Homeಮುಖಪುಟಇಸ್ರೇಲ್‌ ದಾಳಿಗೆ ಖಂಡನೆ: ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಸೇರಿ 145 ದೇಶಗಳ ಬೆಂಬಲ

ಇಸ್ರೇಲ್‌ ದಾಳಿಗೆ ಖಂಡನೆ: ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಸೇರಿ 145 ದೇಶಗಳ ಬೆಂಬಲ

- Advertisement -
- Advertisement -

ಆಕ್ರಮಿತ ಪ್ಯಾಲೆಸ್ತೀನ್‌ನ ಪ್ರದೇಶಗಳಲ್ಲಿ ಇಸ್ರೇಲ್‌ನ ವಸಾಹತು ಚಟುವಟಿಕೆಯನ್ನು ಖಂಡಿಸಿ ವಿಶ್ವಸಂಸ್ಥೆಯು, ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಂಡಿಸಿತು. ಈ ನಿರ್ಣಯದ ಪರ ಭಾರತ ಸೇರಿದಂತೆ 145 ರಾಷ್ಟ್ರಗಳು ಮತ ಚಲಾಯಿಸಿವೆ.

”ಪೂರ್ವ ಜೆರುಸಲೇಂ ಹಾಗೂ ಸಿರಿಯಾದ ಗೋಲನ್ ಸೇರಿದಂತೆ ಪ್ಯಾಲೆಸ್ತೀನ್‌ನ ಆಕ್ರಮಿತ ಪ್ರದೇಶದಲ್ಲಿ ಇಸ್ರೇಲ್ ವಸಾಹತು ಚಟುವಟಿಕೆ’ ಶೀರ್ಷಿಕೆಯಡಿ ಕರಡು ನಿರ್ಣಯ ಸಿದ್ಧಪಡಿಸಲಾಗಿತ್ತು. ವಿಶ್ವಸಂಸ್ಥೆಯ ವಿಶೇಷ ರಾಜಕೀಯ ಹಾಗೂ ವಸಾಹತು ವಿಮೋಚನಾ ಸಮಿತಿಯು ಇದಕ್ಕೆ ಅನುಮೋದನೆ ನೀಡಿತ್ತು.

ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಂಡನೆಯಾದ ಈ ನಿರ್ಣಯದ ವಿರುದ್ಧ ಏಳು ದೇಶಗಳು ಮತ ಚಲಾಯಿಸಿವೆ. 18 ದೇಶಗಳು ನಿರ್ಣಯದಿಂದ ದೂರ ಉಳಿದಿವೆ. ಅಮೆರಿಕ, ಕೆನಡಾ, ಹಂಗರಿ, ಇಸ್ರೇಲ್, ಮಾರ್ಷಲ್ ದ್ವೀಪಗಳು, ಫೆಡರೇಟೆಡ್ ಸ್ಟೇಟ್ಸ್ ಆಫ್ ಮೈಕ್ರೋನೇಷಿಯಾ ಹಾಗೂ ನೌರು ನಿರ್ಣಯದ ವಿರುದ್ಧ ಮತ ಚಲಾಯಿಸಿದ ರಾಷ್ಟ್ರಗಳಾಗಿವೆ.

ಚೀನಾ, ಫ್ರಾನ್ಸ್, ಜಪಾನ್, ಮಲೇಷ್ಯಾ, ಮಾಲೀವ್, ರಷ್ಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬ್ರಿಟನ್, ಬಾಂಗ್ಲಾದೇಶ, ಭೂತಾನ್ ನಿರ್ಣಯ ಬೆಂಬಲಿಸಿರುವ ಪ್ರಮುಖ ದೇಶಗಳಾಗಿವೆ.

ಇಸ್ರೇಲ್ ಆಕ್ರಮಣವನ್ನು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಯಿತು. ಭೂಮಿ ಮುಟ್ಟುಗೋಲು ಹಾಕಿಕೊಂಡು ಜನರ ಜೀವನೋಪಾಯಕ್ಕೆ ಅಡ್ಡಿಯುಂಟು ಮಾಡುವುದು, ಬಲವಂತವಾಗಿ ಜನರ ಸ್ಥಳಾಂತರ ಹಾಗೂ ಭೂಪ್ರದೇಶದ ಅತಿಕ್ರಮಣ ಮಾಡುವುದಕ್ಕೆ ಬಹುತೇಕ ರಾಷ್ಟ್ರಗಳು ಖಂಡನೆ ವ್ಯಕ್ತಪಡಿಸಿದವು.

”ಇದು ಇಸ್ರೇಲ್‌ನ ಅಕ್ರಮ ನಡೆಯಾಗಿದೆ. ಅಲ್ಲದೇ, ಆ ಪ್ರದೇಶದಲ್ಲಿ ಶಾಂತಿ ಭಂಗ ಉಂಟು ಮಾಡುವ ಜತೆಗೆ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಅಡ್ಡಿಯಾಗಲಿದೆ” ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಕೂಡಲೇ, ಈ ಎಲ್ಲಾ ಚಟುವಟಿಕೆಗಳಿಂದ ಇಸ್ರೇಲ್ ದೂರ ಸರಿಯಬೇಕು ಎಂದು ಒತ್ತಾಯಿಸಲಾಗಿದೆ.

193 ರಾಷ್ಟ್ರಗಳು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸದಸ್ಯತ್ವ ಪಡೆದಿವೆ. ಅಕ್ಟೋಬರ್‌ನಲ್ಲಿ ನಡೆದ ವಿಶ್ವಸಂಸ್ಥೆಯ 10ನೇ ತುರ್ತು ವಿಶೇಷ ಅಧಿವೇಶನದಲ್ಲಿ ಗಾಜಾ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಜೋರ್ಡಾನ್ ನಿರ್ಣಯ ಮಂಡಿಸಿತ್ತು. ಬಾಂಗ್ಲಾದೇಶ, ಮಾಲೀವ್, ಪಾಕಿಸ್ತಾನ, ರಷ್ಯಾ, ದಕ್ಷಿಣ ಆಫ್ರಿಕಾ ಸೇರಿದಂತೆ 40ಕ್ಕೂ ಹೆಚ್ಚು ರಾಷ್ಟ್ರಗಳು ಜೋರ್ಡಾನ್ ನಿರ್ಧಾರಕ್ಕೆ ಸಹಮತ ಸೂಚಿಸಿದ್ದವು.

ಗಾಜಾ ಪಟ್ಟಿ ಜನರ ರಕ್ಷಣೆ ಹಾಗೂ ಮಾನವೀಯ ಕಟ್ಟುಪಾಡುಗಳನ್ನು ಕಾಪಾಡುವುದಕ್ಕೆ ಸಂಬಂಧಿಸಿದ ಈ ನಿರ್ಣಯದ ಪರ 120 ದೇಶಗಳು ಮತ ಚಲಾಯಿಸಿದ್ದವು. 14 ದೇಶಗಳು ವಿರೋಧಿಸಿದ್ದರೆ, 45 ರಾಷ್ಟ್ರಗಳು ದೂರ ಉಳಿದಿದ್ದವು. ಇಸ್ರೇಲ್ ವಿರುದ್ಧ ಹಮಾಸ್ ನಡೆಸಿದ ದಾಳಿ ಬಗ್ಗೆ ನಿರ್ಣಯದಲ್ಲಿ ಪ್ರಸ್ತಾಪಿಸಿಲ್ಲ ಎಂದು ಭಾರತವು ದೂರ ಉಳಿದಿತ್ತು.

ಇದನ್ನೂ ಓದಿ: ಪ್ಯಾಲೆಸ್ತೀನ್ ಪರ ಲಂಡನ್‌ನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...