Homeಅಂತರಾಷ್ಟ್ರೀಯತುಮಕೂರಿಗೆ ಬಂದ ಅಮೇರಿಕದ ಗನ್ನು.. ಭಾರತದಲ್ಲಿ ನಿಷೇಧವಾಗಿದ್ದರೂ ನುಸುಳಿದ್ದು ಹೇಗೆ?

ತುಮಕೂರಿಗೆ ಬಂದ ಅಮೇರಿಕದ ಗನ್ನು.. ಭಾರತದಲ್ಲಿ ನಿಷೇಧವಾಗಿದ್ದರೂ ನುಸುಳಿದ್ದು ಹೇಗೆ?

- Advertisement -
- Advertisement -

ತುಮಕೂರು ಒಂದು ರೀತಿಯಲ್ಲಿ ಯಾವಾಗಲೂ ಶಾಂತಿಯಿಂದ ಕೂಡಿರುವ ನಗರವೆಂಬ ಭಾವನೆ ಎಲ್ಲಾ ಜನಸಾಮಾನ್ಯರಲ್ಲೂ ಇತ್ತು. ಆದರೆ ಇತ್ತಿಚಿಗೆ ಆ ರೀತಿಯ ಭಾವನೆ ಕಡಿಮೆಯಾಗುತ್ತಿದೆ. ಕಾರಣ ನಗರದಲ್ಲಿ ಹೆಚ್ಚುತ್ತಿರುವ ಅಪರಾಧಗಳು. ಎಷ್ಟೇ ಅಧಿಕಾರಗಳೂ ಬಂದು ಹೋದರೂ ಸಹ ಅಪರಾಧಗಳು ಕಡಿಮೆಯಾದಂತೆ ಕಾಣುತ್ತಿಲ್ಲ. ಇದಕ್ಕೆ ತುಮಕೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹಲವು ಆತಂಕಕಾರಿ ಘಟನೆಗಳೇ ಕಾರಣ.

ಕಳೆದ ವರ್ಷ ಒಂದು ಬೆಳಗ್ಗಿನ ಜಾವ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ನಡೆದ ಮಾಜಿ ಮೇಯರ್ ರವಿಕುಮಾರ್ ಭೀಕರ ಕೊಲೆ ನಗರದಲ್ಲಿ ತಲ್ಲಣ ಉಂಟು ಮಾಡಿತ್ತು. ಅದಿನ್ನು ಮರೆಯುವ ಮುನ್ನವೇ ಇತ್ತಿಚಿಗೆ ತುಮಕೂರಿನಲ್ಲಿ ಭಾರತದಲ್ಲಿ ನಿಷೇಧಿತವಾಗಿರುವ ಏರ್ಗನ್ ಅನುಮಾನಸ್ಫದವಾಗಿ ಸಿಕ್ಕಿದ್ದು ಜನ ಸಾಮಾನ್ಯರ ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲೆ ನಗರದಲ್ಲಿ ಮತ್ತೊಂದು ಕೊಲೆಯ ಸಂಚು ನಡೆದಿದೆಯಾ ಎಂಬ ಅನುಮಾನಗಳು, ತರ್ಕವಿಲ್ಲದ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಜಯನಗರ ಮತ್ತು ತಿಲಕ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತಿಚಿಗೆ ಸೆಬ್ಟಂಬರ್ 5ರಂದು ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮ ಮುಗಿಸಿ ರಾತ್ರಿ ಗಸ್ತಿನಲ್ಲಿದ್ದ ಜಯನಗರ ಠಾಣೆ ಪೋಲಿಸರಿಗೆ ಉಪ್ಪಾರಹಳ್ಳಿ ಮುಖ್ಯರಸ್ತೆಯ ಸೆಕ್ರೆಡ್‍ಹಾರ್ಟ್ ಶಾಲೆ ಮುಂಭಾಗದಿಂದ ಗೆದ್ದಲಹಳ್ಳಿ ಕಡೆಗೆ ಹೋಗುತ್ತಿರುವ ಮಾರುತಿ 800 ಕಾರು ಅನುಮಾನಸ್ಪದವಾಗಿ ಕಂಡು ತಡೆದು ವಿಚಾರಿಸಿದ್ದಾರೆ.

ಆವೇಳೆ ಕಾರಿನಲ್ಲಿದ್ದ ನಾಲ್ವರು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಆದರೆ ಅವರನ್ನು ಬಂಧಿಸಿದ ಪೋಲಿಸರು ವಿಚಾರಣೆಗೊಳಪಡಿಸಿ, ವಾಹನ ಪರಿಶೀಲಿಸಿದಾಗ ಕಾರಿನಲ್ಲಿ ಅಮೆರಿಕದ ಎಫ್ ಎಕ್ಸ್ ಬಾಕ್ಸ್ ಡಿಸಿಬಿ 125 ಸೌಂಡ್‍ಲೆಸ್ ಗನ್ ಮತ್ತು ಗುಂಡುಗಳು ಇರುವುದು ಪೋಲಿಸರ ಗಮನಕ್ಕೆ ಬಂದಿದೆ. ಭಾರತದಲ್ಲಿ ಎಫ್.ಎಕ್ಸ್.ಬಾಕ್ಸ್ ಗನ್ ಅನ್ನು ನಿಷೇಧಿಸಲಾಗಿದೆ ಆದರೆ ತುಮಕೂರಿನ ಯುವಕರ ಕೈಗೆ ಈ ಗನ್ ಹೇಗೆ ಬಂತು ಎಂಬುವುದನ್ನು ಪೋಲಿಸರು ಬೇಧಿಸಬೇಕಿದೆ. ಈ ಪ್ರಕರಣದಲ್ಲಿ ಗುಬ್ಬಿ ನಗರದ ನಿವಾಸಿಗಳಾದ ನವೀನ್ ಕುಮಾರ್, ದೇವರಾಜು, ನಟರಾಜು, ರಯಾನ್, ಸುಹೇಲ್ ಎಂಬ ಐದು ಜನರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎನ್ನಲಾಗಿದೆ.

ಬಂಧಿತರಾಗಿರುವ ಐದು ಆರೋಪಿಗಳಲ್ಲಿ ನವೀನ್ ಎಂಬಾತ ಈ ಹಿಂದೆ ಇದೇ ಗನ್ ಬಳಕೆ ಮಾಡಿ ನವಿಲು ಬೇಟೆಯಾಡಿದ್ದ. ಈ ಕುರಿತಂತೆ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಈತನೇ ಈ ತಂಡವನ್ನು ಮುನ್ನಡೆಸುತ್ತಿದ್ದ ಎಂದು ಹೇಳಲಾಗಿದೆ. ಎಫ್.ಎಕ್ಸ್. ಬಾಕ್ಸ್ ಡಿಸಿಬಿ ಗನ್ ಅನ್ನು ಲೈಸೆನ್ಸ್ ಪಡೆದು ಯುಎಸ್‍ಎ ಅಲ್ಲಿ ಖರೀದಿ ಮಾಡಬೇಕು. ಆದರೆ ಯಾವುದೇ ಪರವಾನಗಿ ಇಲ್ಲದೆ ಈ ಗನ್ ಭಾರತಕ್ಕೆ ಬಂದದ್ದಾರು ಹೇಗೆ? ಎಂಬುದು ನಿಗೂಢವಾಗಿದೆ.

ತುಮಕೂರಿನ ಇಂತಹ ಚಟುವಟಿಕೆಗಳಿಗೆ ಕೆಲವು ರಾಜಕಾರಣಿಗಳ ಕುಮ್ಮಕ್ಕು ಬಲವಾಗಿದೆ ಎಂಬುವ ಮಾತುಗಳು ಕೇಳಿಬರುತ್ತಿದೆ. ಹಾಗಾಗಿ ಇಂತಹ ಪ್ರಕರಣಗಳನ್ನು ನಿಷ್ಠಾವಂತ ಪೋಲಿಸ್ ಅಧಿಕಾರಿಗಳಿಂದ ತನಿಖೆ ಮಾಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ ಇಲ್ಲವಾದಲ್ಲಿ ಗ್ಯಾಂಗ್ ಕಟ್ಟಿಕೊಂಡು ಗನ್ ಹಿಡಿದು ಓಡಾಡುವ ಯುವಜನರ ದಂಡು ಹೆಚ್ಚಾಗಲಿದೆ. ಇಂತಹ ಪ್ರಕರಣಗಳಲ್ಲಿ ಲಾಭ ಪಡೆದುಕೊಳ್ಳಲೆತ್ನಿಸುವ  ರಾಜಕಾರಣಿಗಳು ಸದಾ ಇಂತಹದಕ್ಕಾಗಿಯೇ ಕಾಯುತ್ತಿರುತ್ತಾರೆ. ಈಗಲಾದರೂ ಸಕಾರ ಎಚ್ಚೆತ್ತಕೊಂಡು ತುಮಕೂರು ನಗರವನ್ನು ಅಫರಾದ ಮುಕ್ತ ನಗರವಾಗಿಸುವ ಕಡೆ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕ್ರಿಯಾಶೀಲವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...