Homeಕ್ರೀಡೆಕ್ರಿಕೆಟ್ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

- Advertisement -
- Advertisement -

2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತದ ಬೌಲರ್ಸ್ ಒತ್ತಡ ಎದುರಿಸಿದರು. ಆರಂಭದಲ್ಲಿ ಭಾರತ ಮೇಲುಗೈ ಸಾಧಿಸಿದ್ದರೂ, ಬಳಿಕ ನ್ಯೂಜಿಲೆಂಡ್ ಬ್ಯಾಟರ್ಸ್‌ಗಳು ಸ್ಕ್ರೀಸ್‌ಗೆ ಅಂಟಿಕೊಂಡು ನಿಂತರು. ಆದರೆ ಮೊಹಮ್ಮದ್ ಶಮಿ ಮಾರಕ ದಾಳಿಯಿಂದಾಗಿಯೇ ಭಾರತ ಗೆಲುವು ಕಂಡಿತು.

ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ದದ ಪಂದ್ಯವೂ ಸೇರಿದಂತೆ ಭಾರತದ ಪಂದ್ಯಗಳೆಲ್ಲವೂ ಒನ್ ಸೈಡೆಡ್ ಆಗಿತ್ತು. ಆದರೆ ಸೆಮಿಫೈನಲ್ ಸವಾಲು ಸುಲಭವಾಗಿರಲಿಲ್ಲ. ಡರಿಲ್ ಮೆಚಿಲ್ ಶತಕ, ನಾಯಕ ವಿಲಿಯಮ್ಸನ್ ಹಾಫ್ ಸೆಂಚುರಿ ನಡುವೆಯೂ ಭಾರತದ ಸಂಘಟಿತ ದಾಳಿ ಫಲ ನೀಡಿತು. ನ್ಯೂಜಿಲೆಂಡ್ ತಂಡವನ್ನು 327 ರನ್‌ಗೆ ಕಟ್ಟಿಹಾಕಿತು. ಈ ಮೂಲಕ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ.

ಭಾರತದ ಪರ ಅದ್ಭುತ ಬ್ಯಾಟಿಂಗ್ ಮೂಡಿಬಂದಿತು. ವಿರಾಟ್ ಕೊಹ್ಲಿ ಶತಕ, ಶ್ರೇಯಸ್ ಅಯ್ಯರ್ ಸೆಂಚುರಿ, ಶುಭಮನ್ ಗಿಲ್ 80 ರನ್ ಸೇರಿದಂತೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟಿಂಗ್‌ನಿಂದ 397 ರನ್ ಸಿಡಿಸಿತ್ತು. ನ್ಯೂಜಿಲೆಂಡ್ ತಂಡಕ್ಕೆ 398 ರನ್ ಟಾರ್ಗೆಟ್ ನೀಡಲಾಗಿತ್ತು.

ಭಾರತ ತಂಡ ನೀಡಿದ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭದಲ್ಲೇ ಶಾಕ್ ನೀಡಿದರು. 30 ರನ್ ಸಿಡಿಸುವಷ್ಟರಲ್ಲೇ ನ್ಯೂಜಿಲೆಂಡ್ ಮೊದಲ ವಿಕೆಟ್ ಕಳೆದುಕೊಂಡಿತು. ಮೊಹಮ್ಮದ್ ಶಮಿ ದಾಳಿಗೆ ಡೆವೋನ್ ಕೊನ್ವೆ ವಿಕೆಟ್ ಪತನಗೊಂಡಿತು. ಡೆವೋನ್ 13 ರನ್ ಗಳಿಸಿ ಔಟಾದರು.

ಮತ್ತೆ ದಾಳಿ ಮುಂದುವರಿಸಿದ ಮೊಹಮ್ಮದ್ ಶಮಿ ಅದ್ಭುತ ಫಾರ್ಮ್‌ನಲ್ಲಿದ್ದ ರಚಿನ್ ರವೀಂದ್ರ ವಿಕೆಟ್ ಕಬಳಿಸಿದರು. ರಚಿನ್ ಕೂಡ 13 ರನ್‌ಗೆ ಔಟಾದರು. 39 ರನ್‌ಗೆ ನ್ಯೂಜಿಲೆಂಡ್ 2 ವಿಕೆಟ್ ಕಳೆದುಕೊಂಡಿತು. ಆದರೆ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡರಿಲ್ ಮೆಚೆಲ್ ಜೊತೆಯಾಟ ಟೀಂ ಇಂಡಿಯಾಗೆ ಭಯ ಹುಟ್ಟಿಸಿತು. ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನಕ್ಕೆ 2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತ ತಂಡದ ಬೌಲರ್ಸ್ ಸುಸ್ತಾದರು.

ಶತಕದ ಬಳಿಕವೂ ಅಬ್ಬರಿಸುತ್ತಿದ್ದ ಡರಿಲ್ ಮಿಚೆಲ್ ಭಾರತಕ್ಕೆ ಆತಂಕ ಹೆಚ್ಚಿಸುತ್ತಲೇ ಇದ್ದರು. ಮಿಚೆಲ್ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಭಾರತ ತಂಡದಲ್ಲಿ ಸೋಲಿನ ಭೀತಿ ಆರಂಭವಾಗಿತ್ತು. ಇತ್ತ  ವಿಲಿಯಮ್ಸನ್ ಹಾಗೂ ಮಿಚೆಲ್ ಜೊತೆಯಾಟದಿಂದ ನ್ಯೂಜಿಲೆಂಡ್‌ಗೆ ಗೆಲುವಿನ ಆತ್ಮವಿಶ್ವಾಸ ಹೆಚ್ಚಿತ್ತು. ಆದರೆ ಮೊಹಮ್ಮದ್ ಶಮಿ 134 ರನ್ ಸಿಡಿಸಿ ಗಟ್ಟಿಯಾಗಿ ನಿಂತಿದ್ದ ಮಿಚೆಲ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಇದರ ಪರಿಣಾಮ ನ್ಯೂಜಿಲೆಂಡ್ ದಾಖಲೆಯ ಜೊತೆಯಾಟಕ್ಕೆ ಬ್ರೇಕ್ ಬಿದ್ದಿತ್ತು.

ಕೇನ್ ವಿಲಿಯಮ್ಸನ್ 69 ರನ್ ಸಿಡಿಸಿ ನಿರ್ಗಮಿಸಿದರು. ಮಿಚೆಲ್ ಹಾಗೂ ಕೇನ್ 181 ರನ್ ಜೊತೆಯಾಟ ಅಂತ್ಯಗೊಂಡಿತು. ಇತ್ತ ಭಾರತ ತಂಡ ಗೆಲುವಿನತ್ತ ಮುಖ ಮಾಡಿತು. ವಿಲಿಯಮ್ಸನ್ ಬೆನ್ನಲ್ಲೇ ಟಾಮ್ ಲಾಥಮ್ ವಿಕೆಟ್ ಕಬಳಿಸಿದ ಶಮಿ, ಭಾರತಕ್ಕೆ ಭರ್ಜರಿ ಮುನ್ನಡೆ ತಂದುಕೊಟ್ಟರು. ಇತ್ತ ಡರಿಲ್ ಮಿಚೆಲ್ ಹಾಗೂ ಗ್ಲೆನ್ ಫಿಲಿಪ್ಸ್ ಜೊತೆಯಾಟ ಆರಂಭಗೊಂಡಿತು. ಈ ಜೋಡಿಯನ್ನು ಜಸ್ಪ್ರೀತ್ ಬುಮ್ರಾ ಬ್ರೇಕ್ ಮಾಡಿದರು.

ಪಿಲಿಪ್ಸ್ 41 ರನ್ ಸಿಡಿಸಿ ಔಟಾದರು. ಮಾರ್ಕ್ ಚಂಪನ್ ಕೇವಲ 2 ರನ್ ಸಿಡಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ ಹಾಗೂ ಫರ್ಗ್ಯೂಸನ್ ವಿಕೆಟ್ ಕಬಲಿಸದ ಶಮಿ, ನ್ಯೂಜಿಲೆಂಡ್ ತಂಡವನ್ನು 48.5 ಓವರ್‌ಗಳಲ್ಲಿ 327 ರನ್‌ಗೆ ಆಲೌಟ್ ಮಾಡಿದರು.  ಭಾರತ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿತು. 2011ರ ಬಳಿಕ ಭಾರತ ವಿಶ್ವಕಪ್ ಟೂರ್ನಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿತು.

ಮೊಹಮ್ಮದ್ ಶಮಿ 7 ವಿಕೆಟ್ ಕಬಳಿಸಿ ಮಿಂಚಿದರು. ವಿಶ್ವಕಪ್ ಟೂರ್ನಿಯಲ್ಲಿ ಅತೀ ಕಡಿಮೆ ಇನ್ನಿಂಗ್ಸ್ನಲ್ಲಿ 50 ವಿಕೆಟ್ ಸಾಧನೆ ಮಾಡಿದ ಹೆಗ್ಗಳಿಕೆಗೆ ಶಮಿ ಪಾತ್ರರಾಗಿದ್ದಾರೆ. ಶಮಿ 17 ಇನ್ನಿಂಗ್ಸ್‌ನಲ್ಲಿ 50 ವಿಕೆಟ್ ಸಾಧನೆ ಮಾಡಿದ್ದಾರೆ.

ಸಚಿನ್ ದಾಖಲೆ ಮುರಿದ ವಿರಾಟ್

ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್‌ ಎಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ಸ್ಟಾರ್‌ ವಿರಾಟ್‌ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಹೆಸರಲ್ಲಿ ಎರಡು ದಶಕ ಕಾಲ ಉಳಿದಿದ್ದ ವಿಶ್ವ ದಾಖಲೆಯನ್ನು ವಿರಾಟ್‌ ಕೊಹ್ಲಿ ಅಳಿಸಿಹಾಕಿದ್ದಾರೆ.

2003ರ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್ ಭಾರತ ತಂಡದ ಪರ 673 ರನ್‌ಗಳನ್ನು ಬಾರಿಸಿದ್ದರು. ಈ ದಾಖಲೆಯನ್ನು 2023ರಲ್ಲಿ ವಿರಾಟ್ ಕೊಹ್ಲಿ 711* ರನ್‌ ಗಳಿಸುವ ಮೂಲಕ ಸಚಿನ್ ದಾಖಲೆ ಮುರಿದಿದ್ದಾರೆ. 13ನೇ ಆವೃತ್ತಿಯ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಿದ 113 ಎಸೆತಗಳಲ್ಲಿ 9 ಫೋರ್‌ ಮತ್ತು 2 ಸಿಕ್ಸರ್‌ನೊಂದಿಗೆ 117 ರನ್‌ ಬಾರಿಸಿದ ವಿರಾಟ್‌ ಕೊಹ್ಲಿ, ಈ ಮನಮೋಹಕ ಇನಿಂಗ್ಸ್‌ ವೇಳೆ ದಾಖಲೆಗಳ ಮೇಲೆ ದಾಖಲೆ ಬರೆದರು.

ಇದು ವಿರಾಟ್‌ ಕೊಹ್ಲಿ ಬಾರಿಸಿದ ವಿಶ್ವ ದಾಖಲೆಯ 50ನೇ ಒಡಿಐ ಶತಕವಾಗಿದೆ. ಇದರೊಂದಿಗೆ ಸಚಿನ್ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನೂ ಅಳಿಸಿಹಾಕಿದ್ದಾರೆ. ಈ ಶತಕದ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಆಡಿದ 10 ಪಂದ್ಯಗಳಲ್ಲಿ ಒಟ್ಟು 3 ಶತಕಗಳೊಂದಿಗೆ 101.57ರ ಸರಾಸರಿಯಲ್ಲಿ ಒಟ್ಟಾರೆ 711 ರನ್‌ ಬಾರಿಸಿದ್ದಾರೆ. ವಿಶ್ವಕಪ್‌ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ 700ಕ್ಕೂ ಹೆಚ್ಚು ರನ್‌ ಗಳಿಸಿದ ಮೊದಲ ಬ್ಯಾಟರ್‌ ಎಂಬ ದಾಖಲೆ ಈಗ ಕೊಹ್ಲಿ ಪಾಲಾಗಿದೆ.

ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌

ವಿಶ್ವಕಪ್‌ ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌ ಗಳಿಸಿದ ದಾಖಲೆ ಕೂಡ ವಿರಾಟ್‌ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ 7 ಬಾರಿ ಈ ಸಾಧನೆ ಮಾಡಿ ಸಚಿನ್‌ ಮತ್ತು ಬಾಂಗ್ಲಾದೇಶದ ಆಲ್‌ರೌಂಡರ್ ಶಕಿಬ್ ಅಲ್ ಹಸನ್‌ ಜೊತೆಗೆ ದಾಖಲೆ ಹಂಚಿಕೊಂಡಿದ್ದರು. ಇದೀಗ 3 ಶತಕ ಮತ್ತು 5 ಅರ್ಧಶತಕಗಳೊಂದಿಗೆ ಒಟ್ಟಾರೆ 8 ಬಾರಿ ಒಂದೇ ಆವೃತ್ತಿಯಲ್ಲಿ 50ಕ್ಕೂ ಹೆಚ್ಚು ರನ್‌ ಬಾರಿಸಿ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...