Homeಕ್ರೀಡೆಕ್ರಿಕೆಟ್ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

- Advertisement -
- Advertisement -

2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತದ ಬೌಲರ್ಸ್ ಒತ್ತಡ ಎದುರಿಸಿದರು. ಆರಂಭದಲ್ಲಿ ಭಾರತ ಮೇಲುಗೈ ಸಾಧಿಸಿದ್ದರೂ, ಬಳಿಕ ನ್ಯೂಜಿಲೆಂಡ್ ಬ್ಯಾಟರ್ಸ್‌ಗಳು ಸ್ಕ್ರೀಸ್‌ಗೆ ಅಂಟಿಕೊಂಡು ನಿಂತರು. ಆದರೆ ಮೊಹಮ್ಮದ್ ಶಮಿ ಮಾರಕ ದಾಳಿಯಿಂದಾಗಿಯೇ ಭಾರತ ಗೆಲುವು ಕಂಡಿತು.

ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ದದ ಪಂದ್ಯವೂ ಸೇರಿದಂತೆ ಭಾರತದ ಪಂದ್ಯಗಳೆಲ್ಲವೂ ಒನ್ ಸೈಡೆಡ್ ಆಗಿತ್ತು. ಆದರೆ ಸೆಮಿಫೈನಲ್ ಸವಾಲು ಸುಲಭವಾಗಿರಲಿಲ್ಲ. ಡರಿಲ್ ಮೆಚಿಲ್ ಶತಕ, ನಾಯಕ ವಿಲಿಯಮ್ಸನ್ ಹಾಫ್ ಸೆಂಚುರಿ ನಡುವೆಯೂ ಭಾರತದ ಸಂಘಟಿತ ದಾಳಿ ಫಲ ನೀಡಿತು. ನ್ಯೂಜಿಲೆಂಡ್ ತಂಡವನ್ನು 327 ರನ್‌ಗೆ ಕಟ್ಟಿಹಾಕಿತು. ಈ ಮೂಲಕ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ.

ಭಾರತದ ಪರ ಅದ್ಭುತ ಬ್ಯಾಟಿಂಗ್ ಮೂಡಿಬಂದಿತು. ವಿರಾಟ್ ಕೊಹ್ಲಿ ಶತಕ, ಶ್ರೇಯಸ್ ಅಯ್ಯರ್ ಸೆಂಚುರಿ, ಶುಭಮನ್ ಗಿಲ್ 80 ರನ್ ಸೇರಿದಂತೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟಿಂಗ್‌ನಿಂದ 397 ರನ್ ಸಿಡಿಸಿತ್ತು. ನ್ಯೂಜಿಲೆಂಡ್ ತಂಡಕ್ಕೆ 398 ರನ್ ಟಾರ್ಗೆಟ್ ನೀಡಲಾಗಿತ್ತು.

ಭಾರತ ತಂಡ ನೀಡಿದ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭದಲ್ಲೇ ಶಾಕ್ ನೀಡಿದರು. 30 ರನ್ ಸಿಡಿಸುವಷ್ಟರಲ್ಲೇ ನ್ಯೂಜಿಲೆಂಡ್ ಮೊದಲ ವಿಕೆಟ್ ಕಳೆದುಕೊಂಡಿತು. ಮೊಹಮ್ಮದ್ ಶಮಿ ದಾಳಿಗೆ ಡೆವೋನ್ ಕೊನ್ವೆ ವಿಕೆಟ್ ಪತನಗೊಂಡಿತು. ಡೆವೋನ್ 13 ರನ್ ಗಳಿಸಿ ಔಟಾದರು.

ಮತ್ತೆ ದಾಳಿ ಮುಂದುವರಿಸಿದ ಮೊಹಮ್ಮದ್ ಶಮಿ ಅದ್ಭುತ ಫಾರ್ಮ್‌ನಲ್ಲಿದ್ದ ರಚಿನ್ ರವೀಂದ್ರ ವಿಕೆಟ್ ಕಬಳಿಸಿದರು. ರಚಿನ್ ಕೂಡ 13 ರನ್‌ಗೆ ಔಟಾದರು. 39 ರನ್‌ಗೆ ನ್ಯೂಜಿಲೆಂಡ್ 2 ವಿಕೆಟ್ ಕಳೆದುಕೊಂಡಿತು. ಆದರೆ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡರಿಲ್ ಮೆಚೆಲ್ ಜೊತೆಯಾಟ ಟೀಂ ಇಂಡಿಯಾಗೆ ಭಯ ಹುಟ್ಟಿಸಿತು. ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನಕ್ಕೆ 2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತ ತಂಡದ ಬೌಲರ್ಸ್ ಸುಸ್ತಾದರು.

ಶತಕದ ಬಳಿಕವೂ ಅಬ್ಬರಿಸುತ್ತಿದ್ದ ಡರಿಲ್ ಮಿಚೆಲ್ ಭಾರತಕ್ಕೆ ಆತಂಕ ಹೆಚ್ಚಿಸುತ್ತಲೇ ಇದ್ದರು. ಮಿಚೆಲ್ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಭಾರತ ತಂಡದಲ್ಲಿ ಸೋಲಿನ ಭೀತಿ ಆರಂಭವಾಗಿತ್ತು. ಇತ್ತ  ವಿಲಿಯಮ್ಸನ್ ಹಾಗೂ ಮಿಚೆಲ್ ಜೊತೆಯಾಟದಿಂದ ನ್ಯೂಜಿಲೆಂಡ್‌ಗೆ ಗೆಲುವಿನ ಆತ್ಮವಿಶ್ವಾಸ ಹೆಚ್ಚಿತ್ತು. ಆದರೆ ಮೊಹಮ್ಮದ್ ಶಮಿ 134 ರನ್ ಸಿಡಿಸಿ ಗಟ್ಟಿಯಾಗಿ ನಿಂತಿದ್ದ ಮಿಚೆಲ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಇದರ ಪರಿಣಾಮ ನ್ಯೂಜಿಲೆಂಡ್ ದಾಖಲೆಯ ಜೊತೆಯಾಟಕ್ಕೆ ಬ್ರೇಕ್ ಬಿದ್ದಿತ್ತು.

ಕೇನ್ ವಿಲಿಯಮ್ಸನ್ 69 ರನ್ ಸಿಡಿಸಿ ನಿರ್ಗಮಿಸಿದರು. ಮಿಚೆಲ್ ಹಾಗೂ ಕೇನ್ 181 ರನ್ ಜೊತೆಯಾಟ ಅಂತ್ಯಗೊಂಡಿತು. ಇತ್ತ ಭಾರತ ತಂಡ ಗೆಲುವಿನತ್ತ ಮುಖ ಮಾಡಿತು. ವಿಲಿಯಮ್ಸನ್ ಬೆನ್ನಲ್ಲೇ ಟಾಮ್ ಲಾಥಮ್ ವಿಕೆಟ್ ಕಬಳಿಸಿದ ಶಮಿ, ಭಾರತಕ್ಕೆ ಭರ್ಜರಿ ಮುನ್ನಡೆ ತಂದುಕೊಟ್ಟರು. ಇತ್ತ ಡರಿಲ್ ಮಿಚೆಲ್ ಹಾಗೂ ಗ್ಲೆನ್ ಫಿಲಿಪ್ಸ್ ಜೊತೆಯಾಟ ಆರಂಭಗೊಂಡಿತು. ಈ ಜೋಡಿಯನ್ನು ಜಸ್ಪ್ರೀತ್ ಬುಮ್ರಾ ಬ್ರೇಕ್ ಮಾಡಿದರು.

ಪಿಲಿಪ್ಸ್ 41 ರನ್ ಸಿಡಿಸಿ ಔಟಾದರು. ಮಾರ್ಕ್ ಚಂಪನ್ ಕೇವಲ 2 ರನ್ ಸಿಡಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ ಹಾಗೂ ಫರ್ಗ್ಯೂಸನ್ ವಿಕೆಟ್ ಕಬಲಿಸದ ಶಮಿ, ನ್ಯೂಜಿಲೆಂಡ್ ತಂಡವನ್ನು 48.5 ಓವರ್‌ಗಳಲ್ಲಿ 327 ರನ್‌ಗೆ ಆಲೌಟ್ ಮಾಡಿದರು.  ಭಾರತ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿತು. 2011ರ ಬಳಿಕ ಭಾರತ ವಿಶ್ವಕಪ್ ಟೂರ್ನಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿತು.

ಮೊಹಮ್ಮದ್ ಶಮಿ 7 ವಿಕೆಟ್ ಕಬಳಿಸಿ ಮಿಂಚಿದರು. ವಿಶ್ವಕಪ್ ಟೂರ್ನಿಯಲ್ಲಿ ಅತೀ ಕಡಿಮೆ ಇನ್ನಿಂಗ್ಸ್ನಲ್ಲಿ 50 ವಿಕೆಟ್ ಸಾಧನೆ ಮಾಡಿದ ಹೆಗ್ಗಳಿಕೆಗೆ ಶಮಿ ಪಾತ್ರರಾಗಿದ್ದಾರೆ. ಶಮಿ 17 ಇನ್ನಿಂಗ್ಸ್‌ನಲ್ಲಿ 50 ವಿಕೆಟ್ ಸಾಧನೆ ಮಾಡಿದ್ದಾರೆ.

ಸಚಿನ್ ದಾಖಲೆ ಮುರಿದ ವಿರಾಟ್

ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್‌ ಎಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ಸ್ಟಾರ್‌ ವಿರಾಟ್‌ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಹೆಸರಲ್ಲಿ ಎರಡು ದಶಕ ಕಾಲ ಉಳಿದಿದ್ದ ವಿಶ್ವ ದಾಖಲೆಯನ್ನು ವಿರಾಟ್‌ ಕೊಹ್ಲಿ ಅಳಿಸಿಹಾಕಿದ್ದಾರೆ.

2003ರ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್ ಭಾರತ ತಂಡದ ಪರ 673 ರನ್‌ಗಳನ್ನು ಬಾರಿಸಿದ್ದರು. ಈ ದಾಖಲೆಯನ್ನು 2023ರಲ್ಲಿ ವಿರಾಟ್ ಕೊಹ್ಲಿ 711* ರನ್‌ ಗಳಿಸುವ ಮೂಲಕ ಸಚಿನ್ ದಾಖಲೆ ಮುರಿದಿದ್ದಾರೆ. 13ನೇ ಆವೃತ್ತಿಯ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಿದ 113 ಎಸೆತಗಳಲ್ಲಿ 9 ಫೋರ್‌ ಮತ್ತು 2 ಸಿಕ್ಸರ್‌ನೊಂದಿಗೆ 117 ರನ್‌ ಬಾರಿಸಿದ ವಿರಾಟ್‌ ಕೊಹ್ಲಿ, ಈ ಮನಮೋಹಕ ಇನಿಂಗ್ಸ್‌ ವೇಳೆ ದಾಖಲೆಗಳ ಮೇಲೆ ದಾಖಲೆ ಬರೆದರು.

ಇದು ವಿರಾಟ್‌ ಕೊಹ್ಲಿ ಬಾರಿಸಿದ ವಿಶ್ವ ದಾಖಲೆಯ 50ನೇ ಒಡಿಐ ಶತಕವಾಗಿದೆ. ಇದರೊಂದಿಗೆ ಸಚಿನ್ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನೂ ಅಳಿಸಿಹಾಕಿದ್ದಾರೆ. ಈ ಶತಕದ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಆಡಿದ 10 ಪಂದ್ಯಗಳಲ್ಲಿ ಒಟ್ಟು 3 ಶತಕಗಳೊಂದಿಗೆ 101.57ರ ಸರಾಸರಿಯಲ್ಲಿ ಒಟ್ಟಾರೆ 711 ರನ್‌ ಬಾರಿಸಿದ್ದಾರೆ. ವಿಶ್ವಕಪ್‌ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ 700ಕ್ಕೂ ಹೆಚ್ಚು ರನ್‌ ಗಳಿಸಿದ ಮೊದಲ ಬ್ಯಾಟರ್‌ ಎಂಬ ದಾಖಲೆ ಈಗ ಕೊಹ್ಲಿ ಪಾಲಾಗಿದೆ.

ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌

ವಿಶ್ವಕಪ್‌ ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌ ಗಳಿಸಿದ ದಾಖಲೆ ಕೂಡ ವಿರಾಟ್‌ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ 7 ಬಾರಿ ಈ ಸಾಧನೆ ಮಾಡಿ ಸಚಿನ್‌ ಮತ್ತು ಬಾಂಗ್ಲಾದೇಶದ ಆಲ್‌ರೌಂಡರ್ ಶಕಿಬ್ ಅಲ್ ಹಸನ್‌ ಜೊತೆಗೆ ದಾಖಲೆ ಹಂಚಿಕೊಂಡಿದ್ದರು. ಇದೀಗ 3 ಶತಕ ಮತ್ತು 5 ಅರ್ಧಶತಕಗಳೊಂದಿಗೆ ಒಟ್ಟಾರೆ 8 ಬಾರಿ ಒಂದೇ ಆವೃತ್ತಿಯಲ್ಲಿ 50ಕ್ಕೂ ಹೆಚ್ಚು ರನ್‌ ಬಾರಿಸಿ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...