Homeಕ್ರೀಡೆಕ್ರಿಕೆಟ್ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

- Advertisement -
- Advertisement -

2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತದ ಬೌಲರ್ಸ್ ಒತ್ತಡ ಎದುರಿಸಿದರು. ಆರಂಭದಲ್ಲಿ ಭಾರತ ಮೇಲುಗೈ ಸಾಧಿಸಿದ್ದರೂ, ಬಳಿಕ ನ್ಯೂಜಿಲೆಂಡ್ ಬ್ಯಾಟರ್ಸ್‌ಗಳು ಸ್ಕ್ರೀಸ್‌ಗೆ ಅಂಟಿಕೊಂಡು ನಿಂತರು. ಆದರೆ ಮೊಹಮ್ಮದ್ ಶಮಿ ಮಾರಕ ದಾಳಿಯಿಂದಾಗಿಯೇ ಭಾರತ ಗೆಲುವು ಕಂಡಿತು.

ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ದದ ಪಂದ್ಯವೂ ಸೇರಿದಂತೆ ಭಾರತದ ಪಂದ್ಯಗಳೆಲ್ಲವೂ ಒನ್ ಸೈಡೆಡ್ ಆಗಿತ್ತು. ಆದರೆ ಸೆಮಿಫೈನಲ್ ಸವಾಲು ಸುಲಭವಾಗಿರಲಿಲ್ಲ. ಡರಿಲ್ ಮೆಚಿಲ್ ಶತಕ, ನಾಯಕ ವಿಲಿಯಮ್ಸನ್ ಹಾಫ್ ಸೆಂಚುರಿ ನಡುವೆಯೂ ಭಾರತದ ಸಂಘಟಿತ ದಾಳಿ ಫಲ ನೀಡಿತು. ನ್ಯೂಜಿಲೆಂಡ್ ತಂಡವನ್ನು 327 ರನ್‌ಗೆ ಕಟ್ಟಿಹಾಕಿತು. ಈ ಮೂಲಕ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ.

ಭಾರತದ ಪರ ಅದ್ಭುತ ಬ್ಯಾಟಿಂಗ್ ಮೂಡಿಬಂದಿತು. ವಿರಾಟ್ ಕೊಹ್ಲಿ ಶತಕ, ಶ್ರೇಯಸ್ ಅಯ್ಯರ್ ಸೆಂಚುರಿ, ಶುಭಮನ್ ಗಿಲ್ 80 ರನ್ ಸೇರಿದಂತೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟಿಂಗ್‌ನಿಂದ 397 ರನ್ ಸಿಡಿಸಿತ್ತು. ನ್ಯೂಜಿಲೆಂಡ್ ತಂಡಕ್ಕೆ 398 ರನ್ ಟಾರ್ಗೆಟ್ ನೀಡಲಾಗಿತ್ತು.

ಭಾರತ ತಂಡ ನೀಡಿದ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭದಲ್ಲೇ ಶಾಕ್ ನೀಡಿದರು. 30 ರನ್ ಸಿಡಿಸುವಷ್ಟರಲ್ಲೇ ನ್ಯೂಜಿಲೆಂಡ್ ಮೊದಲ ವಿಕೆಟ್ ಕಳೆದುಕೊಂಡಿತು. ಮೊಹಮ್ಮದ್ ಶಮಿ ದಾಳಿಗೆ ಡೆವೋನ್ ಕೊನ್ವೆ ವಿಕೆಟ್ ಪತನಗೊಂಡಿತು. ಡೆವೋನ್ 13 ರನ್ ಗಳಿಸಿ ಔಟಾದರು.

ಮತ್ತೆ ದಾಳಿ ಮುಂದುವರಿಸಿದ ಮೊಹಮ್ಮದ್ ಶಮಿ ಅದ್ಭುತ ಫಾರ್ಮ್‌ನಲ್ಲಿದ್ದ ರಚಿನ್ ರವೀಂದ್ರ ವಿಕೆಟ್ ಕಬಳಿಸಿದರು. ರಚಿನ್ ಕೂಡ 13 ರನ್‌ಗೆ ಔಟಾದರು. 39 ರನ್‌ಗೆ ನ್ಯೂಜಿಲೆಂಡ್ 2 ವಿಕೆಟ್ ಕಳೆದುಕೊಂಡಿತು. ಆದರೆ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡರಿಲ್ ಮೆಚೆಲ್ ಜೊತೆಯಾಟ ಟೀಂ ಇಂಡಿಯಾಗೆ ಭಯ ಹುಟ್ಟಿಸಿತು. ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನಕ್ಕೆ 2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತ ತಂಡದ ಬೌಲರ್ಸ್ ಸುಸ್ತಾದರು.

ಶತಕದ ಬಳಿಕವೂ ಅಬ್ಬರಿಸುತ್ತಿದ್ದ ಡರಿಲ್ ಮಿಚೆಲ್ ಭಾರತಕ್ಕೆ ಆತಂಕ ಹೆಚ್ಚಿಸುತ್ತಲೇ ಇದ್ದರು. ಮಿಚೆಲ್ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಭಾರತ ತಂಡದಲ್ಲಿ ಸೋಲಿನ ಭೀತಿ ಆರಂಭವಾಗಿತ್ತು. ಇತ್ತ  ವಿಲಿಯಮ್ಸನ್ ಹಾಗೂ ಮಿಚೆಲ್ ಜೊತೆಯಾಟದಿಂದ ನ್ಯೂಜಿಲೆಂಡ್‌ಗೆ ಗೆಲುವಿನ ಆತ್ಮವಿಶ್ವಾಸ ಹೆಚ್ಚಿತ್ತು. ಆದರೆ ಮೊಹಮ್ಮದ್ ಶಮಿ 134 ರನ್ ಸಿಡಿಸಿ ಗಟ್ಟಿಯಾಗಿ ನಿಂತಿದ್ದ ಮಿಚೆಲ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಇದರ ಪರಿಣಾಮ ನ್ಯೂಜಿಲೆಂಡ್ ದಾಖಲೆಯ ಜೊತೆಯಾಟಕ್ಕೆ ಬ್ರೇಕ್ ಬಿದ್ದಿತ್ತು.

ಕೇನ್ ವಿಲಿಯಮ್ಸನ್ 69 ರನ್ ಸಿಡಿಸಿ ನಿರ್ಗಮಿಸಿದರು. ಮಿಚೆಲ್ ಹಾಗೂ ಕೇನ್ 181 ರನ್ ಜೊತೆಯಾಟ ಅಂತ್ಯಗೊಂಡಿತು. ಇತ್ತ ಭಾರತ ತಂಡ ಗೆಲುವಿನತ್ತ ಮುಖ ಮಾಡಿತು. ವಿಲಿಯಮ್ಸನ್ ಬೆನ್ನಲ್ಲೇ ಟಾಮ್ ಲಾಥಮ್ ವಿಕೆಟ್ ಕಬಳಿಸಿದ ಶಮಿ, ಭಾರತಕ್ಕೆ ಭರ್ಜರಿ ಮುನ್ನಡೆ ತಂದುಕೊಟ್ಟರು. ಇತ್ತ ಡರಿಲ್ ಮಿಚೆಲ್ ಹಾಗೂ ಗ್ಲೆನ್ ಫಿಲಿಪ್ಸ್ ಜೊತೆಯಾಟ ಆರಂಭಗೊಂಡಿತು. ಈ ಜೋಡಿಯನ್ನು ಜಸ್ಪ್ರೀತ್ ಬುಮ್ರಾ ಬ್ರೇಕ್ ಮಾಡಿದರು.

ಪಿಲಿಪ್ಸ್ 41 ರನ್ ಸಿಡಿಸಿ ಔಟಾದರು. ಮಾರ್ಕ್ ಚಂಪನ್ ಕೇವಲ 2 ರನ್ ಸಿಡಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ ಹಾಗೂ ಫರ್ಗ್ಯೂಸನ್ ವಿಕೆಟ್ ಕಬಲಿಸದ ಶಮಿ, ನ್ಯೂಜಿಲೆಂಡ್ ತಂಡವನ್ನು 48.5 ಓವರ್‌ಗಳಲ್ಲಿ 327 ರನ್‌ಗೆ ಆಲೌಟ್ ಮಾಡಿದರು.  ಭಾರತ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿತು. 2011ರ ಬಳಿಕ ಭಾರತ ವಿಶ್ವಕಪ್ ಟೂರ್ನಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿತು.

ಮೊಹಮ್ಮದ್ ಶಮಿ 7 ವಿಕೆಟ್ ಕಬಳಿಸಿ ಮಿಂಚಿದರು. ವಿಶ್ವಕಪ್ ಟೂರ್ನಿಯಲ್ಲಿ ಅತೀ ಕಡಿಮೆ ಇನ್ನಿಂಗ್ಸ್ನಲ್ಲಿ 50 ವಿಕೆಟ್ ಸಾಧನೆ ಮಾಡಿದ ಹೆಗ್ಗಳಿಕೆಗೆ ಶಮಿ ಪಾತ್ರರಾಗಿದ್ದಾರೆ. ಶಮಿ 17 ಇನ್ನಿಂಗ್ಸ್‌ನಲ್ಲಿ 50 ವಿಕೆಟ್ ಸಾಧನೆ ಮಾಡಿದ್ದಾರೆ.

ಸಚಿನ್ ದಾಖಲೆ ಮುರಿದ ವಿರಾಟ್

ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್‌ ಎಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ಸ್ಟಾರ್‌ ವಿರಾಟ್‌ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಹೆಸರಲ್ಲಿ ಎರಡು ದಶಕ ಕಾಲ ಉಳಿದಿದ್ದ ವಿಶ್ವ ದಾಖಲೆಯನ್ನು ವಿರಾಟ್‌ ಕೊಹ್ಲಿ ಅಳಿಸಿಹಾಕಿದ್ದಾರೆ.

2003ರ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್ ಭಾರತ ತಂಡದ ಪರ 673 ರನ್‌ಗಳನ್ನು ಬಾರಿಸಿದ್ದರು. ಈ ದಾಖಲೆಯನ್ನು 2023ರಲ್ಲಿ ವಿರಾಟ್ ಕೊಹ್ಲಿ 711* ರನ್‌ ಗಳಿಸುವ ಮೂಲಕ ಸಚಿನ್ ದಾಖಲೆ ಮುರಿದಿದ್ದಾರೆ. 13ನೇ ಆವೃತ್ತಿಯ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಿದ 113 ಎಸೆತಗಳಲ್ಲಿ 9 ಫೋರ್‌ ಮತ್ತು 2 ಸಿಕ್ಸರ್‌ನೊಂದಿಗೆ 117 ರನ್‌ ಬಾರಿಸಿದ ವಿರಾಟ್‌ ಕೊಹ್ಲಿ, ಈ ಮನಮೋಹಕ ಇನಿಂಗ್ಸ್‌ ವೇಳೆ ದಾಖಲೆಗಳ ಮೇಲೆ ದಾಖಲೆ ಬರೆದರು.

ಇದು ವಿರಾಟ್‌ ಕೊಹ್ಲಿ ಬಾರಿಸಿದ ವಿಶ್ವ ದಾಖಲೆಯ 50ನೇ ಒಡಿಐ ಶತಕವಾಗಿದೆ. ಇದರೊಂದಿಗೆ ಸಚಿನ್ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನೂ ಅಳಿಸಿಹಾಕಿದ್ದಾರೆ. ಈ ಶತಕದ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಆಡಿದ 10 ಪಂದ್ಯಗಳಲ್ಲಿ ಒಟ್ಟು 3 ಶತಕಗಳೊಂದಿಗೆ 101.57ರ ಸರಾಸರಿಯಲ್ಲಿ ಒಟ್ಟಾರೆ 711 ರನ್‌ ಬಾರಿಸಿದ್ದಾರೆ. ವಿಶ್ವಕಪ್‌ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ 700ಕ್ಕೂ ಹೆಚ್ಚು ರನ್‌ ಗಳಿಸಿದ ಮೊದಲ ಬ್ಯಾಟರ್‌ ಎಂಬ ದಾಖಲೆ ಈಗ ಕೊಹ್ಲಿ ಪಾಲಾಗಿದೆ.

ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌

ವಿಶ್ವಕಪ್‌ ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌ ಗಳಿಸಿದ ದಾಖಲೆ ಕೂಡ ವಿರಾಟ್‌ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ 7 ಬಾರಿ ಈ ಸಾಧನೆ ಮಾಡಿ ಸಚಿನ್‌ ಮತ್ತು ಬಾಂಗ್ಲಾದೇಶದ ಆಲ್‌ರೌಂಡರ್ ಶಕಿಬ್ ಅಲ್ ಹಸನ್‌ ಜೊತೆಗೆ ದಾಖಲೆ ಹಂಚಿಕೊಂಡಿದ್ದರು. ಇದೀಗ 3 ಶತಕ ಮತ್ತು 5 ಅರ್ಧಶತಕಗಳೊಂದಿಗೆ ಒಟ್ಟಾರೆ 8 ಬಾರಿ ಒಂದೇ ಆವೃತ್ತಿಯಲ್ಲಿ 50ಕ್ಕೂ ಹೆಚ್ಚು ರನ್‌ ಬಾರಿಸಿ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...