸ್ಕರಿಸುತ್ತಾರೆ: ಜೈರಾಮ್ ರಮೇಶ್

- Advertisement -
- Advertisement -

ಕಳೆದ ಐದು ವರ್ಷಗಳಲ್ಲಿ ರಾಜಸ್ಥಾನದಲ್ಲಿ ತನ್ನ ಸರ್ಕಾರ ಮಾಡಿದ ಕೆಲಸಗಳ ಆಧಾರದ ಮೇಲೆ ಪಕ್ಷವು ಜನಾದೇಶವನ್ನು ಬಯಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಶನಿವಾರ ಹೇಳಿದ್ದಾರೆ.

ಬಿಜೆಪಿಯ ವಿಷಯಗಳೆಂದರೆ ಧ್ರುವೀಕರಣ, ಇಡಿ ಮತ್ತು ಸಿಬಿಐ ಮಾತ್ರ.. ಏಕೆಂದರೆ ಬಿಜೆಪಿಗೆ ಇದಕ್ಕಿಂತ ಬೇರೆ ಯಾವುದೇ ತಂತ್ರವಿಲ್ಲ. ಪ್ರಧಾನಿ ಭಯದಿಂದ ರಾಜಸ್ಥಾನ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಅವರ ಆರೋಪಗಳು ಸಂಪೂರ್ಣವಾಗಿ ಆಧಾರರಹಿತ ಎಂದು ರಮೇಶ್ ಬಣ್ಣಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಉದಯಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರವು ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿದೆ ಎಂದು ಆರೋಪಿಸಿದ್ದರು.

”ಕಳೆದ ಐದು ವರ್ಷಗಳಲ್ಲಿ ರಾಜಸ್ಥಾನವು ಮಾದರಿ ರಾಜ್ಯವಾಗಿದೆ ಹಾಗಾಗಿ ಇದು ಪ್ರಧಾನಿಗೆ ಭಯ ಉಂಟುಮಾಡಿದೆ ಮತ್ತು ತೊಂದರೆಯಾಗಿದೆ. ಪ್ರಧಾನಿಗೆ ಜನರ ಮುಂದೆ ಹೋಗಲು ಬೇರೆ ಯಾವುದೇ ವಿಚಾರಗಳು ಇಲ್ಲವಾದ್ದರಿಂದ, ಇಡಿ ಮತ್ತು ಸಿಬಿಐ ಕಳುಹಿಸಲಾಗಿದೆ. ಮತ್ತೆ ಮತ್ತೆ ಪ್ರಧಾನಿ ಮತ್ತು ಅವರ ಸಹಚರರು ಧ್ರುವೀಕರಣದ ಭಾಷೆ ಮಾತನಾಡುತ್ತಾರೆ” ರಮೇಶ್ ಜೈಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

”ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

”ಬಿಜೆಪಿಯವರು ಹೆದರುತ್ತಿದ್ದಾರೆ, ನಮ್ಮ ಸರ್ಕಾರದಿಂದ ಯಾವುದೇ ಸಮಸ್ಯೆ ಇಲ್ಲ. ಅದಕ್ಕಾಗಿಯೇ ಅವರು ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ಕಾಂಗ್ರೆಸ್ ತುಷ್ಟೀಕರಣ ಮತ್ತು ನಿಷ್ಕ್ರಿಯತೆ ಆರೋಪ ಮಾಡುತ್ತಿದ್ದಾರೆ. ಇದು ಆಧಾರರಹಿತವಾಗಿದೆ, ಇದು ತಪ್ಪು ಮಾತ್ರವಲ್ಲ, ಇದು ಸುಳ್ಳು” ಎಂದು ಅವರು ಹೇಳಿದರು.

”ಈಗಾಗಲೇ ಕರ್ನಾಟಕದ ಜನರು ಧ್ರುವೀಕರಣವನ್ನು ತಿರಸ್ಕರಿಸಿದ್ದಾರೆ ಮತ್ತು ರಾಜಸ್ಥಾನದ ಜನರು ಹಣದುಬ್ಬರ, ನಿರುದ್ಯೋಗ ಮತ್ತು ಸೇಡಿನ ರಾಜಕೀಯದಿಂದ ಬೇಸತ್ತಿರುವ ಕಾರಣ ಮುಂಬರುವ ಚುನಾವಣೆಯಲ್ಲಿ ಇಡಿ ಮತ್ತು ಸಿಬಿಐ ಮತ್ತು ಧ್ರುವೀಕರಣದ ರಾಜಕೀಯವನ್ನು ತಿರಸ್ಕರಿಸುತ್ತಾರೆ” ಎಂದು ಅವರು ಹೇಳಿದರು.

”ಬಂದರುಗಳು, ವಿಮಾನ ನಿಲ್ದಾಣಗಳು ಮತ್ತು ಕೈಗಾರಿಕೆಗಳ ಖಾಸಗೀಕರಣವು ದೇಶದ ಹಿತಾಸಕ್ತಿಯಿಂದ ಕೂಡಿಲ್ಲ, ಇದು ಉದ್ಯೋಗ ಕುಸಿತಕ್ಕೆ ಕಾರಣವಾಗಿದೆ” ಎಂದು ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

”ಕೇಂದ್ರದ ನೀತಿಗಳಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಬಾಧಿತವಾಗಿವೆ” ಎಂದರು.

”ರಾಜ್ಯ ಸರ್ಕಾರದ ವಿರುದ್ಧ ಯಾವುದೇ ಆಡಳಿತ ವಿರೋಧಿ ಮತ್ತು ಅಸಮಾಧಾನ ಇಲ್ಲದ ಕಾರಣ ಕಾಂಗ್ರೆಸ್ ಮತ್ತೊಮ್ಮೆ ಜನಾದೇಶ ಪಡೆಯಲಿದೆ” ಎಂದು ರಮೇಶ್ ವಿಶ್ವಾಸ ವ್ಯಕ್ತಪಡಿಸಿದರು.

ನವೆಂಬರ್ 25 ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಉದಯಪುರ ಟೈಲರ್ ಹಂತಕರು ಬಿಜೆಪಿಯೊಂದಿಗೆ ನಂಟು ಹೊಂದಿದ್ದಾರೆ: ಗೆಹ್ಲೋಟ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...