Homeಕರ್ನಾಟಕಸ್ಪರ್ಧಾತ್ಮಕ ಪರೀಕ್ಷಾ ಕೊಠಡಿಯಲ್ಲಿ ಶಿರವಸ್ತ್ರ ನಿಷೇಧ, ಮಂಗಳಸೂತ್ರಕ್ಕೆ ಅವಕಾಶ: ಕೆಇಎ

ಸ್ಪರ್ಧಾತ್ಮಕ ಪರೀಕ್ಷಾ ಕೊಠಡಿಯಲ್ಲಿ ಶಿರವಸ್ತ್ರ ನಿಷೇಧ, ಮಂಗಳಸೂತ್ರಕ್ಕೆ ಅವಕಾಶ: ಕೆಇಎ

- Advertisement -
- Advertisement -

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ವಿವಿಧ ಬೋರ್ಡ್‌ಗಳು ಮತ್ತು ಕಾರ್ಪೊರೇಷನ್‌ಗಳಿಗೆ ನೇಮಕಾತಿ ಪರೀಕ್ಷೆಯ ಸಮಯದಲ್ಲಿ ಪರೀಕ್ಷಾ ಹಾಲ್‌ನಲ್ಲಿ ಎಲ್ಲಾ ರೀತಿಯ ಶಿರವಸ್ತ್ರವನ್ನು ಧರಿಸುವುದನ್ನು ನಿರ್ಬಂಧಿಸಿದೆ. ಡ್ರೆಸ್ ಕೋಡ್‌ನಲ್ಲಿ ಸ್ಪಷ್ಟವಾಗಿ ಹಿಜಾಬ್‌ ಎಂದು ಉಲ್ಲೇಖಿಸದಿದ್ದರೂ, ಹೊಸ ಮಾರ್ಗಸೂಚಿಗಳಿಂದ ಇದು ಸೂಚಿತವಾಗಿದೆ.

ಬ್ಲೂಟೂತ್ ಸಾಧನಗಳನ್ನು ಬಳಸಿಕೊಂಡು ಪರೀಕ್ಷಾ ಅಕ್ರಮಗಳನ್ನು ತಡೆಯುವ ಪ್ರಯತ್ನದ ಭಾಗವಾಗಿ ನೂತನ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನ.6 ರಂದು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗೆ ಹಾಜರಾಗುತ್ತಿದ್ದ ಮಹಿಳೆಯೊಬ್ಬರಿಗೆ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು ಮಂಗಳಸೂತ್ರವನ್ನು ತೆಗೆಯುವಂತೆ ಹೇಳಲಾಗಿತ್ತು. ಹಿಂದುತ್ವ ಗುಂಪುಗಳ ಪ್ರತಿಭಟನೆಯ ನಂತರ KEA ಇದೀಗ ಇತರ ಆಭರಣಗಳನ್ನು ನಿರ್ಬಂಧಿಸುವ ಸಂದರ್ಭದಲ್ಲಿ ಮಹಿಳೆಯರಿಗೆ ಮಂಗಳಸೂತ್ರ ಮತ್ತು ಟೋ ರಿಂಗ್‌ಗಳನ್ನು ಪರೀಕ್ಷಾ ಕೊಠಡಿಯಲ್ಲಿ ಧರಿಸಲು ಅನುಮತಿ ನೀಡಿದೆ.

ರಾಜ್ಯಾದ್ಯಂತ ನ.18 ಮತ್ತು 19ರಂದು ವಿವಿಧ ಮಂಡಳಿಗಳು ಮತ್ತು ನಿಗಮಗಳ ನೇಮಕಾತಿ ಪರೀಕ್ಷೆಗಳು ನಡೆಯಲಿವೆ.

ಅಕ್ಟೋಬರ್‌ನಲ್ಲಿ ಕರ್ನಾಟಕ ಸರ್ಕಾರವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿತ್ತು. ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಅವರು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಗಳಿಗೆ ಬರಲು ಅವಕಾಶ ಇದೆ ಎಂದು ಹೇಳಿದ್ದರು.

ಆದರೆ ಇದೀಗ ಅಕ್ರಮವಾಗಿ ಬ್ಲೂಟೂತ್ ಸಾಧನಗಳ ಬಳಕೆ ಹಿನ್ನೆಲೆ ರಾಜ್ಯ ಸರ್ಕಾರವು ಈ ರೀತಿ ಹೊಸ ಆದೇಶವನ್ನು ಹೊರಡಿಸಿದೆ. ಅಕ್ಟೋಬರ್‌ನಲ್ಲಿ ಕೆಇಎ ನಡೆಸಿದ ಪರೀಕ್ಷೆ ವೇಳೆ ಕಲಬುರಗಿ ಮತ್ತು ಯಾದಗಿರಿ ಪರೀಕ್ಷಾ ಕೇಂದ್ರಗಳಲ್ಲಿ ಬ್ಲೂಟೂತ್ ಸಾಧನಗಳನ್ನು ಬಳಸಿರುವ ಘಟನೆಯ ಕುರಿತು ರಾಜ್ಯ ಸರ್ಕಾರವು ನ.11 ರಂದು ಸಿಐಡಿ ತನಿಖೆಗೆ ಆದೇಶಿಸಿದೆ.

ಡ್ರೆಸ್ ಕೋಡ್  ಪ್ರಕಾರ, ಅಭ್ಯರ್ಥಿಗಳು ಎತ್ತರದ ಬೂಟುಗಳು, ಜೀನ್ಸ್ ಮತ್ತು ಟಿ-ಶರ್ಟ್‌ಗಳನ್ನು ಧರಿಸುವುದನ್ನು ನಿರ್ಬಂಧಿಸಿದೆ. ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರವನ್ನು ಧರಿಸುವುದನ್ನು, ತಲೆ, ಕಿವಿ, ಮೂಗನ್ನು ಮುಚ್ಚುವ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ. ಯಾವುದೇ ರೀತಿಯ ಮಾಸ್ಕನ್ನು ಕೂಡ ಧರಿಸುವತಿಲ್ಲ ಎಂದು ಸೂಚಿಸಲಾಗಿದೆ.

ಎಲೆಕ್ಟ್ರಾನಿಕ್‌ ವಸ್ತುಗಳು, ಮೊಬೈಲ್‌ ಪೋನ್‌ಗಳು, ಬ್ಲೂಟುಥ್, ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಗೆ ತರದಂತೆ ನಿಷೇಧ ವಿಧಿಸಲಾಗಿದೆ. ಪೆನ್ಸಿಲ್‌, ಪೇಪರ್‌, ಎರೇಸರ್‌, ಬಾಕ್ಸ್‌ಗಳು, ಆಹಾರ ಪದಾರ್ಥಗಳನ್ನು ತರದಂತೆ ನಿಷೇಧ ವಿಧಿಸಲಾಗಿದೆ.

ಇದನ್ನು ಓದಿ: ಮರುನಾಡನ್ ಮಲಯಾಳಿ’ ಯೂಟ್ಯೂಬ್ ಚಾನೆಲ್ ಸಂಸ್ಥಾಪಕರ ವಿರುದ್ಧ ಪ್ರಕರಣ ದಾಖಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...