Homeಕರ್ನಾಟಕಆರೋಪ ಮಾಡುವಾಗ ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ: ಹೆಚ್‌ಡಿಕೆಗೆ ಯತೀಂದ್ರ ತಿರುಗೇಟು

ಆರೋಪ ಮಾಡುವಾಗ ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ: ಹೆಚ್‌ಡಿಕೆಗೆ ಯತೀಂದ್ರ ತಿರುಗೇಟು

- Advertisement -
- Advertisement -

”ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಮಾಡುತ್ತಿರುವುದು ನೀಚ ರಾಜಕಾರಣ, ಅವರು ಅಧಿಕಾರದಲ್ಲಿದ್ದಾಗ ದಂಧೆ ಮಾಡುತ್ತಿದ್ದರು ಅನಿಸುತ್ತದೆ, ಹೀಗಾಗಿ ಅವರು ಮಾತೆತ್ತಿದರೆ ದಂಧೆ, ಲಂಚ, ಹಗರಣ ಬಗ್ಗೆ ಮಾತಮಾಡುತ್ತಾರೆ” ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಾವು ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊವನ್ನಿಟ್ಟುಕೊಂಡು ಸರ್ಕಾರವನ್ನು, ಸಿಎಂ ಸಿದ್ದರಾಮಯ್ಯನವರನ್ನು ಕಟುವಾಗಿ ಟೀಕಿಸುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡರು.

”ನಾನಾಗಲಿ, ನಮ್ಮ ತಂದೆಯಾಗಲೀ ವರ್ಗಾವಣೆ ದಂದೆಯಲ್ಲಿ ತೊಡಗಿಲ್ಲ. ಒಬ್ಬ ಮುಖ್ಯಮಂತ್ರಿ ಮೇಲೆ ಆರೋಪ ಮಾಡಬೇಕಾದರೆ ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ” ಎಂದು ಕುಮಾರಸ್ವಾಮಿಗೆ ತಿರುಗೇಟು ನೀಡಿದರು.

”ಇನ್ ಸ್ಪೆಕ್ಟರ್ ವಿವೇಕಾನಂದ ಯಾರೆಂಬುದೇ ನನಗೆ ಗೊತ್ತಿಲ್ಲ. ಅವರ ವರ್ಗಾವಣೆಗೂ ನನಗೂ ಸಂಬಂಧ ಇಲ್ಲ. ವಿಪಕ್ಷಗಳು ಹತಾಶರಾಗಿ ಟೀಕೆ ಮಾಡುತ್ತಿವೆ” ಎಂದರು.

”ಕುಮಾರಸ್ವಾಮಿ ಕೂಡ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂದೆಯನ್ನೇ ಮಾಡುತ್ತಿದ್ದರಾ?” ಎಂದು ಪ್ರಶ್ನಿಸಿದರು.

ವಿಡಿಯೋ ಕುರಿತು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ತಾವು ಮೊಬೈಲ್ ನಲ್ಲಿ ಮಾತನಾಡುವ ವೇಳೆ ಪ್ರಸ್ತಾಪಿಸಿದ್ದ ಲಿಸ್ಟ್ ಬಗ್ಗೆ ವಿರೋಧ ಪಕ್ಷಗಳ ನಾಯಕರು ತರಾಟೆಗೆ ತೆಗೆದುಕೊಳ್ಳುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಡಾ ಯತೀಂದ್ರ, ”ಸಿಎಸ್​ಆರ್ ಫಂಡ್​​ ಬಗ್ಗೆ ನಾನು ಅವತ್ತು ಮಾತನಾಡಿದ್ದು. ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದ್ರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ. ವಿವೇಕಾನಂದ ಯಾರು ಎಂದು ನನಗೆ ಗೊತ್ತಿಲ್ಲ. ಇನ್ಸ್​ಪೆಕ್ಟರ್​​ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ. ನಮ್ಮ ಕ್ಷೇತ್ರದಲ್ಲಿ ವಿವೇಕಾನಂದ ಅಂತಾ ಬಿಇಒ ಕೂಡ ಇದ್ದಾರೆ. ವಿಪಕ್ಷಗಳು ಹತಾಶರಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿವೆ. ಇವರು ಅಧಿಕಾರದಲ್ಲಿದ್ದರು, ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂಧೆಯನ್ನೇ ಮಾಡುತ್ತಿದ್ದರಾ, ಭ್ರಷ್ಟಾಚಾರ, ದಂಧೆ ಆಗ್ತಿದೆ ಎಂದು ಸುಳ್ಳು ಆರೋಪ ಮಾಡಬಾರದು” ಎಂದರು.

”ನಾನು ವರುಣಾ ಕ್ಷೇತ್ರದ ಮಾಜಿ ಶಾಸಕ. ಈ ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳುವ ಕೆಲಸವನ್ನು ತಂದೆ ಸಿದ್ದರಾಮಯ್ಯನವರು ನನಗೆ ವಹಿಸಿದ್ದಾರೆ. ಕ್ಷೇತ್ರದ ಕೆಲಸಗಳು ಸಾಕಷ್ಟು ಇರುತ್ತವೆ. ನಾನು ಒಬ್ಬ ಖಾಸಗಿ ವ್ಯಕ್ತಿಯಲ್ಲ, ಸಾರ್ವಜನಿಕ ವ್ಯಕ್ತಿ, ನಮ್ಮ ಬಳಿ ಹತ್ತಾರು ಜನರು ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಬರುತ್ತಾರೆ, ವರ್ಗಾವಣೆ ಪ್ರತಿ ಸರ್ಕಾರದಲ್ಲಿಯೂ ಆಗುತ್ತಿರುತ್ತದೆ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಕೂಡ ಆಗುತ್ತಿತ್ತು, ಹಾಗಾದರೆ ಅವರು ದಂಧೆಯಲ್ಲಿ ತೊಡಗಿದ್ದರೇ?” ಎಂದು ಪ್ರಶ್ನಿಸಿದರು.

ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ. ನಾನು ಹತ್ತಾರು ವಿಚಾರಗಳ ಕುರಿತು ಸಿಎಂ ಜೊತೆ ಮಾತನಾಡುತ್ತೇನೆ. ಹಲವು ಕೆಲಸ ಮಾಡಿಕೊಡುವಂತೆ ಪಟ್ಟಿ ಕೊಡುತ್ತೇನೆ. ನಮ್ಮಲ್ಲಿ ನೂರಾರು ಅರ್ಜಿಗಳು, ಬೇಡಿಕೆಗಳು ಬರುತ್ತವೆ, ಅವುಗಳನ್ನು ನೋಡಿಕೊಂಡು ಸಿಎಂ ಅವರಿಗೆ ಫಾರ್ವರ್ಡ್ ಮಾಡುತ್ತೇನೆ, ಅದನ್ನು ಮಾಡುವುದು ಬಿಡುವುದು ಸಿಎಂ ಅವರಿಗೆ ಬಿಟ್ಟ ವಿಚಾರ” ಎಂದರು.

”ನಾನು ದುಡ್ಡಿನ ಬಗ್ಗೆ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು. ನಾನು ಸಿಎಸ್ಆರ್ ಫಂಡ್ ವಿಚಾರದ ಬಗ್ಗೆ ಮಾತನಾಡಿರುವುದು. ಲಿಸ್ಟ್ ಎಂದ ಕೂಡಲೇ ವರ್ಗಾವಣೆಗೆ ಅಂತಾ ಯಾಕೆ ಹೇಳುತ್ತೀರಿ? ಇವರ ಅವಧಿಯಲ್ಲಿ ಲಿಸ್ಟ್, ವರ್ಗಾವಣೆ ಅಂದರೆ ದಂಧೆಯಾಗಿತ್ತಾ? ಇವರ ಪತ್ನಿ, ಮಗ ಮತ್ತು ಇಡೀ ಕುಟುಂಬವೇ ರಾಜಕಾರಣದಲ್ಲಿದೆ. ಅವರ ಮೇಲೂ ನಾವೂ ಅದೇ ರೀತಿ ಮಾತನಾಡಲು ಆಗುತ್ತದಾ? ಇವರ ಅವಧಿಯಲ್ಲಿ ಮಾಡಿದ ವರ್ಗಾವಣೆಯಲ್ಲಾ ದಂಧೆಯೇ? ಹಣ ಪಡೆದೇ ವರ್ಗಾವಣೆ ಮಾಡಿದ್ದಾರಾ?” ಎಂದು ಯತೀಂದ್ರ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿಯ ಕಾಮಾಲೆ ಕಣ್ಣಿಗೆ ಎಲ್ಲವೂ ಲಂಚದ ವ್ಯವಹಾರಗಳಂತೆ ಕಾಣಿಸುತ್ತಿದೆ: ಸಿದ್ದರಾಮಯ್ಯ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...