Homeಕರ್ನಾಟಕಆರೋಪ ಮಾಡುವಾಗ ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ: ಹೆಚ್‌ಡಿಕೆಗೆ ಯತೀಂದ್ರ ತಿರುಗೇಟು

ಆರೋಪ ಮಾಡುವಾಗ ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ: ಹೆಚ್‌ಡಿಕೆಗೆ ಯತೀಂದ್ರ ತಿರುಗೇಟು

- Advertisement -
- Advertisement -

”ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಮಾಡುತ್ತಿರುವುದು ನೀಚ ರಾಜಕಾರಣ, ಅವರು ಅಧಿಕಾರದಲ್ಲಿದ್ದಾಗ ದಂಧೆ ಮಾಡುತ್ತಿದ್ದರು ಅನಿಸುತ್ತದೆ, ಹೀಗಾಗಿ ಅವರು ಮಾತೆತ್ತಿದರೆ ದಂಧೆ, ಲಂಚ, ಹಗರಣ ಬಗ್ಗೆ ಮಾತಮಾಡುತ್ತಾರೆ” ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಾವು ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊವನ್ನಿಟ್ಟುಕೊಂಡು ಸರ್ಕಾರವನ್ನು, ಸಿಎಂ ಸಿದ್ದರಾಮಯ್ಯನವರನ್ನು ಕಟುವಾಗಿ ಟೀಕಿಸುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡರು.

”ನಾನಾಗಲಿ, ನಮ್ಮ ತಂದೆಯಾಗಲೀ ವರ್ಗಾವಣೆ ದಂದೆಯಲ್ಲಿ ತೊಡಗಿಲ್ಲ. ಒಬ್ಬ ಮುಖ್ಯಮಂತ್ರಿ ಮೇಲೆ ಆರೋಪ ಮಾಡಬೇಕಾದರೆ ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ” ಎಂದು ಕುಮಾರಸ್ವಾಮಿಗೆ ತಿರುಗೇಟು ನೀಡಿದರು.

”ಇನ್ ಸ್ಪೆಕ್ಟರ್ ವಿವೇಕಾನಂದ ಯಾರೆಂಬುದೇ ನನಗೆ ಗೊತ್ತಿಲ್ಲ. ಅವರ ವರ್ಗಾವಣೆಗೂ ನನಗೂ ಸಂಬಂಧ ಇಲ್ಲ. ವಿಪಕ್ಷಗಳು ಹತಾಶರಾಗಿ ಟೀಕೆ ಮಾಡುತ್ತಿವೆ” ಎಂದರು.

”ಕುಮಾರಸ್ವಾಮಿ ಕೂಡ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂದೆಯನ್ನೇ ಮಾಡುತ್ತಿದ್ದರಾ?” ಎಂದು ಪ್ರಶ್ನಿಸಿದರು.

ವಿಡಿಯೋ ಕುರಿತು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ತಾವು ಮೊಬೈಲ್ ನಲ್ಲಿ ಮಾತನಾಡುವ ವೇಳೆ ಪ್ರಸ್ತಾಪಿಸಿದ್ದ ಲಿಸ್ಟ್ ಬಗ್ಗೆ ವಿರೋಧ ಪಕ್ಷಗಳ ನಾಯಕರು ತರಾಟೆಗೆ ತೆಗೆದುಕೊಳ್ಳುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಡಾ ಯತೀಂದ್ರ, ”ಸಿಎಸ್​ಆರ್ ಫಂಡ್​​ ಬಗ್ಗೆ ನಾನು ಅವತ್ತು ಮಾತನಾಡಿದ್ದು. ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದ್ರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ. ವಿವೇಕಾನಂದ ಯಾರು ಎಂದು ನನಗೆ ಗೊತ್ತಿಲ್ಲ. ಇನ್ಸ್​ಪೆಕ್ಟರ್​​ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ. ನಮ್ಮ ಕ್ಷೇತ್ರದಲ್ಲಿ ವಿವೇಕಾನಂದ ಅಂತಾ ಬಿಇಒ ಕೂಡ ಇದ್ದಾರೆ. ವಿಪಕ್ಷಗಳು ಹತಾಶರಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿವೆ. ಇವರು ಅಧಿಕಾರದಲ್ಲಿದ್ದರು, ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂಧೆಯನ್ನೇ ಮಾಡುತ್ತಿದ್ದರಾ, ಭ್ರಷ್ಟಾಚಾರ, ದಂಧೆ ಆಗ್ತಿದೆ ಎಂದು ಸುಳ್ಳು ಆರೋಪ ಮಾಡಬಾರದು” ಎಂದರು.

”ನಾನು ವರುಣಾ ಕ್ಷೇತ್ರದ ಮಾಜಿ ಶಾಸಕ. ಈ ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳುವ ಕೆಲಸವನ್ನು ತಂದೆ ಸಿದ್ದರಾಮಯ್ಯನವರು ನನಗೆ ವಹಿಸಿದ್ದಾರೆ. ಕ್ಷೇತ್ರದ ಕೆಲಸಗಳು ಸಾಕಷ್ಟು ಇರುತ್ತವೆ. ನಾನು ಒಬ್ಬ ಖಾಸಗಿ ವ್ಯಕ್ತಿಯಲ್ಲ, ಸಾರ್ವಜನಿಕ ವ್ಯಕ್ತಿ, ನಮ್ಮ ಬಳಿ ಹತ್ತಾರು ಜನರು ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಬರುತ್ತಾರೆ, ವರ್ಗಾವಣೆ ಪ್ರತಿ ಸರ್ಕಾರದಲ್ಲಿಯೂ ಆಗುತ್ತಿರುತ್ತದೆ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಕೂಡ ಆಗುತ್ತಿತ್ತು, ಹಾಗಾದರೆ ಅವರು ದಂಧೆಯಲ್ಲಿ ತೊಡಗಿದ್ದರೇ?” ಎಂದು ಪ್ರಶ್ನಿಸಿದರು.

ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ. ನಾನು ಹತ್ತಾರು ವಿಚಾರಗಳ ಕುರಿತು ಸಿಎಂ ಜೊತೆ ಮಾತನಾಡುತ್ತೇನೆ. ಹಲವು ಕೆಲಸ ಮಾಡಿಕೊಡುವಂತೆ ಪಟ್ಟಿ ಕೊಡುತ್ತೇನೆ. ನಮ್ಮಲ್ಲಿ ನೂರಾರು ಅರ್ಜಿಗಳು, ಬೇಡಿಕೆಗಳು ಬರುತ್ತವೆ, ಅವುಗಳನ್ನು ನೋಡಿಕೊಂಡು ಸಿಎಂ ಅವರಿಗೆ ಫಾರ್ವರ್ಡ್ ಮಾಡುತ್ತೇನೆ, ಅದನ್ನು ಮಾಡುವುದು ಬಿಡುವುದು ಸಿಎಂ ಅವರಿಗೆ ಬಿಟ್ಟ ವಿಚಾರ” ಎಂದರು.

”ನಾನು ದುಡ್ಡಿನ ಬಗ್ಗೆ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು. ನಾನು ಸಿಎಸ್ಆರ್ ಫಂಡ್ ವಿಚಾರದ ಬಗ್ಗೆ ಮಾತನಾಡಿರುವುದು. ಲಿಸ್ಟ್ ಎಂದ ಕೂಡಲೇ ವರ್ಗಾವಣೆಗೆ ಅಂತಾ ಯಾಕೆ ಹೇಳುತ್ತೀರಿ? ಇವರ ಅವಧಿಯಲ್ಲಿ ಲಿಸ್ಟ್, ವರ್ಗಾವಣೆ ಅಂದರೆ ದಂಧೆಯಾಗಿತ್ತಾ? ಇವರ ಪತ್ನಿ, ಮಗ ಮತ್ತು ಇಡೀ ಕುಟುಂಬವೇ ರಾಜಕಾರಣದಲ್ಲಿದೆ. ಅವರ ಮೇಲೂ ನಾವೂ ಅದೇ ರೀತಿ ಮಾತನಾಡಲು ಆಗುತ್ತದಾ? ಇವರ ಅವಧಿಯಲ್ಲಿ ಮಾಡಿದ ವರ್ಗಾವಣೆಯಲ್ಲಾ ದಂಧೆಯೇ? ಹಣ ಪಡೆದೇ ವರ್ಗಾವಣೆ ಮಾಡಿದ್ದಾರಾ?” ಎಂದು ಯತೀಂದ್ರ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿಯ ಕಾಮಾಲೆ ಕಣ್ಣಿಗೆ ಎಲ್ಲವೂ ಲಂಚದ ವ್ಯವಹಾರಗಳಂತೆ ಕಾಣಿಸುತ್ತಿದೆ: ಸಿದ್ದರಾಮಯ್ಯ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...