Homeಮುಖಪುಟಇಸ್ರೇಲ್‌ಗೆ ಬೆಂಬಲ: ಬೈಡನ್‌ ನಿಲುವಿಗೆ ಅಮೆರಿಕದಲ್ಲಿ ಹೆಚ್ಚಿದ ಆಂತರಿಕ ಅಸಮಾಧಾನ

ಇಸ್ರೇಲ್‌ಗೆ ಬೆಂಬಲ: ಬೈಡನ್‌ ನಿಲುವಿಗೆ ಅಮೆರಿಕದಲ್ಲಿ ಹೆಚ್ಚಿದ ಆಂತರಿಕ ಅಸಮಾಧಾನ

- Advertisement -
- Advertisement -

ಗಾಝಾ ಮೇಲೆ ದಾಳಿ ನಡೆಸಲು ಇಸ್ರೇಲ್‌ಗೆ ಜೋ ಬೈಡನ್‌ ಬೆಂಬಲ ಕೊಟ್ಟಿರುವುದು ಇದೀಗ ಅಮೆರಿಕದಲ್ಲಿ ಆಂತರಿಕ ಅಸಮಾಧಾನವನ್ನು ಹೆಚ್ಚಿಸಿದೆ. ಜೋ ಬೈಡನ್‌ ನಿಲುವನ್ನು ವಿರೋಧಿಸಿ 500ಕ್ಕೂ ಅಧಿಕ ಅಧಿಕಾರಿಗಳು ಸಹಿಯನ್ನು ಮಾಡಿ  ಪತ್ರವೊಂದನ್ನು ಕಳುಹಿಸಿದ್ದಾರೆ.

ಯುಎಸ್‌ನ ಸುಮಾರು 40 ಸರ್ಕಾರಿ ಕಚೇರಿಯ 500ಕ್ಕೂ ಅಧಿಕ ಸಿಬ್ಬಂದಿಗಳು ಮಂಗಳವಾರ ಯುಎಸ್ ಅಧ್ಯಕ್ಷ ಜೋ ಬೈಡನ್‌ಗೆ ಮತ್ತು ಕ್ಯಾಬಿನೆಟ್‌ಗೆ ಬರೆದ ಪತ್ರದಲ್ಲಿ ಗಾಝಾ ಪಟ್ಟಿಯ ಮೇಲಿನ ದಾಳಿಯನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿದೆ ಮತ್ತು ಗಾಝಾ ಪಟ್ಟಿಗೆ ಮಾನವೀಯ ಸಹಾಯವನ್ನು ಅನುಮತಿಸುವಂತೆ ಸೂಚಿಸಲು ಆಗ್ರಹಿಸಿದೆ.

ಪತ್ರದಲ್ಲಿ ಅ.7ರಂದು 1,200 ಇಸ್ರೇಲ್‌ ನಾಗರಿಕರನ್ನು ಕೊಂದ ಹಮಾಸ್ ದಾಳಿಯನ್ನು ಕೂಡ ಖಂಡಿಸಲಾಗಿದೆ. ಗಾಝಾದ  ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿತ್ತು. ಇದಕ್ಕೆ ಅಮೆರಿಕ ಬೆಂಬಲವನ್ನು ಸೂಚಿಸಿತ್ತು. ಯುದ್ಧಕ್ಕೆ ಬೇಕಾದ ಶಸ್ತ್ರಾಸ್ತ್ರಗಳನ್ನು ಕೂಡ ರವಾನಿಸಿತ್ತು. ಈಗ ಗಾಝಾದಲ್ಲಿ 11,200ಕ್ಕೂ ಹೆಚ್ಚು ಜನರನ್ನು ಇಸ್ರೇಲ್‌ ಮಿಲಿಟರಿ ಹತ್ಯೆ ಮಾಡಿದೆ.

ನಾವು ತುರ್ತು ಕದನ ವಿರಾಮಕ್ಕೆ ಒತ್ತಡ ಹೇರುವಂತೆ ಅಧ್ಯಕ್ಷ ಬಿಡೆನ್ ಅವರಲ್ಲಿ ಕೇಳುತ್ತಿದ್ದೇವೆ. ಇಸ್ರೇಲ್‌ನ ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆಗೆ ಕರೆ ನೀಡಬೇಕು. ನೀರು, ಇಂಧನ, ವಿದ್ಯುತ್ ಮತ್ತು ಇತರ ಮೂಲಭೂತ ಸೇವೆಗಳ ಮರುಸ್ಥಾಪನೆ ಮಾಡಬೇಕು.  ಗಾಝಾ ಪಟ್ಟಿಗೆ  ಮಾನವೀಯ ನೆರವಿಗೆ ಅವಕಾಶ ಮಾಡುವಂತೆ ಪತ್ರದಲ್ಲಿ ಆಗ್ರಹಿಸಲಾಗಿದೆ ಎಂದು ಪತ್ರವನ್ನು ಉಲ್ಲೇಖಿಸಿ ನ್ಯೂಯಾರ್ಕ್ ಟೈಮ್ಸ್  ವರದಿ ಮಾಡಿದೆ.

ಪತ್ರವು ಇಸ್ರೇಲ್‌ ಬಗೆಗಿನ ಬೈಡನ್‌ ನಿಲುವಿಗೆ ಹೆಚ್ಚುತ್ತಿರುವ ಆಂತರಿಕ ಅಸಮಾಧಾನವನ್ನು ಬಹಿರಂಗಪಡಿಸುತ್ತದೆ. ಈ ಮೊದಲು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್‌ಗೆ  3 ಆಂತರಿಕ ಮೆಮೊಗಳು ಕಳುಹಿಸಲಾಗಿತ್ತು ಮತ್ತು US ಏಜೆನ್ಸಿ ಫಾರ್ ಇಂಟರ್‌ನ್ಯಾಶನಲ್ ಡೆವಲಪ್‌ಮೆಂಟ್‌ನ 1,000ಕ್ಕೂ ಹೆಚ್ಚು ಉದ್ಯೋಗಿಗಳು ಸಹಿ ಮಾಡಿ ಮುಕ್ತ ಪತ್ರ ಬರೆದಿದ್ದರು.

ಪತ್ರಕ್ಕೆ ಸಹಿ ಮಾಡಿದವರು ತಮ್ಮ ಉದ್ಯೋಗ ಮತ್ತು ವೈಯಕ್ತಿಕ ಸುರಕ್ಷತೆಯ  ದೃಷ್ಟಿಯಿಂದ ತಮ್ಮ ಗುರತನ್ನು ಗೌಪ್ಯವಾಗಿಟ್ಟುಕೊಂಡಿದ್ದಾರೆ. ಸಹಿ ಮಾಡಿದವರಲ್ಲಿ ಹೆಚ್ಚಿನವರು ರಾಷ್ಟ್ರೀಯ ಭದ್ರತಾ ಮಂಡಳಿ ಮತ್ತು ನ್ಯಾಯಾಂಗ ಇಲಾಖೆಯಲ್ಲಿ ಕೆಲಸ ಮಾಡಿದವರಾಗಿದ್ದಾರೆ. ಅಗಾಧ ಪ್ರಮಾಣದ ಅಮೆರಿಕನ್ನರು ಕದನ ವಿರಾಮವನ್ನು ಬೆಂಬಲಿಸುತ್ತಾರೆ.  66 ಪ್ರತಿಶತ ಅಮೆರಿಕನ್ನರು ಕದನ ವಿರಾಮಕ್ಕಾಗಿ ಇಸ್ರೇಲ್ ಮೇಲೆ ಒತ್ತಡ ಹೇರಬೇಕು ಎಂದು ಬೈಡನ್‌ಗೆ ಆಗ್ರಹಿಸಿದ್ದಾರೆ.

ಬೈಡೆನ್ ಆಡಳಿತವು ಇತ್ತೀಚೆಗೆ ಗಾಝಾದಲ್ಲಿ ಹೆಚ್ಚಿನ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಲು ಪ್ರಾರಂಭಿಸಿದೆ, ಆದರೆ ಬೈಡೆನ್ ಮತ್ತು ಬ್ಲಿಂಕೆನ್ ಕದನ ವಿರಾಮವನ್ನು ಬೆಂಬಲಿಸಿಲ್ಲ. ನಿನ್ನೆಯಷ್ಟೇ ಬೈಡನ್‌ ತನ್ನ ಹೇಳಿಕೆಯಲ್ಲಿ ಗಾಝಾದ ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದರು.

ಇದನ್ನು ಓದಿ: ಬೋವಿ ಸಮುದಾಯಕ್ಕೆ ಅವಮಾನ ಆರೋಪ: ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...