Homeಮುಖಪುಟಇಸ್ರೇಲ್ ದಾಳಿಯಿಂದ ಕಾರ್ಯಚರಣೆ ನಿಲ್ಲಿಸಿದ ಗಾಜಾದ ಎರಡು ದೊಡ್ಡ ಆಸ್ಪತ್ರೆಗಳು

ಇಸ್ರೇಲ್ ದಾಳಿಯಿಂದ ಕಾರ್ಯಚರಣೆ ನಿಲ್ಲಿಸಿದ ಗಾಜಾದ ಎರಡು ದೊಡ್ಡ ಆಸ್ಪತ್ರೆಗಳು

- Advertisement -
- Advertisement -

ಪ್ಯಾಲೇಸ್ಟಿನಿಯನ್ ಎನ್‌ಕ್ಲೇವ್‌ನಲ್ಲಿ ಇಸ್ರೇಲ್‌ನ ದಾಳಿ ಏಳನೇ ವಾರಕ್ಕೆ ಪ್ರವೇಶಿಸುತ್ತಿದ್ದಂತೆ ಗಾಜಾದಲ್ಲಿನ ಎರಡು ಪ್ರಮುಖ ಆಸ್ಪತ್ರೆಗಳು ಭಾನುವಾರ ಹೊಸ ರೋಗಿಗಳಿಗೆ ಮುಚ್ಚಲ್ಪಟ್ಟವು ಎಂದು ರಾಯಿಟರ್ಸ್ ವರದಿ ಮಾಡಿದೆ.

ಗಾಜಾದ ಎರಡು ಅತಿದೊಡ್ಡ ಆಸ್ಪತ್ರೆಗಳಾದ ಅಲ್-ಶಿಫಾ ಮತ್ತು ಅಲ್-ಕುದ್ಸ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ. ಕಳೆದ 36 ದಿನಗಳಲ್ಲಿ, ವಿಶ್ವ ಆರೋಗ್ಯ ಸಂಸ್ಥೆಯು ಗಾಜಾದಲ್ಲಿ ಆರೋಗ್ಯ ಸೌಲಭ್ಯಗಳ ಮೇಲೆ ಕನಿಷ್ಠ 137 ದಾಳಿಗಳಾಗಿವೆ ಎನ್ನುವ ವರದಿ ದಾಖಲಾಗಿದೆ, ಇದರ ಪರಿಣಾಮವಾಗಿ 521 ಸಾವುಗಳು ಮತ್ತು 686 ಗಾಯಗಳು ಸಂಭವಿಸಿವೆ.

ಅಲ್-ಶಿಫಾ ಆಸ್ಪತ್ರೆಯಲ್ಲಿ ವೈದ್ಯಕೀಯ ಬಳಕೆಗಾಗಿ ಇಸ್ರೇಲ್‌ನಿಂದ 300 ಲೀಟರ್ ಇಂಧನವನ್ನು ಕಳಿಸಲಾಗಿತ್ತು. ಆದರೆ, ಪ್ಯಾಲೇಸ್ಟಿನಿಯನ್ ಸಶಸ್ತ್ರ ಗುಂಪು ಹಮಾಸ್ ಭಾನುವಾರ ನಿರಾಕರಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಭಾನುವಾರ, ಶಿಶುಗಳನ್ನು ಆಸ್ಪತ್ರೆಯಿಂದ ಸ್ಥಳಾಂತರಿಸಲು ಸಿದ್ಧವಾಗಿದೆ ಎಂದು ಇಸ್ರೇಲ್‌ನ ಮಿಲಿಟರಿ ಹೇಳಿದೆ, ಆದರೆ ಒಳಗೆ ಜನರು ಇನ್ನೂ ಸಿಕ್ಕಿಬಿದ್ದಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ಹೇಳಿದ್ದಾರೆ. ಆಸ್ಪತ್ರೆಯ ಅಡಿಯಲ್ಲಿ ಹಮಾಸ್ ದುಷ್ಕೃತ್ಯ ಎಸಗುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ. ಆದರೆ ಹಮಾಸ್ ಈ ಆರೋಪವನ್ನು ನಿರಾಕರಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ”ಗಾಜಾದಲ್ಲಿ ತಕ್ಷಣದ ಕದನ ವಿರಾಮಕ್ಕಾಗಿ ತಮ್ಮ ಕರೆಯನ್ನು ನೀಡಿದ್ದಾರೆ. ಈ ಪ್ರದೇಶದಲ್ಲಿ ಪರಿಸ್ಥಿತಿ ಭೀಕರ ಮತ್ತು ಅಪಾಯಕಾರಿಯಾಗಿದೆ ಎಂದು ಹೇಳಿದರು. ಸುರಕ್ಷಿತ ಧಾಮಗಳಾಗಬೇಕಾದ ಆಸ್ಪತ್ರೆಗಳು ಸಾವು, ವಿನಾಶ ಮತ್ತು ಹತಾಶೆಯ ತಾಣಗಳಾಗುತ್ತಿವೆ. ಇದನ್ನು ಜಗತ್ತು ಮೌನವಾಗಿ ನೋಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ದಕ್ಷಿಣ ಗಾಜಾದ ಖಾನ್ ಯೂನಿಸ್ ನಗರದ ಮನೆಯೊಂದರ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ. ನವೆಂಬರ್ 11 ರವರೆಗೆ ಗಾಜಾದಲ್ಲಿ ಇಸ್ರೇಲಿ ದಾಳಿಯಲ್ಲಿ 4,506 ಮಕ್ಕಳು ಸೇರಿದಂತೆ ಕನಿಷ್ಠ 11,078 ಪ್ಯಾಲೆಸ್ಟೀನಿಯಾದವರು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ ದಾಳಿಗೆ ಖಂಡನೆ: ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಸೇರಿ 145 ದೇಶಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...