HomeUncategorizedಗಾಝಾ: ಅಲ್ ಶಿಫಾ ಆಸ್ಪತ್ರೆಯ ಆವರಣದಲ್ಲಿ 179 ಜನರ ಸಾಮೂಹಿಕ ಸಮಾಧಿ

ಗಾಝಾ: ಅಲ್ ಶಿಫಾ ಆಸ್ಪತ್ರೆಯ ಆವರಣದಲ್ಲಿ 179 ಜನರ ಸಾಮೂಹಿಕ ಸಮಾಧಿ

- Advertisement -
- Advertisement -

ಗಾಝಾದ ಅತಿದೊಡ್ಡ ಅಲ್ ಶಿಫಾ ಆಸ್ಪತ್ರೆಯಲ್ಲಿ ಶಿಶುಗಳು ಸೇರಿದಂತೆ 179 ಜನರನ್ನು ಆಸ್ಪತ್ರೆಯ ಆವರಣದೊಳಗೆ ಸಾಮೂಹಿಕ ಸಮಾಧಿ ಮಾಡಲಾಗಿದೆ ಎಂದು ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥ ಮೊಹಮ್ಮದ್ ಅಬು ಸಲ್ಮಿಯಾ ಹೇಳಿದ್ದಾರೆ.

ಅಲ್ ಶಿಫಾ ಆಸ್ಪತ್ರೆಯಲ್ಲಿನ ಮಾನವೀಯ ಬಿಕ್ಕಟ್ಟನ್ನು ಅಬು ಸಲ್ಮಿಯಾ ಒತ್ತಿಹೇಳಿದ್ದು, ನಾವು ಅವರನ್ನು ಸಾಮೂಹಿಕವಾಗಿ ಸಮಾಧಿ ಮಾಡಿದ್ದೇವೆಂದು ಹೇಳಿದ್ದಾರೆ. ಆಸ್ಪತ್ರೆಯಲ್ಲಿ ಇಂಧನ ಕೊರತೆ ನಂತರ ತೀವ್ರ ನಿಗಾ ಘಟಕದಲ್ಲಿ 7 ಶಿಶುಗಳು ಮತ್ತು 29 ಇತರರು ಮೃತಪಟ್ಟಿದ್ದು ಅವರನ್ನು ಕೂಡ ಆಸ್ಪತ್ರೆ ಕಾಂಪ್ಲೆಕ್ಸ್‌ನಲ್ಲಿ ಸಮಾಧಿ ಮಾಡಲಾಗಿದೆ.

ಪತ್ರಕರ್ತರೊಬ್ಬರು, ಕೊಳೆತ ದೇಹಗಳ ದುರ್ನಾತ ಎಲ್ಲೆಡೆ ಹರಡಿದೆ ಎಂದು ಹೇಳಿದ್ದಾರೆ. ಆಸ್ಪತ್ರೆಯ ವೈದ್ಯರೋರ್ವರು ಅಪರಿಸ್ಥಿತಿಯನ್ನು ಅಮಾನವೀಯ ಎಂದು ಕರೆದಿದ್ದು, ವಿದ್ಯುತ್, ನೀರು, ಆಹಾರ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.

ಅಲ್ ಶಿಫಾ ಆಸ್ಪತ್ರೆಯು ಗಾಝಾ ನಗರದ ಅತಿದೊಡ್ಡ ಆಸ್ಪತ್ರೆಯಾಗಿದೆ. ಇಸ್ರೇಲ್‌ ಪಡೆ ಇದೀಗ ಆಸ್ಪತ್ರೆಯ ಗೇಟ್‌ನ್ನು ಸುತ್ತುವರಿದಿದೆ. ಆಸ್ಪತ್ರೆಯ ಆವರಣದ ಬಳಿ ಇಸ್ರೇಲ್‌ ದಾಳಿ ಬಳಿಕ ಆಸ್ಪತ್ರೆಗೆ ವಿದ್ಯುತ್‌ ಕೊರತೆ  ಉಂಟಾಗಿದೆ. ಆಮ್ಲಜನಕದ ಕೊರತೆಯಿಂದ ನವಜಾತ ಶಿಶುಗಳ ಸಾವು ಸಂಭವಿಸಿದೆ. ಐಸಿಯು ಘಟಕಗಳ ಸ್ಥಗಿತದಿಂದ ಅಪಾರ ಸಾವುಗಳು ಸಂಭವಿಸಿದೆ.

ರೋಗಿಗಳು, ಸಿಬ್ಬಂದಿ ಮತ್ತು ಸ್ಥಳಾಂತರಗೊಂಡ ನಾಗರಿಕರು ಸೇರಿದಂತೆ 10,000 ಕ್ಕೂ ಹೆಚ್ಚು ಜನರು ಅಲ್ ಶಿಫಾದೊಳಗೆ ಇರಬಹುದು ಎನ್ನಲಾಗಿದೆ. ಆದರೆ ಆಸ್ಪತ್ರೆ ಸುತ್ತ ಇಸ್ರೇಲ್‌ ಪಡೆಗಳು ಆವರಿಸಿದ ಕಾರಣ ತೆರವಿಗೆ ಸಮಸ್ಯೆಯಾಗಿದೆ.

ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ಅಂತರಾಷ್ಟ್ರೀಯ ಮಾನವೀಯ ಕಾನೂನಿನ ಅಡಿಯಲ್ಲಿ ರಕ್ಷಿಸಬೇಕಿದೆ ಮತ್ತು ಅವರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಬೇಕು. ರೋಗಿಗಳು, ಸಿಬ್ಬಂದಿ ಮತ್ತು ಇತರ ನಾಗರಿಕರನ್ನು ರಕ್ಷಿಸಬೇಕು ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಕಚೇರಿ ತಿಳಿಸಿದೆ.

ಈ ಮಧ್ಯೆ ಶಿಶುಗಳನ್ನು ಸ್ಥಳಾಂತರಿಸಲು ಸಹಾಯ ಮಾಡುವುದಾಗಿ ಇಸ್ರೇಲ್ ವಾಗ್ದಾನ ಮಾಡಿತ್ತು. ಅದು ಇಲ್ಲಿಯವರೆಗೆ  ನಡೆದಿಲ್ಲ.

ಇಂದು ಮುಂಜಾನೆ ಅಲ್ ಶಿಫಾ ಆಸ್ಪತ್ರೆಯಿಂದ ಹೃದಯ ವಿದ್ರಾಹಕ ಚಿತ್ರಗಳು ವೈರಲ್‌ ಆಗಿದೆ. 7 ಶಿಶುಗಳನ್ನು ಒಟ್ಟಿಗೆ  ಹಸಿರು ಬಟ್ಟೆ ಹೊದಿಸಿ ಇರಿಸಲಾಗಿತ್ತು. ಶಿಶುಗಳನ್ನು ಐಸಿಯುನ ಬದಲು ವಿದ್ಯುತ್‌ ಇಲ್ಲದ ಕಾರಣ ಸಾಮಾನ್ಯ ಹಾಸಿಗೆಗಳಲ್ಲಿ ಇರಿಸಿದ ಕಾರಣ ಮೃತಪಟ್ಟಿತ್ತು.

ಗಾಝಾದಲ್ಲಿನ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಇಸ್ರೇಲ್‌ ಈವರೆಗೆ ನಡೆಸಿದ ದಾಳಿಯಲ್ಲಿ  ಈಗಾಗಲೇ 11,240 ಜನರ ಹತ್ಯೆ ನಡೆದಿದೆ. ಇದರಲ್ಲಿ 40%ದಷ್ಟು ಮಕ್ಕಳು ಇದ್ದಾರೆ. ಹಮಾಸ್‌ ಇಸ್ರೇಲ್‌ ಮೇಲೆ ಅ.7ರಂದು ನಡೆಸಿದ ರಾಕೆಟ್‌ ದಾಳಿಗೆ 1,200 ಮಂದಿ ಮೃತಪಟ್ಟಿದ್ದು, 200 ಮಂದಿಯನ್ನು ಒತ್ತೆಯಾಳುಗಳಾಗಿ ಇರಿಸಲಾಗಿದೆ.

ಇದನ್ನು ಓದಿ: ದಲಿತರಿಗೆ ಬಿಜೆಪಿಯಲ್ಲಿ ಅವಕಾಶ ಸಿಗುವುದಿಲ್ಲ: ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...