Homeಮುಖಪುಟಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

ಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

- Advertisement -
- Advertisement -

ಹೆಚ್ಚುತ್ತಿರುವ ರೋಗಿಗಳ ಹೊರೆಯನ್ನು ನಿಭಾಯಿಸಲು ವೈದ್ಯಕೀಯ ನೆರವು, ಶಸ್ತ್ರಚಿಕಿತ್ಸಕರು, ದಾದಿಯರು, ಎಕ್ಸ್-ರೇ ತಂತ್ರಜ್ಞರು ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞರನ್ನು ತಕ್ಷಣದ ಪೂರೈಕೆ ಮಾಡಬೇಕು ಎಂದು ಗಾಜಾದ ಅಲ್-ಅಹ್ಲಿ ಅರಬ್ ಆಸ್ಪತ್ರೆಯ ವೈದ್ಯರು ಭಾನುವಾರ ಮನವಿ ಮಾಡಿದ್ದಾರೆ.

ಕಳೆದ ವಾರ ಇಸ್ರೇಲಿ ದಾಳಿಯಿಂದಾಗಿ ಎರಡು ದೊಡ್ಡ ಆಸ್ಪತ್ರೆಗಳಾದ ಅಲ್-ಶಿಫಾ ಮತ್ತು ಅಲ್-ಕುದ್ಸ್ – ಸೇವೆಯನ್ನು ಸ್ಥಗಿತಗೊಳಿಸಿದ್ದರಿಂದ ಅಲ್-ಅಹ್ಲಿಯಲ್ಲಿ ಜನರು ಚಿಕಿತ್ಸೆಗಾಗಿ ಬರುತ್ತಿದ್ದಾರೆ.

ಅಕ್ಟೋಬರ್ 17 ರಂದು, ಅಲ್-ಅಹ್ಲಿ ಆಸ್ಪತ್ರೆಯು ಸಹ ಬಾಂಬ್ ದಾಳಿಗೆ ತುತ್ತಾಗಿತ್ತು. ಇದರಿಂದ ಹೆಚ್ಚಿನ ಸಂಖ್ಯೆಯ ಸಾವುನೋವುಗಳಿಗೆ ಸಂಭವಿಸಿದ್ದವು. ಆದರೆ ಅದು ತಿಂಗಳ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲು ಆರಂಭಿಸಿತು.

ಆಸ್ಪತ್ರೆಯ ಮೂಳೆಚಿಕಿತ್ಸಕ ವಿಭಾಗದ ಮುಖ್ಯಸ್ಥ ಡಾ.ಫಾಡೆಲ್ ನೈಮ್ ಅವರು, ಮಾಧ್ಯಮಗಳಿಗೆ ವಾಟ್ಸಾಪ್ ಮೂಲಕ ಧ್ವನಿ ಸಂದೇಶವನ್ನು ಕಳುಹಿಸಿದ್ದಾರೆ. ”ಇದೀಗ, ಕಾರ್ಯನಿರ್ವಹಿಸುತ್ತಿರುವ ಏಕೈಕ ಆಸ್ಪತ್ರೆ ಅಲ್-ಅಹ್ಲಿ ಆಸ್ಪತ್ರೆ, ಹಾಗಾಗಿ ನಾವು ಹೆಚ್ಚಿನ ಸಂಖ್ಯೆಯ ಜನರಿಗೆ ಚಿಕಿತ್ಸೆ ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಈ ಧ್ವನಿ ಸಂದೇಶದಲ್ಲೂ ಬಾಂಬ್ ಸ್ಫೋಟದ ಸದ್ದು ಕೇಳಿಸಿದೆ.

”ನಮ್ಮದು ಒಂದು ಸಣ್ಣ ಆಸ್ಪತ್ರೆಯಾಗಿದ್ದು ಹೆಚ್ಚಿನ ಸೌಲಭ್ಯಗಳು ಬೇಕಿದೆ. ನಾವು ಈಗ ಅಗತ್ಯಕ್ಕೆ ಸರಿಹೊಂದುವಂತೆ ನಮ್ಮನ್ನು ಮಾರ್ಪಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಅಲ್ ಅಹ್ಲಿ ಆಸ್ಪತ್ರೆಯನ್ನು ಸರ್ಕಾರೇತರ ಸಂಸ್ಥೆಯು ನಿರ್ವಹಿಸುತ್ತದೆ. ಮಕ್ಕಳ, ಮೂಳೆಚಿಕಿತ್ಸೆ, ಇಎನ್‌ಟಿ, ಸಾಮಾನ್ಯ ಶಸ್ತ್ರಚಿಕಿತ್ಸೆ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಸೀಮಿತ ವಿಶೇಷತೆಗಳನ್ನು ಹೊಂದಿದೆ. ಆಸ್ಪತ್ರೆಯು ವಿಶೇಷ ಶಸ್ತ್ರಚಿಕಿತ್ಸಕರನ್ನು ಹೊಂದಿಲ್ಲ.

”ಅನೇಕ ಗಾಯಾಳುಗಳು ಬರುತ್ತಿದ್ದಾರೆ. ಆಸ್ಪತ್ರೆಗೆ ರಕ್ತದ ಪೂರೈಕೆಯ ಅವಶ್ಯಕತೆಯಿದೆ. ಸೆಂಟ್ರಲ್ ಬ್ಲಡ್ ಬ್ಯಾಂಕ್ ಅಲ್-ಶಿಫಾ ಆಸ್ಪತ್ರೆಯ ಗಾಜಾದ ಪಶ್ಚಿಮ ಭಾಗದಲ್ಲಿದೆ. ಅಲ್ಲಿಗೆ ತಲುಪಲು ಸಾಧ್ಯವಿಲ್ಲ. ನಾವು ಅಲ್ಲಿಗೆ ಹೋಗಲು ಹಲವು ಬಾರಿ ಪ್ರಯತ್ನಿಸಿದೆವು, ಆದರೆ ಇಸ್ರೇಲಿಗಳು ಗುಂಡು ಹಾರಿಸಿದರು” ಎಂದು ಹೇಳಿದರು.

”ಆಸ್ಪತ್ರೆಯಲ್ಲಿ ರೋಗಿಗಳು ರಕ್ತಸ್ರಾವದ ಪರಿಸ್ಥಿತಿಯಲ್ಲಿದ್ದಾರೆ. ರಕ್ತ ವರ್ಗಾವಣೆಯ ಅಗತ್ಯವಿದೆ. ರಕ್ತದ ಕೊರತೆಯಿಂದ ಕೆಲವು ರೋಗಿಗಳು ಈಗಾಗಲೇ ಸಾವನ್ನಪ್ಪಿದ್ದಾರೆ” ಎಂದು ಅವರು ಹೇಳಿದರು.

”ಜೀವ ಉಳಿಸದ ಎಲ್ಲಾ ಶಸ್ತ್ರಚಿಕಿತ್ಸೆಗಳನ್ನು ಆಸ್ಪತ್ರೆಯು ಮುಂದೂಡುತ್ತಿದೆ. ಹೆಚ್ಚಿನ ಗಾಯಾಳುಗಳಿಗೆ ಮೂಳೆಚಿಕಿತ್ಸೆಯ ಕಾರ್ಯವಿಧಾನಗಳ ಅಗತ್ಯವಿರುತ್ತದೆ ಮತ್ತು ಜೀವ ಉಳಿಸುವ ಶಸ್ತ್ರಚಿಕಿತ್ಸೆ ಮಾಡುತ್ತಿಲ್ಲ” ಎಂದು ನೈಮ್ ಹೇಳಿದರು.

”ಹೆಚ್ಚಿನ ಆರೋಗ್ಯ ಸಿಬ್ಬಂದಿ ವಾರಗಟ್ಟಲೆ ತಮ್ಮ ಕುಟುಂಬವನ್ನು ಭೇಟಿ ಮಾಡಿಲ್ಲ. ನನ್ನ ಕುಟುಂಬವನ್ನು ನಾನು ಕೊನೆಯದಾಗಿ ಮೂರು ವಾರಗಳ ಹಿಂದೆ ನೋಡಿದೆ. ಅವರ ಕುಟುಂಬವು ಗಾಜಾದ ದಕ್ಷಿಣ ಭಾಗದಲ್ಲಿ ನಿರಾಶ್ರಿತರ ಶಿಬಿರದಲ್ಲಿದೆ” ಎಂದರು.

”ನಾವು ದಕ್ಷಿಣ ಭಾಗಕ್ಕೆ ಹೋದರೆ, ಉತ್ತರಕ್ಕೆ ಹಿಂತಿರುಗುವುದು ಅಪಾಯಕಾರಿ. ಆದ್ದರಿಂದ ನಮ್ಮಲ್ಲಿ ಹೆಚ್ಚಿನವರು ಹೋಗದಿರಲು ನಿರ್ಧರಿಸಿದ್ದೇವೆ ಮತ್ತು ನಾವು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿರುತ್ತೇವೆ” ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ 500 ಕ್ಕೂ ಹೆಚ್ಚು ಗಾಯಗೊಂಡಿರುವವರಿದ್ದಾರೆ. ಕೇವಲ ಮೂರು ಶಸ್ತ್ರಚಿಕಿತ್ಸಕರು ಮತ್ತು ಇಬ್ಬರು ಅರಿವಳಿಕೆ ತಜ್ಞರಿದ್ದಾರೆ ಎಂದು ಅಲ್ ಅಹ್ಲಿಯ ಪ್ಲಾಸ್ಟಿಕ್ ಸರ್ಜನ್ ಡಾ ಘಸನ್ ಅಬು ಸಿಟ್ಟಾ ಅಲ್ ಜಜೀರಾಗೆ ತಿಳಿಸಿದರು.

ಇದನ್ನೂ ಓದಿ: ಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...