Homeಮುಖಪುಟದತ್ತು ಪಡೆದ ಬಳಿಕ ಅತ್ಯಾಚಾರ ಸಂತ್ರಸ್ತೆಯ ಮಗುವಿನ ಡಿಎನ್‌ಎ ಪರೀಕ್ಷೆ ಸರಿಯಲ್ಲ: ಬಾಂಬೆ ಹೈಕೋರ್ಟ್‌

ದತ್ತು ಪಡೆದ ಬಳಿಕ ಅತ್ಯಾಚಾರ ಸಂತ್ರಸ್ತೆಯ ಮಗುವಿನ ಡಿಎನ್‌ಎ ಪರೀಕ್ಷೆ ಸರಿಯಲ್ಲ: ಬಾಂಬೆ ಹೈಕೋರ್ಟ್‌

- Advertisement -
- Advertisement -

ಅತ್ಯಾಚಾರ ಸಂತ್ರಸ್ತೆಯ ಮಗುವನ್ನು ದತ್ತು ಪಡೆದ ಬಳಿಕ ಅದಕ್ಕೆ ಡಿಎನ್‌ಎ ಪರೀಕ್ಷೆ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಬಾಂಬೆ ಹೈಕೋರ್ಟ್‌ ಹೇಳಿದೆ. ದತ್ತು ಪಡೆದ ನಂತರ ಅತ್ಯಾಚಾರ ಸಂತ್ರಸ್ತೆಯ ಮಗುವನ್ನು ಡಿಎನ್ಎ ಪರೀಕ್ಷೆ ನಡೆಸುವುದು ಮಗುವಿನ ಹಿತದೃಷ್ಟಿಯಿಂದ ಆಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಜಸ್ಟಿಸ್‌ ಜಿ ಎ ಸನಪ್‌ ಅವರ ಏಕಸದಸ್ಯ ಪೀಠವು,  17ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪಿಗೆ ಜಾಮೀನು ನೀಡಿದೆ. ಬಾಲಕಿ ಗರ್ಭಿಣಿಯಾಗಿದ್ದರು. ಬಾಲಕಿ ಮಗುವಿಗೆ ಜನ್ಮ ನೀಡಿದ ಬಳಿಕ ಮಗುವನ್ನು ದತ್ತು ನೀಡಲಾಗಿತ್ತು.

ಸಂತ್ರಸ್ತೆಗೆ ಜನಿಸಿದ ಮಗುವಿನ ಡಿಎನ್‌ಎ ಪರೀಕ್ಷೆಯನ್ನು ನಡೆಸಿದ್ದೀರಾ ಎಂದು ಈ ಹಿಂದೆ ಪೀಠವು ಪೊಲೀಸರಿಗೆ ಕೇಳಿದೆ. ಆದರೆ ಸಂತ್ರಸ್ತೆ ಹೆರಿಗೆಯಾದ ಬಳಿಕ ಮಗುವನ್ನು ದತ್ತು ಸ್ವೀಕಾರಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮಗುವನ್ನು ಈಗಾಗಲೇ ದತ್ತು ತೆಗೆದುಕೊಳ್ಳಲಾಗಿದ್ದು, ದತ್ತು ಪಡೆದ ಪೋಷಕರ ಗುರುತನ್ನು ಸಂಬಂಧಪಟ್ಟ ಸಂಸ್ಥೆಯು ಬಹಿರಂಗಪಡಿಸುತ್ತಿಲ್ಲ ಎಂದು ಅವರು ಹೇಳಿದರು. ಇದು ಸರಿಯಾಗಿದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಮಗುವನ್ನು ದತ್ತು ಸ್ವೀಕರಿಸಿದ ಬಳಿಕ ವಾಸ್ತವಿಕ ಪರಿಸ್ಥಿತಿಯಲ್ಲಿ, ಮಗುವಿನ ಡಿಎನ್ಎ ಪರೀಕ್ಷೆಯು ಮಗುವಿನ ಹಿತಾಸಕ್ತಿ ಮತ್ತು ಮಗುವಿನ ಭವಿಷ್ಯದ ಹಿತದೃಷ್ಟಿಯಿಂದ ಆಗದಿರಬಹುದು ಎಂಬುದನ್ನು ಗಮನಿಸುವುದು ಸೂಕ್ತವಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಸಂತ್ರಸ್ತೆಗೆ 17 ವರ್ಷ ವಯಸ್ಸಾಗಿದ್ದರೂ ಅವರ ಸಂಬಂಧವು ಒಮ್ಮತದಿಂದ ಕೂಡಿತ್ತು ಮತ್ತು ಆಕೆಗೆ ಸಂಬಂಧದ ಬಗ್ಗೆ ತಿಳುವಳಿಕೆ ಇದೆ ಎಂದು ಆರೋಪಿ ತನ್ನ ಜಾಮೀನು ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ. ಆರೋಪಿ ಸಂತ್ರಸ್ತೆಯೊಂದಿಗೆ ಬಲವಂತವಾಗಿ ದೈಹಿಕ ಸಂಬಂಧ ಬೆಳೆಸಿದ್ದ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಆರೋಪಿಯನ್ನು 2020ರಲ್ಲಿ ಉಪನಗರ ಓಶಿವಾರಾ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಪೋಕ್ಸೊ ಕಾಯ್ದೆ ಸೇರಿದಂತೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು.

ಸಂತ್ರಸ್ತೆ ಈ ಸಂಬಂಧಕ್ಕೆ ಸಮ್ಮತಿಸಿದ್ದಾಳೆ ಎಂದು ಆರೋಪಿ ಮಾಡಿದ ವಾದವನ್ನು ಈ ಹಂತದಲ್ಲಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದ ವೇಳೆ ಹೇಳಿದೆ. ಆದರೆ ಆರೋಪಿ 2020ರ ಬಂಧನದ ದಿನದಿಂದ ಈವರೆಗೆ ಜೈಲಿನಲ್ಲಿರುವುದರಿಂದ ಜಾಮೀನು ನೀಡಬೇಕು ಎಂದು ಹೇಳಿದೆ.

ಆರೋಪಿ 2 ವರ್ಷ 10 ತಿಂಗಳಿನಿಂದ ಜೈಲಿನಲ್ಲಿದ್ದಾನೆ. ನನ್ನ ದೃಷ್ಟಿಯಲ್ಲಿ ಆರೋಪಿಯನ್ನು ಮತ್ತಷ್ಟು ಜೈಲಿನಲ್ಲಿ ಇರಿಸುವುದು ಸಮಂಜಸವಲ್ಲ ಎಂದು ನ್ಯಾಯಾಧೀಶರು ಜಾಮೀನು ನೀಡುವ ವೇಳೆ ಹೇಳಿದ್ದಾರೆ.

ಇದನ್ನು ಓದಿ: ಮಣಿಪುರ: 3 ಜಿಲ್ಲೆಗಳಲ್ಲಿ ‘ಸ್ವಯಂ ಆಡಳಿತ’ ಘೋಷಿಸಿದ ಬುಡಕಟ್ಟು ಸಮುದಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...