Homeಮುಖಪುಟಪ್ಯಾಲೆಸ್ತೀನ್‌ಗೆ ಭಾರತದಿಂದ 2ನೇ ಹಂತದ ಪರಿಹಾರ ಸಾಮಾಗ್ರಿ ರವಾನೆ

ಪ್ಯಾಲೆಸ್ತೀನ್‌ಗೆ ಭಾರತದಿಂದ 2ನೇ ಹಂತದ ಪರಿಹಾರ ಸಾಮಾಗ್ರಿ ರವಾನೆ

- Advertisement -
- Advertisement -

ಯುದ್ದ ಪೀಡಿತ ಪ್ಯಾಲೆಸ್ತೀನ್‌ಗೆ ಭಾರತ ಭಾನುವಾರ 2ನೇ ಹಂತದ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಿಕೊಟ್ಟಿದೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್, ನಾವು ಪ್ಯಾಲೆಸ್ತೀನ್‌ ಜನರಿಗೆ ಮಾನವೀಯ ನೆರವು ನೀಡುವುದನ್ನು ಮುಂದುವರಿಸುತ್ತೇವೆ. 32 ಟನ್‌ಗಳ ಪರಿಹಾರ ಸಾಮಾಗ್ರಿಗನ್ನು ಹೊತ್ತ 2ನೇ ಭಾರತೀಯ ವಾಯುಪಡೆಯ C17 ವಿಮಾನವು ಈಜಿಪ್ಟ್‌ನ ಎಲ್-ಅರಿಶ್ ವಿಮಾನ ನಿಲ್ದಾಣಕ್ಕೆ ಹೊರಡಲಿದೆ ಎಂದು ವಿದೇಶಾಂಗ ಸಚಿವರು ತಿಳಿಸಿದ್ದಾರೆ.

ಅ.22ರಂದು ಭಾರತವು ಪ್ಯಾಲೆಸ್ತೀನ್‌ಗೆ ವೈದ್ಯಕೀಯ ಮತ್ತು ವಿಪತ್ತು ಪರಿಹಾರ ಸೇರಿದಂತೆ ಮೊದಲ ನೆರವನ್ನು ಕಳುಹಿಸಿಕೊಟ್ಟಿತ್ತು.

ಗಾಝಾ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ ಈವೆರೆಗೆ ಪ್ಯಾಲೆಸ್ತೀನ್‌ನಲ್ಲಿ  ಆಕ್ರಮಣದಿಂದ 12,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ  5,000 ಕ್ಕೂ ಹೆಚ್ಚು ಮಕ್ಕಳು ಮತ್ತು 3,300 ಮಹಿಳೆಯರು ಸೇರಿದ್ದಾರೆ, 30,000 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್ ಸರಕಾರಿ ಮಾದ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ವರದಿಯ ಪ್ರಕಾರ 1,800 ಮಕ್ಕಳು ಸೇರಿದಂತೆ ಸುಮಾರು 3,750 ಜನರು ಇನ್ನೂ ಪತ್ತೆಯಾಗಿಲ್ಲ. ಮೃತರಲ್ಲಿ ಒಟ್ಟು 200 ವೈದ್ಯರು, 22 ಸಿವಿಲ್ ಡಿಫೆನ್ಸ್ ಸಿಬ್ಬಂದಿ ಮತ್ತು 51 ಪತ್ರಕರ್ತರು ಕೂಡ ಸೇರಿದ್ದಾರೆ.

ಇಸ್ರೇಲ್‌ ಆಕ್ರಮಣದಿಂದ 25 ಆಸ್ಪತ್ರೆಗಳು ಮತ್ತು 52 ಆರೋಗ್ಯ ಕೇಂದ್ರಗಳು ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ಇದಲ್ಲದೆ 55 ಆಂಬ್ಯುಲೆನ್ಸ್‌ಗಳನ್ನು ಇಸ್ರೇಲ್‌ ಪಡೆಗಳು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇಸ್ರೇಲ್‌ ದಾಳಿಯಲ್ಲಿ ಆಸ್ಪತ್ರೆಗಳು, ಮಸೀದಿಗಳು ಮತ್ತು ಚರ್ಚ್‌ಗಳು ಸೇರಿದಂತೆ ಸಾವಿರಾರು ಕಟ್ಟಡಗಳು ಧ್ವಂಸಗೊಂಡಿದೆ.

ಇಸ್ರೇಲ್‌ ಗಾಝಾದ ಅತಿದೊಡ್ಡ ಆಸ್ಪತ್ರೆ ಅಲ್-ಶಿಫಾ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಆಸ್ಪತ್ರೆಯಿಂದ ಜನರನ್ನು ತೆರವುಗೊಳಿಸುವಂತೆ ಇಸ್ರೇಲ್ ಸೇನೆ ಶನಿವಾರ ಆದೇಶಿಸಿದ ಬಳಿಕ ಆಸ್ಪತ್ರೆಯಲ್ಲಿದ್ದ ರೋಗಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಆಸ್ಪತ್ರೆಯಲ್ಲಿ ಆಶ್ರಯ ಪಡೆದಿದ್ದವರು ಕಾಲ್ನಡಿಗೆಯಲ್ಲಿ ತೆರಳಿದ್ದಾರೆ. ಈ ಮಧ್ಯೆ ತೀವ್ರ ಅನಾರೋಗ್ಯಗೊಂಡಿರುವ ಸುಮಾರು 450 ರೋಗಿಗಳು ಆಸ್ಪತ್ರೆಯಲ್ಲೇ ಉಳಿದಿದ್ದಾರೆ ಎಂದು ವರದಿಯಾಗಿದೆ.

ಅಲ್-ಶಿಫಾ ಆಸ್ಪತ್ರೆಯಡಿಯಲ್ಲಿ ಹಮಾಸ್‍ನ ಕಾರ್ಯಾಚರಣಾ ನೆಲೆಯಿದೆ ಎಂದು ಇಸ್ರೇಲ್ ಹೇಳಿದ್ದು, ಇದನ್ನು ಹಮಾಸ್ ತಳ್ಳಿಹಾಕಿದೆ. ನಿನ್ನೆ ಗಾಝಾ ನಗರದಲ್ಲಿ ಲೌಡ್ ಸ್ಪೀಕರ್ಗಳ ಮೂಲಕ ಘೋಷಣೆ ಮಾಡಿದ ಇಸ್ರೇಲ್ ಸೇನೆ ಒಂದು ಗಂಟೆಯೊಳಗೆ ಆಸ್ಪತ್ರೆಯನ್ನು ತೆರವುಗೊಳಿಸುವಂತೆ ಆದೇಶಿಸಿತ್ತು.

ಇದಲ್ಲದೆ ಬಾಂಗ್ಲಾದೇಶ ಸಹಿತ 5 ದೇಶಗಳು ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ಅಂತರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌ಗೆ ತನಿಖೆಗೆ ಆಗ್ರಹಿಸಿವೆ. ಐಸಿಸಿ ಸದಸ್ಯರಾದ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಬೊಲಿವಿಯಾ, ಕೊಮೊರೊಸ್ ಮತ್ತು ಜಿಬೌಟಿ ದೇಶಗಳು ಫೆಲೆಸ್ತೀನ್ ದೇಶದಲ್ಲಿನ ಪರಿಸ್ಥಿತಿಯ ಬಗ್ಗೆ ತನಿಖೆಗೆ ಆಗ್ರಹಿಸಿವೆ ಎಂದು ಐಸಿಸಿ ಮುಖ್ಯ ಪ್ರಾಸಿಕ್ಯೂಟರ್ ಕರೀಮ್ ಖಾನ್ ಹೇಳಿದ್ದಾರೆ.

ಇದನ್ನು ಓದಿ: ಉತ್ತರಪ್ರದೇಶ: ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...