Homeಮುಖಪುಟಎಲೆಕ್ಟ್ರಾನಿಕ್‌ ಸಾಧನಗಳ ವಶಕ್ಕೆ ಕರಡು ಮಾರ್ಗಸೂಚಿ ಕೋರ್ಟ್‌ಗೆ ಸಲ್ಲಿಕೆ

ಎಲೆಕ್ಟ್ರಾನಿಕ್‌ ಸಾಧನಗಳ ವಶಕ್ಕೆ ಕರಡು ಮಾರ್ಗಸೂಚಿ ಕೋರ್ಟ್‌ಗೆ ಸಲ್ಲಿಕೆ

- Advertisement -
- Advertisement -

ವ್ಯಕ್ತಿಗಳು, ಪತ್ರಕರ್ತರು ಅಥವಾ ಸಂಸ್ಥೆಗಳಿಂದ ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಡಿಸಿಕೊಳ್ಳಲು ಸುಪ್ರಿಂಕೋರ್ಟ್‌ಗೆ ಸಲ್ಲಿಸಿದ ಕರಡು ಮಾರ್ಗಸೂಚಿಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಅದನ್ನು ನೀಡುವಂತೆ ಸುಪ್ರೀಂಕೋರ್ಟ್‌ ಹೇಳಿದೆ.

ಈ ಬಗ್ಗೆ ತಜ್ಞರಾದ ರಾಮ್ ರಾಮಸ್ವಾಮಿ, ಮಾಧವ ಪ್ರಸಾದ್, ಸುಜಾತಾ ಪಟೇಲ್, ದೀಪಕ್ ಮಲ್ಘನ್ ಮತ್ತು ಮುಕುಲ್ ಕೇಶವನ್ ಅವರು 2021ರಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಡಿಸಿಕೊಳ್ಳುವ ಬಗ್ಗೆ ಕರಡು ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠ ಈ ಮಾರ್ಗಸೂಚಿಗಳನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಪ್ರಸಾರ ಮಾಡುವಂತೆ ಹಿರಿಯ ವಕೀಲ ನಿತ್ಯಾ ರಾಮಕೃಷ್ಣನ್ ಅವರಿಗೆ ಸೂಚಿಸಿದೆ.

ನ.7ರಂದು, ಫೌಂಡೇಶನ್ ಫಾರ್ ಮೀಡಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರ ಸರಕಾರಕ್ಕೆ ಸೂಚಿಸಿತ್ತು.

ಪತ್ರಕರ್ತರ ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಸರ್ವ ರೀತಿಯ ಅಧಿಕಾರವನ್ನು ತನಿಖಾ ಸಂಸ್ಥೆಗಳಿಗೆ ನೀಡಿರುವುದನ್ನು ಒಪ್ಪಿಕೊಳ್ಳುವುದು ನನಗೆ ತುಂಬಾ ಕಷ್ಟಕರವಾಗಿದೆ. ಇದು ತುಂಬಾ ಅಪಾಯಕಾರಿ ಎಂದು ನಾನು ಭಾವಿಸುತ್ತೇನೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದ್ದರು.

ಯುಕೆ ಮತ್ತು ಯುಎಸ್‌ನಂತಹ ದೇಶಗಳಲ್ಲಿ, ಎಲೆಕ್ಟ್ರಾನಿಕ್ ಸಾಧನಗಳ  ಹುಡುಕಾಟ ಮತ್ತು ವಶಕ್ಕೆ ಕಟ್ಟುನಿಟ್ಟಾದ ಷರತ್ತುಗಳಿವೆ. ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಕೊಳ್ಳುವ ಬಗ್ಗೆ ಹೆಚ್ಚುವರಿ ಪ್ರೋಟೋಕಾಲ್‌ಗಳು ಜಾರಿಯಲ್ಲಿವೆ. US ನಲ್ಲಿ ಗೌಪ್ಯತಾ ಸಂರಕ್ಷಣಾ ಕಾಯಿದೆಯಡಿ,  ಪತ್ರಕರ್ತರು, ಕಲಾವಿದರು, ಶಿಕ್ಷಣ ತಜ್ಞರು, ವೈಜ್ಞಾನಿಕ ಸಂಶೋಧಕರಿಂದ ಡಿಜಿಟಲ್‌ ಸಾಧನಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ನಿಬಂಧನೆಗಳಿವೆ.

ಎಲೆಕ್ಟ್ರಾನಿಕ್ ಸಾಧನದಿಂದ ನಿಖರವಾಗಿ ಏನನ್ನು ಹುಡುಕಲಾಗುತ್ತದೆ ಮತ್ತು ಏಕೆ ಎಂಬುವುದನ್ನು ಬರವಣಿಗೆಯಲ್ಲಿ ನೀಡಬೇಕು. ವಶಪಡಿಸಿಕೊಳ್ಳಲು ನ್ಯಾಯಾಂಗ ವಾರಂಟ್‌ ಜಾರಿ ಮಾಡಬೇಕು ಮತ್ತು ತುರ್ತು ವಶಪಡಿಸಿಕೊಳ್ಳಲು ಅದನ್ನು ಆಧಾರವಾಗಿ ತೋರಿಸಬೇಕು. ವಶಪಡಿಸುವ ಮೊದಲು ಈ ಲಿಖಿತ ದಾಖಲೆಯನ್ನು ಸಾಧನದ ಮಾಲೀಕರಿಗೆ ನೀಡಲಾಗುತ್ತದೆ.

ಪೊಲೀಸರು ತಮ್ಮ ಸಾಧನಗಳನ್ನು ಒಪ್ಪಿಸಲು ಯಾರಿಗೂ ಸಮನ್ಸ್‌ ನೀಡುವಂತಿಲ್ಲ. ವಶಪಡಿಸಿಕೊಂಡ ಸಾಧನವನ್ನು ಮಾಲೀಕರ ಸಮ್ಮುಖದಲ್ಲಿ ಸ್ವತಂತ್ರ ಪ್ರಾಧಿಕಾರವು ಮೊದಲು ಪರಿಶೀಲಿಸುತ್ತದೆ. ಬಳಿಕ ಪರಿಶೀಲಿಸಿ ತಕ್ಷಣವೇ ಸಾಧನಗಳನ್ನು ಹಿಂತಿರುಗಿಸಲಾಗುತ್ತದೆ. ತನಿಖೆಗೆ ನೇರವಾಗಿ ಸಂಬಂಧಿಸಿದ ವಸ್ತುಗಳನ್ನು ಮಾತ್ರ ತೆಗೆದುಕೊಂಡು ಹೋಗಬೇಕು. ಅದರಲ್ಲಿ ಮೂರು ಪ್ರತಿಗಳನ್ನು ಮಾಡಬೇಕು. ಒಂದನ್ನು ಮಾಲೀಕರಿಗೆ, ಒಂದನ್ನು ಸ್ವತಂತ್ರ ಪ್ರಾಧಿಕಾರಕ್ಕೆ ಮತ್ತು ಮೂರನೆಯದನ್ನು ತನಿಖಾ ಸಂಸ್ಥೆ ತೆಗೆದುಕೊಳ್ಳಬೇಕು.

ಅಪರೂಪದ ಸಂದರ್ಭದಲ್ಲಿ ತನಿಖಾಧಿಖಾರಿಗಳು ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಕ್ಕೆ ತೆಗೆದುಕೊಳ್ಳಬೇಕು. ಸಾಧನದ ವಾಪಸಾತಿಯು ವಶಪಡಿಸಿಕೊಂಡ 30 ದಿನಗಳಲ್ಲಿ ಇರಬೇಕು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಉಲ್ಲೇಖಿಸಿದೆ.

ಈ ಮಾರ್ಗಸೂಚಿಗಳನ್ನು ಅರ್ಜಿದಾರರು ಮಧ್ಯಂತರ ಕ್ರಮವಾಗಿ ಪ್ರಸ್ತಾಪಿಸಿದ್ದಾರೆ. ನ್ಯಾಯಾಲಯದ ನಿರ್ದೇಶನಗಳಿಂದ ಅಥವಾ ಶಾಸನದ ಮೂಲಕ  ಅದನ್ನು ಬದಲಾಯಿಸಬಹುದಾಗಿದೆ.

ಇದನ್ನು ಓದಿ: ಮಾದ್ಯಮ ಪ್ರತಿನಿಧಿಗಳಿಂದ ಎಲೆಕ್ಟ್ರಾನಿಕ್ ಸಾಧನಗಳ ಜಪ್ತಿ: ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...