Homeಅಂತರಾಷ್ಟ್ರೀಯಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

ಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

- Advertisement -
- Advertisement -

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು ಇಸ್ರೇಲ್ ಸೇನೆ ಸುತ್ತುವರಿದ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕದ ಅಧ್ಯಕ್ಷ ಜೋ ಬೈಡನ್‌, ಗಾಜಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದಾರೆ.

ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳು ಗಾಝಾ ನಗರದ ಮುಖ್ಯ ವೈದ್ಯಕೀಯ ಕೇಂದ್ರವಾದ ಅಲ್ ಶಿಫಾ ಆಸ್ಪತ್ರೆಯ ಹೊರಗೆ ನಿಂತಿವೆ. ಆಸ್ಪತ್ರೆಯಿಂದ ಗಾಯಾಳುಗಳನ್ನು ಸ್ಥಳಾಂತರಿಸುವ ಕಾರ್ಯಕ್ಕೆ ಅಡ್ಡಿಯಾಗಿದೆ.

ಅಲ್-ಶಿಫಾ ಆಸ್ಪತ್ರೆಯನ್ನು ಇಸ್ರೇಲ್ ಸೇನೆ ಸುತ್ತುವರಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಆಶ್ರಯ ಪಡೆದಿದ್ದ ಸುಮಾರು 2,500 ನಾಗರಿಕರು, 650 ರೋಗಿಗಳು, 500 ಆರೋಗ್ಯಸೇವೆ ಕಾರ್ಯಕರ್ತರು ಆಸ್ಪತ್ರೆಯಿಂದ ತೆರಳಿದ್ದಾರೆ ಎಂದು ವಿಶ್ವಸಂಸ್ಥೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಮಾಸ್‌ ಸಶಸ್ತ್ರ ಗುಂಪು ಅ.7 ರಂದು ದಕ್ಷಿಣ ಇಸ್ರೇಲ್‌ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 1,200 ಜನರು ಮೃತಪಟ್ಟಿದ್ದು, 240 ಜನರನ್ನು ಒತ್ತೆಯಾಳುಗಳಾಗಿ ಇರಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಯುದ್ಧ ಘೋಷಿಸಿ ನಡೆಸಿದ ದಾಳಿಯಲ್ಲಿ 11,100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾ ವೈದ್ಯಕೀಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರಲ್ಲಿ 40% ಮಕ್ಕಳಿದ್ದಾರೆ ಎಂದು ಪ್ಯಾಲೆಸ್ತೀನ್‌ ಸಚಿವಾಲಯವು ತಿಳಿಸಿದೆ.

ಗಾಝಾದಲ್ಲಿ ಮೂರನೇ ಎರಡರಷ್ಟು ಜನರು ಇಸ್ರೇಲ್‌ನ ಮಿಲಿಟರಿ ದಾಳಿಯಿಂದ ನಿರಾಶ್ರಿತರಾಗಿದ್ದಾರೆ. ಗಾಝಾದ ಪ್ರಜೆಗಳಿಗೆ ದಕ್ಷಿಣಕ್ಕೆ ತೆರಳಲು ಈ ಮೊದಲು ಇಸ್ರೇಲ್‌ ಪಡೆ ಸೂಚಿಸಿತ್ತು. ಇದರಿಂದಾಗಿ ಲಕ್ಷಾಂತರ ಮಂದಿ ವಲಸೆ ಹೋಗಿದ್ದಾರೆ.

ಗಾಝಾ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕಿದ್ರಾ ಮಾತನಾಡುತ್ತಾ, ಉತ್ತರ ಗಾಝಾದಲ್ಲಿ ಆಸ್ಪತ್ರೆಯ ಮೇಲೆ ಇಸ್ರೇಲ್‌ ಪಡೆಗಳು ದಾಳಿ ನಡೆಸುತ್ತಿದೆ. ವಿದ್ಯುತ್ ಕೊರತೆಯಿಂದಾಗಿ 3 ನವಜಾತ ಶಿಶುಗಳು ಸೇರಿದಂತೆ ಹಿಂದಿನ 3 ದಿನಗಳಲ್ಲಿ 32 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಿದರು.

ಇಸ್ರೇಲ್‌ ಮಿಲಿಟರಿ ಮಂಗಳವಾರ ಮುಂಜಾನೆ ಇಸ್ರೇಲ್‌ನಿಂದ ಅಲ್ ಶಿಫಾಗೆ ಇನ್‌ಕ್ಯುಬೇಟರ್‌ಗಳ ವರ್ಗಾವಣೆಗೆ ಮನವೀಯ ಪ್ರಯತ್ನವನ್ನು ಮಾಡುವುದಾಗಿ ಹೇಳಿದೆ.

ಅಲ್ ಶಿಫಾ ಆಸ್ಪತ್ರೆಯಲ್ಲಿ ಕನಿಷ್ಠ 650 ರೋಗಿಗಳು ಇನ್ನೂ ಇದ್ದಾರೆ. ಆಸ್ಪತ್ರೆಗಳಲ್ಲಿನ ಸಾವಿನ ಬಗ್ಗೆ ವರದಿ ಬಳಿಕ ಆಸ್ಪತ್ರೆಯನ್ನು ರಕ್ಷಿಸಬೇಕು ಎಂದು ಅಮೆರಿಕ ಅಧ್ಯಕ್ಷ ಬಿಡೆನ್ ಹೇಳಿದ್ದಾರೆ. ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಮೃದು ನಿಲುವು ಹೊಂದಬೇಕು ಮತ್ತು ನಾವು ಇಸ್ರೇಲ್‌ನೊಂದಿಗೆ ಸಂಪರ್ಕದಲ್ಲಿರುತ್ತೇವೆ ಎಂಬುದು ನನ್ನ ಭರವಸೆ ಮತ್ತು ನಿರೀಕ್ಷೆಯಾಗಿದೆ ಎಂದು ಬಿಡೆನ್ ಸೋಮವಾರ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕದನ ವಿರಾಮ ಮತ್ತು ಕೈದಿಗಳ ಬಿಡುಗಡೆಗೆ ಮಾತುಕತೆ ಪ್ರಯತ್ನವು ನಡೆಯುತ್ತಿದೆ. ಆದ್ದರಿಂದ ನಾನು ಸ್ವಲ್ಪ ಭರವಸೆಯಲ್ಲಿದ್ದೇನೆ. ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದಾರೆ.

ಹಮಾಸ್ ಆಸ್ಪತ್ರೆಗಳನ್ನು ಮಿಲಿಟರಿ ಉದ್ದೇಶಗಳಿಗಾಗಿ ಬಳಸುತ್ತದೆ ಎಂದು ಇಸ್ರೇಲ್ ಹೇಳಿದೆ ಮತ್ತು ಇಸ್ರೇಲ್‌ನ ಮಿಲಿಟರಿ ಪಡೆ ಸೋಮವಾರ ವೀಡಿಯೊ ಮತ್ತು ಫೋಟೋಗಳನ್ನು ಬಿಡುಗಡೆ ಮಾಡಿದ್ದು, ಕ್ಯಾನ್ಸರ್ ಚಿಕಿತ್ಸೆಯ  ಆಸ್ಪತ್ರೆಯಾದ ರಾಂಟಿಸ್ಸಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಡಲಾಗಿದೆ ಎಂದು ಆರೋಪಿಸಿದೆ.

ಹಮಾಸ್‌ನ ಸಶಸ್ತ್ರ ವಿಭಾಗವಾದ ಅಲ್-ಕಸ್ಸಾಮ್ ಬ್ರಿಗೇಡ್ಸ್ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಆಡಿಯೋ ಪೋಸ್ಟ್ ಮಾಡಿದ್ದು, 5 ದಿನಗಳ ಕದನ ವಿರಾಮಕ್ಕೆ ಪ್ರತಿಯಾಗಿ 70 ಮಹಿಳೆಯರು ಮತ್ತು ಮಕ್ಕಳ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ಸಿದ್ಧವಾಗಿದೆ ಎಂದು ಹೇಳಿದೆ. ಈ ಪ್ರಸ್ತಾಪವನ್ನು ಇಸ್ರೇಲ್ ಸ್ವೀಕರಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನು ಓದಿ: ಆರ್ಥಿಕ ಅಪರಾಧಿಗಳಿಗೆ ಕೈಕೋಳ ತೊಡಿಸಬಾರದು: ಸಂಸದೀಯ ಸಮಿತಿ ಶಿಫಾರಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Joe Biden is the hero of genocide, he is telling this.americ is the father of terrorist son Is isreal daughter is UK nephew are European country 40percent Arabic country are cousin. They don have right to say anything. They are real reason this war

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...