Homeಮುಖಪುಟಪ್ಯಾಲೆಸ್ತೀನ್‌ಗೆ ಭಾರತದಿಂದ 2ನೇ ಹಂತದ ಪರಿಹಾರ ಸಾಮಾಗ್ರಿ ರವಾನೆ

ಪ್ಯಾಲೆಸ್ತೀನ್‌ಗೆ ಭಾರತದಿಂದ 2ನೇ ಹಂತದ ಪರಿಹಾರ ಸಾಮಾಗ್ರಿ ರವಾನೆ

- Advertisement -
- Advertisement -

ಯುದ್ದ ಪೀಡಿತ ಪ್ಯಾಲೆಸ್ತೀನ್‌ಗೆ ಭಾರತ ಭಾನುವಾರ 2ನೇ ಹಂತದ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಿಕೊಟ್ಟಿದೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್, ನಾವು ಪ್ಯಾಲೆಸ್ತೀನ್‌ ಜನರಿಗೆ ಮಾನವೀಯ ನೆರವು ನೀಡುವುದನ್ನು ಮುಂದುವರಿಸುತ್ತೇವೆ. 32 ಟನ್‌ಗಳ ಪರಿಹಾರ ಸಾಮಾಗ್ರಿಗನ್ನು ಹೊತ್ತ 2ನೇ ಭಾರತೀಯ ವಾಯುಪಡೆಯ C17 ವಿಮಾನವು ಈಜಿಪ್ಟ್‌ನ ಎಲ್-ಅರಿಶ್ ವಿಮಾನ ನಿಲ್ದಾಣಕ್ಕೆ ಹೊರಡಲಿದೆ ಎಂದು ವಿದೇಶಾಂಗ ಸಚಿವರು ತಿಳಿಸಿದ್ದಾರೆ.

ಅ.22ರಂದು ಭಾರತವು ಪ್ಯಾಲೆಸ್ತೀನ್‌ಗೆ ವೈದ್ಯಕೀಯ ಮತ್ತು ವಿಪತ್ತು ಪರಿಹಾರ ಸೇರಿದಂತೆ ಮೊದಲ ನೆರವನ್ನು ಕಳುಹಿಸಿಕೊಟ್ಟಿತ್ತು.

ಗಾಝಾ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ ಈವೆರೆಗೆ ಪ್ಯಾಲೆಸ್ತೀನ್‌ನಲ್ಲಿ  ಆಕ್ರಮಣದಿಂದ 12,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ  5,000 ಕ್ಕೂ ಹೆಚ್ಚು ಮಕ್ಕಳು ಮತ್ತು 3,300 ಮಹಿಳೆಯರು ಸೇರಿದ್ದಾರೆ, 30,000 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್ ಸರಕಾರಿ ಮಾದ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ವರದಿಯ ಪ್ರಕಾರ 1,800 ಮಕ್ಕಳು ಸೇರಿದಂತೆ ಸುಮಾರು 3,750 ಜನರು ಇನ್ನೂ ಪತ್ತೆಯಾಗಿಲ್ಲ. ಮೃತರಲ್ಲಿ ಒಟ್ಟು 200 ವೈದ್ಯರು, 22 ಸಿವಿಲ್ ಡಿಫೆನ್ಸ್ ಸಿಬ್ಬಂದಿ ಮತ್ತು 51 ಪತ್ರಕರ್ತರು ಕೂಡ ಸೇರಿದ್ದಾರೆ.

ಇಸ್ರೇಲ್‌ ಆಕ್ರಮಣದಿಂದ 25 ಆಸ್ಪತ್ರೆಗಳು ಮತ್ತು 52 ಆರೋಗ್ಯ ಕೇಂದ್ರಗಳು ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ಇದಲ್ಲದೆ 55 ಆಂಬ್ಯುಲೆನ್ಸ್‌ಗಳನ್ನು ಇಸ್ರೇಲ್‌ ಪಡೆಗಳು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇಸ್ರೇಲ್‌ ದಾಳಿಯಲ್ಲಿ ಆಸ್ಪತ್ರೆಗಳು, ಮಸೀದಿಗಳು ಮತ್ತು ಚರ್ಚ್‌ಗಳು ಸೇರಿದಂತೆ ಸಾವಿರಾರು ಕಟ್ಟಡಗಳು ಧ್ವಂಸಗೊಂಡಿದೆ.

ಇಸ್ರೇಲ್‌ ಗಾಝಾದ ಅತಿದೊಡ್ಡ ಆಸ್ಪತ್ರೆ ಅಲ್-ಶಿಫಾ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಆಸ್ಪತ್ರೆಯಿಂದ ಜನರನ್ನು ತೆರವುಗೊಳಿಸುವಂತೆ ಇಸ್ರೇಲ್ ಸೇನೆ ಶನಿವಾರ ಆದೇಶಿಸಿದ ಬಳಿಕ ಆಸ್ಪತ್ರೆಯಲ್ಲಿದ್ದ ರೋಗಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಆಸ್ಪತ್ರೆಯಲ್ಲಿ ಆಶ್ರಯ ಪಡೆದಿದ್ದವರು ಕಾಲ್ನಡಿಗೆಯಲ್ಲಿ ತೆರಳಿದ್ದಾರೆ. ಈ ಮಧ್ಯೆ ತೀವ್ರ ಅನಾರೋಗ್ಯಗೊಂಡಿರುವ ಸುಮಾರು 450 ರೋಗಿಗಳು ಆಸ್ಪತ್ರೆಯಲ್ಲೇ ಉಳಿದಿದ್ದಾರೆ ಎಂದು ವರದಿಯಾಗಿದೆ.

ಅಲ್-ಶಿಫಾ ಆಸ್ಪತ್ರೆಯಡಿಯಲ್ಲಿ ಹಮಾಸ್‍ನ ಕಾರ್ಯಾಚರಣಾ ನೆಲೆಯಿದೆ ಎಂದು ಇಸ್ರೇಲ್ ಹೇಳಿದ್ದು, ಇದನ್ನು ಹಮಾಸ್ ತಳ್ಳಿಹಾಕಿದೆ. ನಿನ್ನೆ ಗಾಝಾ ನಗರದಲ್ಲಿ ಲೌಡ್ ಸ್ಪೀಕರ್ಗಳ ಮೂಲಕ ಘೋಷಣೆ ಮಾಡಿದ ಇಸ್ರೇಲ್ ಸೇನೆ ಒಂದು ಗಂಟೆಯೊಳಗೆ ಆಸ್ಪತ್ರೆಯನ್ನು ತೆರವುಗೊಳಿಸುವಂತೆ ಆದೇಶಿಸಿತ್ತು.

ಇದಲ್ಲದೆ ಬಾಂಗ್ಲಾದೇಶ ಸಹಿತ 5 ದೇಶಗಳು ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ಅಂತರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌ಗೆ ತನಿಖೆಗೆ ಆಗ್ರಹಿಸಿವೆ. ಐಸಿಸಿ ಸದಸ್ಯರಾದ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಬೊಲಿವಿಯಾ, ಕೊಮೊರೊಸ್ ಮತ್ತು ಜಿಬೌಟಿ ದೇಶಗಳು ಫೆಲೆಸ್ತೀನ್ ದೇಶದಲ್ಲಿನ ಪರಿಸ್ಥಿತಿಯ ಬಗ್ಗೆ ತನಿಖೆಗೆ ಆಗ್ರಹಿಸಿವೆ ಎಂದು ಐಸಿಸಿ ಮುಖ್ಯ ಪ್ರಾಸಿಕ್ಯೂಟರ್ ಕರೀಮ್ ಖಾನ್ ಹೇಳಿದ್ದಾರೆ.

ಇದನ್ನು ಓದಿ: ಉತ್ತರಪ್ರದೇಶ: ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...