Homeಮುಖಪುಟಕಾಶ್ಮೀರದಲ್ಲಿ ಹೊಸ ಪಕ್ಷ ಉದಯ: ಐವರಿಂದ ಪತ್ರಿಕಾಗೋಷ್ಟಿ, ಎಲ್ಲರಲ್ಲಿ ಆಶ್ಚರ್ಯ..

ಕಾಶ್ಮೀರದಲ್ಲಿ ಹೊಸ ಪಕ್ಷ ಉದಯ: ಐವರಿಂದ ಪತ್ರಿಕಾಗೋಷ್ಟಿ, ಎಲ್ಲರಲ್ಲಿ ಆಶ್ಚರ್ಯ..

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ದಾರಿ ಮತ್ತು ಹೊಸ ನಾಯಕತ್ವವನ್ನು ತೋರಿಸಲು ಹೊಸ ರಾಜಕೀಯ ಪಕ್ಷವನ್ನು ಐವರು ಅಪರಿಚಿತರು ಆರಂಭಿಸಿದ್ದಾರೆ! 370ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆದ ದೊಡ್ಡ ರಾಜಕೀಯ ಬೆಳವಣಿಗೆ ಇದಾಗಿದ್ದು ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರು ಗೃಹಬಂಧನದಲ್ಲಿರುವಾಗ ಇವರಿಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಪಕ್ಷ ಘೋಷಿಸಲು ಅನುಮತಿ ಕೊಟ್ಟವರ್ಯಾರು ಎಂಬ ಪ್ರಶ್ನೆ ಈಗ ಎಲ್ಲರಲ್ಲಿ ಮೂಡಿದೆ.

ಐವರು ಪುರುಷರು ತಮ್ಮ ಪಕ್ಷವನ್ನು ಜಮ್ಮು ಕಾಶ್ಮೀರ ರಾಜಕೀಯ ಚಳವಳಿ- I ಎಂದು ಗುರುತಿಸಿದ್ದಾರೆ. “ಭಾರತ”ದೊಂದಿಗೆ ಭದ್ರವಾಗಿ ನಿಲ್ಲುತ್ತೇವೆ ಎಂದು ಘೋಷಿಸಿರುವ ಅವರನ್ನು ವಕ್ತಾರ ಶಾಹಿದ್ ಖಾನ್, ವಕೀಲ ರಾಜಾ ಅಶ್ರಫ್, ಮತ್ತು ಮುಷ್ತಾಕ್ ತಂತರಿ ಎಂದು ಗುರುತಿಸಲಾಗಿದೆ.

ಆಗಸ್ಟ್ 5ರ ನಂತರ ಕಾಶ್ಮೀರದಲ್ಲಿ ನಡೆದ ಮೊದಲ “ಅಧಿಕೃತೇತರ” ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬೇರೆ ಯಾರೂ ಮಾಡದ” ಸಮಯದಲ್ಲಿ ಮಾತನಾಡಲು ಧೈರ್ಯ ಮಾಡುವ ಮೂಲಕ ತಮ್ಮ ಜೀವನವನ್ನು ಅಪಾಯದಲ್ಲಿಟ್ಟಿದ್ದೇವೆ ಎಂದು ಘೋಷಿಸಿಕೊಂಡಿದ್ದಾರೆ.

ತಾವು ಪ್ರಗತಿಪರ ಮನಸ್ಸನ್ನು ಹೊಂದಿದ್ದಾರೆಂದು ಹೇಳಿಕೊಂಡಿರುವ ಅವರು “370ನೇ ವಿಧಿ ರದ್ದತಿ ನಂತರ ಕಾಶ್ಮೀರದ ಬಗ್ಗೆ ಮಾಧ್ಯಮಗಳು ನಕಾರಾತ್ಮಕತೆಯನ್ನು ತೋರಿಸುವುದನ್ನು ಬಿಟ್ಟು ಸಕಾರಾತ್ಮಕತೆಯನ್ನು ತೋರಿಸಬೇಕೆಂದು ಮಾಧ್ಯಮವನ್ನು ಒತ್ತಾಯಿಸಿದರು.

ಶಾಹಿದ್ ಖಾನ್ ಅವರು ತಮ್ಮನ್ನು ಮಾಜಿ ಪತ್ರಕರ್ತ ಎಂದು ಪರಿಚಯಿಸಿಕೊಂಡಿದ್ದಲ್ಲದೇ ನನ್ನನ್ನು ಇಲ್ಲಿರುವ ಅನೇಕರ ಬಲ್ಲರು ಎಂದರು. ಆದರೆ ಹಾಜರಿದ್ದ ವರದಿಗಾರರು ಆತನನ್ನು ತಿಳಿದಿಲ್ಲವೆಂದು ಹೇಳಿದ್ದಾರೆ.

ಸೋಮವಾರದ ಪತ್ರಿಕಾಗೋಷ್ಟಿ ನಡೆಸಲು ಸರ್ಕಾರ ಅವರಿಗೆ ಅನುಮತಿ ನೀಡಿದೆ ಎಂದು ಅವರು ಹೇಳಿದ್ದಾರೆ. ಕಾಶ್ಮೀರದ ಮುಖ್ಯವಾಹಿನಿಯ ಮತ್ತು ಪ್ರತ್ಯೇಕತಾವಾದಿ ನಾಯಕರು ಜೈಲಿನಲ್ಲಿರುವ ಸಮಯದಲ್ಲಿ ಇದು ಹಲವರನ್ನು ಹುಬ್ಬೇರಿಸುವಂತೆ ಮಾಡಿದೆ. ಜೊತೆಗೆ ಹಲವಾರು ಟಿವಿ ಚಾನೆಲ್‌ಗಳ ಸಿಬ್ಬಂದಿಗಳು ಈ ಪತ್ರಿಕಾಗೋಷ್ಟಿಯನ್ನು ನೇರ ಪ್ರಸಾರ ಮಾಡುದ್ದಾರೆ ಮತ್ತು ಅದಕ್ಕೆ ಇನ್ನಿಲ್ಲದ ಪ್ರಾಮುಖ್ಯತೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಅವರು ಯಾರೆಂದು ಪತ್ರಕರ್ತರು ಪದೇ ಪದೇ ಕೇಳಿದಾಗ, ಅವರು “ಸಾಮಾನ್ಯ” ಮತ್ತು “ಸಾಮಾನ್ಯ” ಪುರುಷರು ಎಂದು ಸಿದ್ದಉತ್ತರ ನೀಡಿದ್ದಾರೆ.

“ನಾವು ಯಾರೆಂದು ನೀವು ಕೇಳುತ್ತಿದ್ದೀರಿ. ಅದಕ್ಕಾಗಿಯೇ ನಾವು ಮುಂದೆ ಬರಲು ಬಯಸುವುದಿಲ್ಲ. ಸದ್ಯಕ್ಕೆ ನಾವು ಏನೂ ಅಲ್ಲ…. ನಮ್ಮನ್ನು ಬಲ್ಲವರು ಹೆಚ್ಚು ಇಲ್ಲ. ಮುಂದೆ ಇಂತಹ ಪ್ರಶ್ನೆಗಳು ಉದ್ಭವಿಸುತ್ತವೆ ಮತ್ತು ಅನೇಕ ಜನರು ನಮ್ಮ ಬಗ್ಗೆ ಬಹಳಷ್ಟು ವಿಷಯಗಳನ್ನು ಹೇಳುತ್ತಾರೆ ಎಂದು ನಮಗೆ ತಿಳಿದಿದೆ” ಖಾನ್ ಹೇಳಿದ್ದಾರೆ.

ನಿಮ್ಮ ಪಕ್ಷವು ಜಮ್ಮು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಮಾಡುವುದನ್ನು ಬೆಂಬಲಿಸುತ್ತದೆಯೇ ಅಥವಾ ಅದನ್ನು ಪುನಃಸ್ಥಾಪಿಸಲು ಒತ್ತಾಯಿಸುತ್ತದೆಯೇ ಎಂಬ ಪ್ರಶ್ನೆಗೆ ಅವರ ಬಳಿ ಯಾವುದೇ ಸ್ಪಷ್ಟ ಉತ್ತರಗಳಿಲ್ಲ. “ವಿಶೇಷ ಸ್ಥಾನಮಾನ ಕಳೆದ 60-70 ವರ್ಷಗಳಿಂದ ನಮ್ಮೊಂದಿಗೆ ಇತ್ತು. ಇದನ್ನು ತೆಗೆದುಹಾಕುವಂತೆ ಯಾರೂ ಒತ್ತಾಯಿಸಲಿಲ್ಲ. ನಾವು ಬಹಳಷ್ಟು ಸಂಗತಿಗಳೊಂದಿಗೆ ಬದುಕುತ್ತೇವೆ. ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂಬುದನ್ನು ಕಾಲವೇ ಉತ್ತರಿಸಲಿದೆ”ಎಂದು ಖಾನ್ ಹೇಳಿದ್ದಾರೆ.

ಇವರ ಈ ಪತ್ರಿಕಾಗೋಷ್ಟಿಯು ಉತ್ತರ ಕೊಡುವುದರ ಬದಲು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟಿಸಿದೆ. ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರು ಗೃಹಬಂಧನದಲ್ಲಿರುವಾಗ ಇವರಿಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಪಕ್ಷ ಘೋಷಿಸಲು ಅನುಮತಿ ಕೊಟ್ಟವರ್ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಮುಂದೆ ಇದು ಯಾವ ರೀತಿಯ ತಿರುವು ತೆಗೆದುಕೊಳ್ಳುತ್ತದೆ ನೋಡಬೇಕಿದೆ.

ಮಾಹಿತಿ: ದಿ ಟೆಲಿಗ್ರಾಫ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...