Homeಮುಖಪುಟಇಸ್ರೇಲ್‌ ದಾಳಿಗೆ ಖಂಡನೆ: ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಸೇರಿ 145 ದೇಶಗಳ ಬೆಂಬಲ

ಇಸ್ರೇಲ್‌ ದಾಳಿಗೆ ಖಂಡನೆ: ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಸೇರಿ 145 ದೇಶಗಳ ಬೆಂಬಲ

- Advertisement -
- Advertisement -

ಆಕ್ರಮಿತ ಪ್ಯಾಲೆಸ್ತೀನ್‌ನ ಪ್ರದೇಶಗಳಲ್ಲಿ ಇಸ್ರೇಲ್‌ನ ವಸಾಹತು ಚಟುವಟಿಕೆಯನ್ನು ಖಂಡಿಸಿ ವಿಶ್ವಸಂಸ್ಥೆಯು, ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಂಡಿಸಿತು. ಈ ನಿರ್ಣಯದ ಪರ ಭಾರತ ಸೇರಿದಂತೆ 145 ರಾಷ್ಟ್ರಗಳು ಮತ ಚಲಾಯಿಸಿವೆ.

”ಪೂರ್ವ ಜೆರುಸಲೇಂ ಹಾಗೂ ಸಿರಿಯಾದ ಗೋಲನ್ ಸೇರಿದಂತೆ ಪ್ಯಾಲೆಸ್ತೀನ್‌ನ ಆಕ್ರಮಿತ ಪ್ರದೇಶದಲ್ಲಿ ಇಸ್ರೇಲ್ ವಸಾಹತು ಚಟುವಟಿಕೆ’ ಶೀರ್ಷಿಕೆಯಡಿ ಕರಡು ನಿರ್ಣಯ ಸಿದ್ಧಪಡಿಸಲಾಗಿತ್ತು. ವಿಶ್ವಸಂಸ್ಥೆಯ ವಿಶೇಷ ರಾಜಕೀಯ ಹಾಗೂ ವಸಾಹತು ವಿಮೋಚನಾ ಸಮಿತಿಯು ಇದಕ್ಕೆ ಅನುಮೋದನೆ ನೀಡಿತ್ತು.

ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಂಡನೆಯಾದ ಈ ನಿರ್ಣಯದ ವಿರುದ್ಧ ಏಳು ದೇಶಗಳು ಮತ ಚಲಾಯಿಸಿವೆ. 18 ದೇಶಗಳು ನಿರ್ಣಯದಿಂದ ದೂರ ಉಳಿದಿವೆ. ಅಮೆರಿಕ, ಕೆನಡಾ, ಹಂಗರಿ, ಇಸ್ರೇಲ್, ಮಾರ್ಷಲ್ ದ್ವೀಪಗಳು, ಫೆಡರೇಟೆಡ್ ಸ್ಟೇಟ್ಸ್ ಆಫ್ ಮೈಕ್ರೋನೇಷಿಯಾ ಹಾಗೂ ನೌರು ನಿರ್ಣಯದ ವಿರುದ್ಧ ಮತ ಚಲಾಯಿಸಿದ ರಾಷ್ಟ್ರಗಳಾಗಿವೆ.

ಚೀನಾ, ಫ್ರಾನ್ಸ್, ಜಪಾನ್, ಮಲೇಷ್ಯಾ, ಮಾಲೀವ್, ರಷ್ಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬ್ರಿಟನ್, ಬಾಂಗ್ಲಾದೇಶ, ಭೂತಾನ್ ನಿರ್ಣಯ ಬೆಂಬಲಿಸಿರುವ ಪ್ರಮುಖ ದೇಶಗಳಾಗಿವೆ.

ಇಸ್ರೇಲ್ ಆಕ್ರಮಣವನ್ನು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಯಿತು. ಭೂಮಿ ಮುಟ್ಟುಗೋಲು ಹಾಕಿಕೊಂಡು ಜನರ ಜೀವನೋಪಾಯಕ್ಕೆ ಅಡ್ಡಿಯುಂಟು ಮಾಡುವುದು, ಬಲವಂತವಾಗಿ ಜನರ ಸ್ಥಳಾಂತರ ಹಾಗೂ ಭೂಪ್ರದೇಶದ ಅತಿಕ್ರಮಣ ಮಾಡುವುದಕ್ಕೆ ಬಹುತೇಕ ರಾಷ್ಟ್ರಗಳು ಖಂಡನೆ ವ್ಯಕ್ತಪಡಿಸಿದವು.

”ಇದು ಇಸ್ರೇಲ್‌ನ ಅಕ್ರಮ ನಡೆಯಾಗಿದೆ. ಅಲ್ಲದೇ, ಆ ಪ್ರದೇಶದಲ್ಲಿ ಶಾಂತಿ ಭಂಗ ಉಂಟು ಮಾಡುವ ಜತೆಗೆ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಅಡ್ಡಿಯಾಗಲಿದೆ” ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಕೂಡಲೇ, ಈ ಎಲ್ಲಾ ಚಟುವಟಿಕೆಗಳಿಂದ ಇಸ್ರೇಲ್ ದೂರ ಸರಿಯಬೇಕು ಎಂದು ಒತ್ತಾಯಿಸಲಾಗಿದೆ.

193 ರಾಷ್ಟ್ರಗಳು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸದಸ್ಯತ್ವ ಪಡೆದಿವೆ. ಅಕ್ಟೋಬರ್‌ನಲ್ಲಿ ನಡೆದ ವಿಶ್ವಸಂಸ್ಥೆಯ 10ನೇ ತುರ್ತು ವಿಶೇಷ ಅಧಿವೇಶನದಲ್ಲಿ ಗಾಜಾ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಜೋರ್ಡಾನ್ ನಿರ್ಣಯ ಮಂಡಿಸಿತ್ತು. ಬಾಂಗ್ಲಾದೇಶ, ಮಾಲೀವ್, ಪಾಕಿಸ್ತಾನ, ರಷ್ಯಾ, ದಕ್ಷಿಣ ಆಫ್ರಿಕಾ ಸೇರಿದಂತೆ 40ಕ್ಕೂ ಹೆಚ್ಚು ರಾಷ್ಟ್ರಗಳು ಜೋರ್ಡಾನ್ ನಿರ್ಧಾರಕ್ಕೆ ಸಹಮತ ಸೂಚಿಸಿದ್ದವು.

ಗಾಜಾ ಪಟ್ಟಿ ಜನರ ರಕ್ಷಣೆ ಹಾಗೂ ಮಾನವೀಯ ಕಟ್ಟುಪಾಡುಗಳನ್ನು ಕಾಪಾಡುವುದಕ್ಕೆ ಸಂಬಂಧಿಸಿದ ಈ ನಿರ್ಣಯದ ಪರ 120 ದೇಶಗಳು ಮತ ಚಲಾಯಿಸಿದ್ದವು. 14 ದೇಶಗಳು ವಿರೋಧಿಸಿದ್ದರೆ, 45 ರಾಷ್ಟ್ರಗಳು ದೂರ ಉಳಿದಿದ್ದವು. ಇಸ್ರೇಲ್ ವಿರುದ್ಧ ಹಮಾಸ್ ನಡೆಸಿದ ದಾಳಿ ಬಗ್ಗೆ ನಿರ್ಣಯದಲ್ಲಿ ಪ್ರಸ್ತಾಪಿಸಿಲ್ಲ ಎಂದು ಭಾರತವು ದೂರ ಉಳಿದಿತ್ತು.

ಇದನ್ನೂ ಓದಿ: ಪ್ಯಾಲೆಸ್ತೀನ್ ಪರ ಲಂಡನ್‌ನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...