Homeಮುಖಪುಟಪ್ಯಾಲೆಸ್ತೀನ್‌ಗೆ ಭಾರತದಿಂದ 2ನೇ ಹಂತದ ಪರಿಹಾರ ಸಾಮಾಗ್ರಿ ರವಾನೆ

ಪ್ಯಾಲೆಸ್ತೀನ್‌ಗೆ ಭಾರತದಿಂದ 2ನೇ ಹಂತದ ಪರಿಹಾರ ಸಾಮಾಗ್ರಿ ರವಾನೆ

- Advertisement -
- Advertisement -

ಯುದ್ದ ಪೀಡಿತ ಪ್ಯಾಲೆಸ್ತೀನ್‌ಗೆ ಭಾರತ ಭಾನುವಾರ 2ನೇ ಹಂತದ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಿಕೊಟ್ಟಿದೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್, ನಾವು ಪ್ಯಾಲೆಸ್ತೀನ್‌ ಜನರಿಗೆ ಮಾನವೀಯ ನೆರವು ನೀಡುವುದನ್ನು ಮುಂದುವರಿಸುತ್ತೇವೆ. 32 ಟನ್‌ಗಳ ಪರಿಹಾರ ಸಾಮಾಗ್ರಿಗನ್ನು ಹೊತ್ತ 2ನೇ ಭಾರತೀಯ ವಾಯುಪಡೆಯ C17 ವಿಮಾನವು ಈಜಿಪ್ಟ್‌ನ ಎಲ್-ಅರಿಶ್ ವಿಮಾನ ನಿಲ್ದಾಣಕ್ಕೆ ಹೊರಡಲಿದೆ ಎಂದು ವಿದೇಶಾಂಗ ಸಚಿವರು ತಿಳಿಸಿದ್ದಾರೆ.

ಅ.22ರಂದು ಭಾರತವು ಪ್ಯಾಲೆಸ್ತೀನ್‌ಗೆ ವೈದ್ಯಕೀಯ ಮತ್ತು ವಿಪತ್ತು ಪರಿಹಾರ ಸೇರಿದಂತೆ ಮೊದಲ ನೆರವನ್ನು ಕಳುಹಿಸಿಕೊಟ್ಟಿತ್ತು.

ಗಾಝಾ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ ಈವೆರೆಗೆ ಪ್ಯಾಲೆಸ್ತೀನ್‌ನಲ್ಲಿ  ಆಕ್ರಮಣದಿಂದ 12,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ  5,000 ಕ್ಕೂ ಹೆಚ್ಚು ಮಕ್ಕಳು ಮತ್ತು 3,300 ಮಹಿಳೆಯರು ಸೇರಿದ್ದಾರೆ, 30,000 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್ ಸರಕಾರಿ ಮಾದ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ವರದಿಯ ಪ್ರಕಾರ 1,800 ಮಕ್ಕಳು ಸೇರಿದಂತೆ ಸುಮಾರು 3,750 ಜನರು ಇನ್ನೂ ಪತ್ತೆಯಾಗಿಲ್ಲ. ಮೃತರಲ್ಲಿ ಒಟ್ಟು 200 ವೈದ್ಯರು, 22 ಸಿವಿಲ್ ಡಿಫೆನ್ಸ್ ಸಿಬ್ಬಂದಿ ಮತ್ತು 51 ಪತ್ರಕರ್ತರು ಕೂಡ ಸೇರಿದ್ದಾರೆ.

ಇಸ್ರೇಲ್‌ ಆಕ್ರಮಣದಿಂದ 25 ಆಸ್ಪತ್ರೆಗಳು ಮತ್ತು 52 ಆರೋಗ್ಯ ಕೇಂದ್ರಗಳು ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ಇದಲ್ಲದೆ 55 ಆಂಬ್ಯುಲೆನ್ಸ್‌ಗಳನ್ನು ಇಸ್ರೇಲ್‌ ಪಡೆಗಳು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇಸ್ರೇಲ್‌ ದಾಳಿಯಲ್ಲಿ ಆಸ್ಪತ್ರೆಗಳು, ಮಸೀದಿಗಳು ಮತ್ತು ಚರ್ಚ್‌ಗಳು ಸೇರಿದಂತೆ ಸಾವಿರಾರು ಕಟ್ಟಡಗಳು ಧ್ವಂಸಗೊಂಡಿದೆ.

ಇಸ್ರೇಲ್‌ ಗಾಝಾದ ಅತಿದೊಡ್ಡ ಆಸ್ಪತ್ರೆ ಅಲ್-ಶಿಫಾ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಆಸ್ಪತ್ರೆಯಿಂದ ಜನರನ್ನು ತೆರವುಗೊಳಿಸುವಂತೆ ಇಸ್ರೇಲ್ ಸೇನೆ ಶನಿವಾರ ಆದೇಶಿಸಿದ ಬಳಿಕ ಆಸ್ಪತ್ರೆಯಲ್ಲಿದ್ದ ರೋಗಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಆಸ್ಪತ್ರೆಯಲ್ಲಿ ಆಶ್ರಯ ಪಡೆದಿದ್ದವರು ಕಾಲ್ನಡಿಗೆಯಲ್ಲಿ ತೆರಳಿದ್ದಾರೆ. ಈ ಮಧ್ಯೆ ತೀವ್ರ ಅನಾರೋಗ್ಯಗೊಂಡಿರುವ ಸುಮಾರು 450 ರೋಗಿಗಳು ಆಸ್ಪತ್ರೆಯಲ್ಲೇ ಉಳಿದಿದ್ದಾರೆ ಎಂದು ವರದಿಯಾಗಿದೆ.

ಅಲ್-ಶಿಫಾ ಆಸ್ಪತ್ರೆಯಡಿಯಲ್ಲಿ ಹಮಾಸ್‍ನ ಕಾರ್ಯಾಚರಣಾ ನೆಲೆಯಿದೆ ಎಂದು ಇಸ್ರೇಲ್ ಹೇಳಿದ್ದು, ಇದನ್ನು ಹಮಾಸ್ ತಳ್ಳಿಹಾಕಿದೆ. ನಿನ್ನೆ ಗಾಝಾ ನಗರದಲ್ಲಿ ಲೌಡ್ ಸ್ಪೀಕರ್ಗಳ ಮೂಲಕ ಘೋಷಣೆ ಮಾಡಿದ ಇಸ್ರೇಲ್ ಸೇನೆ ಒಂದು ಗಂಟೆಯೊಳಗೆ ಆಸ್ಪತ್ರೆಯನ್ನು ತೆರವುಗೊಳಿಸುವಂತೆ ಆದೇಶಿಸಿತ್ತು.

ಇದಲ್ಲದೆ ಬಾಂಗ್ಲಾದೇಶ ಸಹಿತ 5 ದೇಶಗಳು ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ಅಂತರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌ಗೆ ತನಿಖೆಗೆ ಆಗ್ರಹಿಸಿವೆ. ಐಸಿಸಿ ಸದಸ್ಯರಾದ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಬೊಲಿವಿಯಾ, ಕೊಮೊರೊಸ್ ಮತ್ತು ಜಿಬೌಟಿ ದೇಶಗಳು ಫೆಲೆಸ್ತೀನ್ ದೇಶದಲ್ಲಿನ ಪರಿಸ್ಥಿತಿಯ ಬಗ್ಗೆ ತನಿಖೆಗೆ ಆಗ್ರಹಿಸಿವೆ ಎಂದು ಐಸಿಸಿ ಮುಖ್ಯ ಪ್ರಾಸಿಕ್ಯೂಟರ್ ಕರೀಮ್ ಖಾನ್ ಹೇಳಿದ್ದಾರೆ.

ಇದನ್ನು ಓದಿ: ಉತ್ತರಪ್ರದೇಶ: ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...