Homeಮುಖಪುಟಮೊಯಿತ್ರಾರನ್ನ ಸಂಸತ್ತಿನಿಂದ ಹೊರಹಾಕುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧ: ಪ್ರಗತಿಪರರು

ಮೊಯಿತ್ರಾರನ್ನ ಸಂಸತ್ತಿನಿಂದ ಹೊರಹಾಕುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧ: ಪ್ರಗತಿಪರರು

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ಸಂಸತ್ತಿನಿಂದ ಉಚ್ಚಾಟಿಸಲು ಲೋಕಸಭೆಯ ನೈತಿಕ ಸಮಿತಿ ಶಿಫಾರಸು ಮಾಡಿರುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು 123 ಪ್ರಗತಿಪರ ಗುಂಪು ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ. ಈ ಗುಂಪಿನಲ್ಲಿ ನಿವೃತ್ತ ಅಧಿಕಾರಿಗಳು, ಬರಹಗಾರರು, ಕಾರ್ಯಕರ್ತರು ಮತ್ತು ವಕೀಲರಿದ್ದಾರೆ.

ಮಹುವಾ ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹೀರಾನಂದನಿಯಿಂದ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಅವರು ಆರೋಪಿಸಿದ್ದಾರೆ.

ಆರೋಪಗಳ ತನಿಖೆ ನಡೆಸಿದ ಲೋಕಸಭೆಯ ನೈತಿಕ ಸಮಿತಿಯು ನವೆಂಬರ್ 8 ರಂದು ತನ್ನ ಕರಡು ವರದಿಯಲ್ಲಿ ಶಿಫಾರಸು ಮಾಡಿದೆ. ಸಮಿತಿಯು ಮಹುವಾ ಅವರ ನಡೆಯು ಅತ್ಯಂತ ಆಕ್ಷೇಪಾರ್ಹ, ಅನೈತಿಕ, ಹೇಯ ಮತ್ತು ಅಪರಾಧ ಎಂದು ಆರೋಪಿಸಿದೆ. ಆರು ಪ್ಯಾನೆಲ್ ಸದಸ್ಯರು ಅದನ್ನು ಬೆಂಬಲಿಸಿದರು ಮತ್ತು ನಾಲ್ವರು ಅಸಮ್ಮತಿ ಟಿಪ್ಪಣಿಗಳನ್ನು ಸಲ್ಲಿಸುವುದರೊಂದಿಗೆ ವರದಿಯನ್ನು ಅಂಗೀಕರಿಸಲಾಯಿತು.

ಮೊಯಿತ್ರಾ ಅವರನ್ನು ಬೆಂಬಲಿಸಿ ಬುಧವಾರದ ಹೇಳಿಕೆಗೆ ಸಹಿ ಮಾಡಿದವರಲ್ಲಿ ಸಾಮಾಜಿಕ ಕಾರ್ಯಕರ್ತೆ ಅಭಾ ಭಯ್ಯಾ, ನಿವೃತ್ತ ನಾಗರಿಕ ಸೇವಕರಾದ ಇಎಎಸ್ ಶರ್ಮಾ, ಅನಿತಾ ಅಗ್ನಿಹೋತ್ರಿ ಮತ್ತು ಅಶೋಕ್ ವಾಜಪೇಯಿ, ಪತ್ರಕರ್ತರಾದ ಪಿ ಸಾಯಿನಾಥ್ ಮತ್ತು ಪಮೇಲಾ ಫಿಲಿಪೋಸ್ ಮತ್ತು ಪ್ರಾಧ್ಯಾಪಕರಾದ ರಾಘವನ್ ರಂಗರಾಜನ್, ಸುರೀಂದರ್ ಕುಮಾರ್ ಮತ್ತು ಜಗಮೋಹನ್ ಸಿಂಗ್ ಸೇರಿದ್ದಾರೆ.

”ನ್ಯಾಯದ ತತ್ವಗಳಿಗೆ ಅನುಗುಣವಾಗಿ ಇನ್ನೂ ಕಟ್ಟುನಿಟ್ಟಾದ ಸಂಸದೀಯ ಮತ್ತು ನ್ಯಾಯಾಂಗ ಪರಿಶೀಲನೆಗೆ ಒಳಪಡಬೇಕಾದ ಆರೋಪಗಳ ಆಧಾರದ ಮೇಲೆ ಮೊಯಿತ್ರಾ ಅವರನ್ನು ಹೊರಹಾಕಬಹುದು” ಎಂದು ಗುಂಪು ತನ್ನ ಹೇಳಿಕೆಯಲ್ಲಿ ಹೇಳಿದೆ.

”ಮೊಯಿತ್ರಾ ಪ್ರಕರಣದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಅಂತರ-ಕಾರ್ಪೊರೇಟ್ ಹಿತಾಸಕ್ತಿ ಸಂಘರ್ಷ ಎಂದು ಸಂಕುಚಿತವಾಗಿ ನೋಡಲಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಅದು ಹೇಳಿದೆ.

”ಸಂಪೂರ್ಣವಾಗಿ ಪರಿಶೀಲಿಸದ ಹೊರತು, ಸಂಸತ್ತು ಮೊಯಿತ್ರಾಗೆ ಅನ್ಯಾಯ ಮಾಡುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

”ಕಾನೂನನ್ನು ಅನುಸರಿಸಲು ವಿಫಲವಾದ ಕಾರ್ಪೊರೇಟ್ ಘಟಕದ ಬಗ್ಗೆ ಹಲವಾರು ರಾಜಕೀಯ ಪಕ್ಷಗಳು ಜಂಟಿ ಸಂಸದೀಯ ಸಮಿತಿಯನ್ನು ರಚಿಸಲು ಕೇಳಿಕೊಂಡಾಗ ಕೇಂದ್ರ ಸರ್ಕಾರವು ಏಕೆ ಸಮಿತಿ ರಚಿಸಲಿಲ್ಲ?” ಎಂದು ಗುಂಪು ಕೇಳಿದೆ.

ಅದಾನಿ ಗ್ರೂಪ್ ಕಾರ್ಪೊರೇಟ್ ಇತಿಹಾಸದಲ್ಲಿ ಅತಿ ದೊಡ್ಡ ಹಗರಣ ಮಾಡಿದೆ ಎಂದು ಜನವರಿಯಲ್ಲಿ ಅಮೇರಿಕನ್ ಹೂಡಿಕೆ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಆರೋಪಿಸಿದೆ. ಲೆಕ್ಕಪತ್ರ ವಂಚನೆ, ತೆರಿಗೆ ಧಾಮಗಳ ಅನುಚಿತ ಬಳಕೆ ಮತ್ತು ಮನಿ ಲಾಂಡರಿಂಗ್‌ನಲ್ಲಿ ತೊಡಗಿದೆ ಎಂದು ಹಿಂಡೆನ್‌ಬರ್ಗ್ ಸಂಸ್ಥೆಯು ಹೇಳಿಕೊಂಡಿದೆ.

ಅದಾನಿ ಗ್ರೂಪ್ ಪ್ರಕರಣದಲ್ಲಿ ಮೋದಿ ಸರ್ಕಾರದ ಪ್ರತಿಕ್ರಿಯೆಯು “ರಾಜಕೀಯ ಕಾರ್ಯನಿರ್ವಾಹಕ ಮತ್ತು ದೊಡ್ಡ ಉದ್ಯಮಗಳು ಮತ್ತು ಸಾರ್ವಜನಿಕ ಹಿತಾಸಕ್ತಿಗಾಗಿ ಅದರ ಹಾನಿಕಾರಕ ಪರಿಣಾಮಗಳ” ನಡುವಿನ ಸಂಬಂಧವನ್ನು ತೋರಿಸುತ್ತದೆ ಎಂದು ಗುಂಪು ಆರೋಪಿಸಿದೆ.

”ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಮುಖ ವಿಷಯಗಳನ್ನು ಹೈಲೈಟ್ ಮಾಡಿದ್ದಾರೆ ಮತ್ತು ಅವರನ್ನು ಹೊರಹಾಕಿದರೆ ಅಂತಹ ಪ್ರಶ್ನೆಗಳನ್ನು ಯಾರೂ ಕೇಳುವುದಿಲ್ಲ ಎಂದು ಈ ರೀತಿ ಮಾಡಲಾಗುತ್ತಿದೆ” ಎಂದು ಸಹಿ ಮಾಡಿದವರು ಹೇಳಿದರು.

”ಶಾಸಕಾಂಗದ ಸದಸ್ಯರನ್ನು ಹೊರಹಾಕುವುದು ನಮ್ಮ ಪ್ರಜಾಪ್ರಭುತ್ವದ ಮೇಲೆ ಪರಿಣಾಮ ಮೂಡುತ್ತದೆ, ಇದು ಗಂಭೀರ ವಿಷಯವಾಗಿದೆ. ಅಂತಹ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಸಂಸತ್ತು ಮತ್ತು ಇತರ ಶಾಸಕಾಂಗ ಸಂಸ್ಥೆಗಳು ಎಚ್ಚರಿಕೆಯಿಂದ ಪರಿಶೀಲನೆ ಮತ್ತು ಸೂಕ್ಷ್ಮತೆಯಿಮದ ನಡೆದುಕೊಳ್ಳಬೇಕು” ಎಂದು ಹೇಳಲಾಗಿದೆ.

ಇದನ್ನೂ ಓದಿ: ನೈತಿಕ ಸಮಿತಿ ತನಿಖೆ ಮಧ್ಯೆ ಮೊಯಿತ್ರಾಗೆ ಹೊಸ ಜವಾಬ್ದಾರಿ ನೀಡಿದ TMC

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...