Homeಮುಖಪುಟಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

ಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

- Advertisement -
- Advertisement -

ಹೆಚ್ಚುತ್ತಿರುವ ರೋಗಿಗಳ ಹೊರೆಯನ್ನು ನಿಭಾಯಿಸಲು ವೈದ್ಯಕೀಯ ನೆರವು, ಶಸ್ತ್ರಚಿಕಿತ್ಸಕರು, ದಾದಿಯರು, ಎಕ್ಸ್-ರೇ ತಂತ್ರಜ್ಞರು ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞರನ್ನು ತಕ್ಷಣದ ಪೂರೈಕೆ ಮಾಡಬೇಕು ಎಂದು ಗಾಜಾದ ಅಲ್-ಅಹ್ಲಿ ಅರಬ್ ಆಸ್ಪತ್ರೆಯ ವೈದ್ಯರು ಭಾನುವಾರ ಮನವಿ ಮಾಡಿದ್ದಾರೆ.

ಕಳೆದ ವಾರ ಇಸ್ರೇಲಿ ದಾಳಿಯಿಂದಾಗಿ ಎರಡು ದೊಡ್ಡ ಆಸ್ಪತ್ರೆಗಳಾದ ಅಲ್-ಶಿಫಾ ಮತ್ತು ಅಲ್-ಕುದ್ಸ್ – ಸೇವೆಯನ್ನು ಸ್ಥಗಿತಗೊಳಿಸಿದ್ದರಿಂದ ಅಲ್-ಅಹ್ಲಿಯಲ್ಲಿ ಜನರು ಚಿಕಿತ್ಸೆಗಾಗಿ ಬರುತ್ತಿದ್ದಾರೆ.

ಅಕ್ಟೋಬರ್ 17 ರಂದು, ಅಲ್-ಅಹ್ಲಿ ಆಸ್ಪತ್ರೆಯು ಸಹ ಬಾಂಬ್ ದಾಳಿಗೆ ತುತ್ತಾಗಿತ್ತು. ಇದರಿಂದ ಹೆಚ್ಚಿನ ಸಂಖ್ಯೆಯ ಸಾವುನೋವುಗಳಿಗೆ ಸಂಭವಿಸಿದ್ದವು. ಆದರೆ ಅದು ತಿಂಗಳ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲು ಆರಂಭಿಸಿತು.

ಆಸ್ಪತ್ರೆಯ ಮೂಳೆಚಿಕಿತ್ಸಕ ವಿಭಾಗದ ಮುಖ್ಯಸ್ಥ ಡಾ.ಫಾಡೆಲ್ ನೈಮ್ ಅವರು, ಮಾಧ್ಯಮಗಳಿಗೆ ವಾಟ್ಸಾಪ್ ಮೂಲಕ ಧ್ವನಿ ಸಂದೇಶವನ್ನು ಕಳುಹಿಸಿದ್ದಾರೆ. ”ಇದೀಗ, ಕಾರ್ಯನಿರ್ವಹಿಸುತ್ತಿರುವ ಏಕೈಕ ಆಸ್ಪತ್ರೆ ಅಲ್-ಅಹ್ಲಿ ಆಸ್ಪತ್ರೆ, ಹಾಗಾಗಿ ನಾವು ಹೆಚ್ಚಿನ ಸಂಖ್ಯೆಯ ಜನರಿಗೆ ಚಿಕಿತ್ಸೆ ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಈ ಧ್ವನಿ ಸಂದೇಶದಲ್ಲೂ ಬಾಂಬ್ ಸ್ಫೋಟದ ಸದ್ದು ಕೇಳಿಸಿದೆ.

”ನಮ್ಮದು ಒಂದು ಸಣ್ಣ ಆಸ್ಪತ್ರೆಯಾಗಿದ್ದು ಹೆಚ್ಚಿನ ಸೌಲಭ್ಯಗಳು ಬೇಕಿದೆ. ನಾವು ಈಗ ಅಗತ್ಯಕ್ಕೆ ಸರಿಹೊಂದುವಂತೆ ನಮ್ಮನ್ನು ಮಾರ್ಪಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಅಲ್ ಅಹ್ಲಿ ಆಸ್ಪತ್ರೆಯನ್ನು ಸರ್ಕಾರೇತರ ಸಂಸ್ಥೆಯು ನಿರ್ವಹಿಸುತ್ತದೆ. ಮಕ್ಕಳ, ಮೂಳೆಚಿಕಿತ್ಸೆ, ಇಎನ್‌ಟಿ, ಸಾಮಾನ್ಯ ಶಸ್ತ್ರಚಿಕಿತ್ಸೆ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಸೀಮಿತ ವಿಶೇಷತೆಗಳನ್ನು ಹೊಂದಿದೆ. ಆಸ್ಪತ್ರೆಯು ವಿಶೇಷ ಶಸ್ತ್ರಚಿಕಿತ್ಸಕರನ್ನು ಹೊಂದಿಲ್ಲ.

”ಅನೇಕ ಗಾಯಾಳುಗಳು ಬರುತ್ತಿದ್ದಾರೆ. ಆಸ್ಪತ್ರೆಗೆ ರಕ್ತದ ಪೂರೈಕೆಯ ಅವಶ್ಯಕತೆಯಿದೆ. ಸೆಂಟ್ರಲ್ ಬ್ಲಡ್ ಬ್ಯಾಂಕ್ ಅಲ್-ಶಿಫಾ ಆಸ್ಪತ್ರೆಯ ಗಾಜಾದ ಪಶ್ಚಿಮ ಭಾಗದಲ್ಲಿದೆ. ಅಲ್ಲಿಗೆ ತಲುಪಲು ಸಾಧ್ಯವಿಲ್ಲ. ನಾವು ಅಲ್ಲಿಗೆ ಹೋಗಲು ಹಲವು ಬಾರಿ ಪ್ರಯತ್ನಿಸಿದೆವು, ಆದರೆ ಇಸ್ರೇಲಿಗಳು ಗುಂಡು ಹಾರಿಸಿದರು” ಎಂದು ಹೇಳಿದರು.

”ಆಸ್ಪತ್ರೆಯಲ್ಲಿ ರೋಗಿಗಳು ರಕ್ತಸ್ರಾವದ ಪರಿಸ್ಥಿತಿಯಲ್ಲಿದ್ದಾರೆ. ರಕ್ತ ವರ್ಗಾವಣೆಯ ಅಗತ್ಯವಿದೆ. ರಕ್ತದ ಕೊರತೆಯಿಂದ ಕೆಲವು ರೋಗಿಗಳು ಈಗಾಗಲೇ ಸಾವನ್ನಪ್ಪಿದ್ದಾರೆ” ಎಂದು ಅವರು ಹೇಳಿದರು.

”ಜೀವ ಉಳಿಸದ ಎಲ್ಲಾ ಶಸ್ತ್ರಚಿಕಿತ್ಸೆಗಳನ್ನು ಆಸ್ಪತ್ರೆಯು ಮುಂದೂಡುತ್ತಿದೆ. ಹೆಚ್ಚಿನ ಗಾಯಾಳುಗಳಿಗೆ ಮೂಳೆಚಿಕಿತ್ಸೆಯ ಕಾರ್ಯವಿಧಾನಗಳ ಅಗತ್ಯವಿರುತ್ತದೆ ಮತ್ತು ಜೀವ ಉಳಿಸುವ ಶಸ್ತ್ರಚಿಕಿತ್ಸೆ ಮಾಡುತ್ತಿಲ್ಲ” ಎಂದು ನೈಮ್ ಹೇಳಿದರು.

”ಹೆಚ್ಚಿನ ಆರೋಗ್ಯ ಸಿಬ್ಬಂದಿ ವಾರಗಟ್ಟಲೆ ತಮ್ಮ ಕುಟುಂಬವನ್ನು ಭೇಟಿ ಮಾಡಿಲ್ಲ. ನನ್ನ ಕುಟುಂಬವನ್ನು ನಾನು ಕೊನೆಯದಾಗಿ ಮೂರು ವಾರಗಳ ಹಿಂದೆ ನೋಡಿದೆ. ಅವರ ಕುಟುಂಬವು ಗಾಜಾದ ದಕ್ಷಿಣ ಭಾಗದಲ್ಲಿ ನಿರಾಶ್ರಿತರ ಶಿಬಿರದಲ್ಲಿದೆ” ಎಂದರು.

”ನಾವು ದಕ್ಷಿಣ ಭಾಗಕ್ಕೆ ಹೋದರೆ, ಉತ್ತರಕ್ಕೆ ಹಿಂತಿರುಗುವುದು ಅಪಾಯಕಾರಿ. ಆದ್ದರಿಂದ ನಮ್ಮಲ್ಲಿ ಹೆಚ್ಚಿನವರು ಹೋಗದಿರಲು ನಿರ್ಧರಿಸಿದ್ದೇವೆ ಮತ್ತು ನಾವು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿರುತ್ತೇವೆ” ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ 500 ಕ್ಕೂ ಹೆಚ್ಚು ಗಾಯಗೊಂಡಿರುವವರಿದ್ದಾರೆ. ಕೇವಲ ಮೂರು ಶಸ್ತ್ರಚಿಕಿತ್ಸಕರು ಮತ್ತು ಇಬ್ಬರು ಅರಿವಳಿಕೆ ತಜ್ಞರಿದ್ದಾರೆ ಎಂದು ಅಲ್ ಅಹ್ಲಿಯ ಪ್ಲಾಸ್ಟಿಕ್ ಸರ್ಜನ್ ಡಾ ಘಸನ್ ಅಬು ಸಿಟ್ಟಾ ಅಲ್ ಜಜೀರಾಗೆ ತಿಳಿಸಿದರು.

ಇದನ್ನೂ ಓದಿ: ಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...