Homeಅಂತರಾಷ್ಟ್ರೀಯಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

ಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

- Advertisement -
- Advertisement -

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು ಇಸ್ರೇಲ್ ಸೇನೆ ಸುತ್ತುವರಿದ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕದ ಅಧ್ಯಕ್ಷ ಜೋ ಬೈಡನ್‌, ಗಾಜಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದಾರೆ.

ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳು ಗಾಝಾ ನಗರದ ಮುಖ್ಯ ವೈದ್ಯಕೀಯ ಕೇಂದ್ರವಾದ ಅಲ್ ಶಿಫಾ ಆಸ್ಪತ್ರೆಯ ಹೊರಗೆ ನಿಂತಿವೆ. ಆಸ್ಪತ್ರೆಯಿಂದ ಗಾಯಾಳುಗಳನ್ನು ಸ್ಥಳಾಂತರಿಸುವ ಕಾರ್ಯಕ್ಕೆ ಅಡ್ಡಿಯಾಗಿದೆ.

ಅಲ್-ಶಿಫಾ ಆಸ್ಪತ್ರೆಯನ್ನು ಇಸ್ರೇಲ್ ಸೇನೆ ಸುತ್ತುವರಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಆಶ್ರಯ ಪಡೆದಿದ್ದ ಸುಮಾರು 2,500 ನಾಗರಿಕರು, 650 ರೋಗಿಗಳು, 500 ಆರೋಗ್ಯಸೇವೆ ಕಾರ್ಯಕರ್ತರು ಆಸ್ಪತ್ರೆಯಿಂದ ತೆರಳಿದ್ದಾರೆ ಎಂದು ವಿಶ್ವಸಂಸ್ಥೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಮಾಸ್‌ ಸಶಸ್ತ್ರ ಗುಂಪು ಅ.7 ರಂದು ದಕ್ಷಿಣ ಇಸ್ರೇಲ್‌ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 1,200 ಜನರು ಮೃತಪಟ್ಟಿದ್ದು, 240 ಜನರನ್ನು ಒತ್ತೆಯಾಳುಗಳಾಗಿ ಇರಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಯುದ್ಧ ಘೋಷಿಸಿ ನಡೆಸಿದ ದಾಳಿಯಲ್ಲಿ 11,100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾ ವೈದ್ಯಕೀಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರಲ್ಲಿ 40% ಮಕ್ಕಳಿದ್ದಾರೆ ಎಂದು ಪ್ಯಾಲೆಸ್ತೀನ್‌ ಸಚಿವಾಲಯವು ತಿಳಿಸಿದೆ.

ಗಾಝಾದಲ್ಲಿ ಮೂರನೇ ಎರಡರಷ್ಟು ಜನರು ಇಸ್ರೇಲ್‌ನ ಮಿಲಿಟರಿ ದಾಳಿಯಿಂದ ನಿರಾಶ್ರಿತರಾಗಿದ್ದಾರೆ. ಗಾಝಾದ ಪ್ರಜೆಗಳಿಗೆ ದಕ್ಷಿಣಕ್ಕೆ ತೆರಳಲು ಈ ಮೊದಲು ಇಸ್ರೇಲ್‌ ಪಡೆ ಸೂಚಿಸಿತ್ತು. ಇದರಿಂದಾಗಿ ಲಕ್ಷಾಂತರ ಮಂದಿ ವಲಸೆ ಹೋಗಿದ್ದಾರೆ.

ಗಾಝಾ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕಿದ್ರಾ ಮಾತನಾಡುತ್ತಾ, ಉತ್ತರ ಗಾಝಾದಲ್ಲಿ ಆಸ್ಪತ್ರೆಯ ಮೇಲೆ ಇಸ್ರೇಲ್‌ ಪಡೆಗಳು ದಾಳಿ ನಡೆಸುತ್ತಿದೆ. ವಿದ್ಯುತ್ ಕೊರತೆಯಿಂದಾಗಿ 3 ನವಜಾತ ಶಿಶುಗಳು ಸೇರಿದಂತೆ ಹಿಂದಿನ 3 ದಿನಗಳಲ್ಲಿ 32 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಿದರು.

ಇಸ್ರೇಲ್‌ ಮಿಲಿಟರಿ ಮಂಗಳವಾರ ಮುಂಜಾನೆ ಇಸ್ರೇಲ್‌ನಿಂದ ಅಲ್ ಶಿಫಾಗೆ ಇನ್‌ಕ್ಯುಬೇಟರ್‌ಗಳ ವರ್ಗಾವಣೆಗೆ ಮನವೀಯ ಪ್ರಯತ್ನವನ್ನು ಮಾಡುವುದಾಗಿ ಹೇಳಿದೆ.

ಅಲ್ ಶಿಫಾ ಆಸ್ಪತ್ರೆಯಲ್ಲಿ ಕನಿಷ್ಠ 650 ರೋಗಿಗಳು ಇನ್ನೂ ಇದ್ದಾರೆ. ಆಸ್ಪತ್ರೆಗಳಲ್ಲಿನ ಸಾವಿನ ಬಗ್ಗೆ ವರದಿ ಬಳಿಕ ಆಸ್ಪತ್ರೆಯನ್ನು ರಕ್ಷಿಸಬೇಕು ಎಂದು ಅಮೆರಿಕ ಅಧ್ಯಕ್ಷ ಬಿಡೆನ್ ಹೇಳಿದ್ದಾರೆ. ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಮೃದು ನಿಲುವು ಹೊಂದಬೇಕು ಮತ್ತು ನಾವು ಇಸ್ರೇಲ್‌ನೊಂದಿಗೆ ಸಂಪರ್ಕದಲ್ಲಿರುತ್ತೇವೆ ಎಂಬುದು ನನ್ನ ಭರವಸೆ ಮತ್ತು ನಿರೀಕ್ಷೆಯಾಗಿದೆ ಎಂದು ಬಿಡೆನ್ ಸೋಮವಾರ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕದನ ವಿರಾಮ ಮತ್ತು ಕೈದಿಗಳ ಬಿಡುಗಡೆಗೆ ಮಾತುಕತೆ ಪ್ರಯತ್ನವು ನಡೆಯುತ್ತಿದೆ. ಆದ್ದರಿಂದ ನಾನು ಸ್ವಲ್ಪ ಭರವಸೆಯಲ್ಲಿದ್ದೇನೆ. ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದಾರೆ.

ಹಮಾಸ್ ಆಸ್ಪತ್ರೆಗಳನ್ನು ಮಿಲಿಟರಿ ಉದ್ದೇಶಗಳಿಗಾಗಿ ಬಳಸುತ್ತದೆ ಎಂದು ಇಸ್ರೇಲ್ ಹೇಳಿದೆ ಮತ್ತು ಇಸ್ರೇಲ್‌ನ ಮಿಲಿಟರಿ ಪಡೆ ಸೋಮವಾರ ವೀಡಿಯೊ ಮತ್ತು ಫೋಟೋಗಳನ್ನು ಬಿಡುಗಡೆ ಮಾಡಿದ್ದು, ಕ್ಯಾನ್ಸರ್ ಚಿಕಿತ್ಸೆಯ  ಆಸ್ಪತ್ರೆಯಾದ ರಾಂಟಿಸ್ಸಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಡಲಾಗಿದೆ ಎಂದು ಆರೋಪಿಸಿದೆ.

ಹಮಾಸ್‌ನ ಸಶಸ್ತ್ರ ವಿಭಾಗವಾದ ಅಲ್-ಕಸ್ಸಾಮ್ ಬ್ರಿಗೇಡ್ಸ್ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಆಡಿಯೋ ಪೋಸ್ಟ್ ಮಾಡಿದ್ದು, 5 ದಿನಗಳ ಕದನ ವಿರಾಮಕ್ಕೆ ಪ್ರತಿಯಾಗಿ 70 ಮಹಿಳೆಯರು ಮತ್ತು ಮಕ್ಕಳ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ಸಿದ್ಧವಾಗಿದೆ ಎಂದು ಹೇಳಿದೆ. ಈ ಪ್ರಸ್ತಾಪವನ್ನು ಇಸ್ರೇಲ್ ಸ್ವೀಕರಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನು ಓದಿ: ಆರ್ಥಿಕ ಅಪರಾಧಿಗಳಿಗೆ ಕೈಕೋಳ ತೊಡಿಸಬಾರದು: ಸಂಸದೀಯ ಸಮಿತಿ ಶಿಫಾರಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Joe Biden is the hero of genocide, he is telling this.americ is the father of terrorist son Is isreal daughter is UK nephew are European country 40percent Arabic country are cousin. They don have right to say anything. They are real reason this war

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...