Homeಅಂತರಾಷ್ಟ್ರೀಯಗಾಝಾ: ಶಾಲೆಗಳು, ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿ

ಗಾಝಾ: ಶಾಲೆಗಳು, ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿ

- Advertisement -
- Advertisement -

ಇಸ್ರೇಲ್‌- ಪ್ಯಾಲೆಸ್ತೀನ್‌ ಮೇಲೆ ಘೋಷಿಸಿದ ಯುದ್ಧ ಇಂದಿಗೆ 44ನೇ ದಿನಕ್ಕೆ ಕಾಲಿಟ್ಟಿದೆ.  ಉತ್ತರ, ಮಧ್ಯ ಮತ್ತು ದಕ್ಷಿಣ ಗಾಝಾದಲ್ಲಿ ನಡೆಸಿದ ವೈಮಾನಿಕ ದಾಳಿಗೆ ಮಕ್ಕಳು ಸೇರಿದಂತೆ ನೂರಾರು ಜನರು ಮೃತಪಟ್ಟಿದ್ದಾರೆ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಗಾಝಾದಲ್ಲಿರುವ ಬುರೇಜ್ ಮತ್ತು ನುಸಿರಾತ್ ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್‌ನ  ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ವೆಸ್ಟ್‌ಬ್ಯಾಂಕ್‌ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕನಿಷ್ಠ ಇಬ್ಬರು ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ.

ದಕ್ಷಿಣ ಖಾನ್ ಯೂನಿಸ್ ನಗರದಲ್ಲಿ ನಡೆದ ದಾಳಿಯಲ್ಲಿ ಓರ್ವ ಮಹಿಳೆ ಮತ್ತು ಆಕೆಯ ಮಗು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ತೀನ್ ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಜೆನಿನ್ ನಿರಾಶ್ರಿತರ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ 46 ವರ್ಷದ ಅಂಗವಿಕಲ ವ್ಯಕ್ತಿ ಇಸ್ಸಾಮ್ ಅಲ್-ಫಾಯೆದ್ ಮೃತಪಟ್ಟಿದ್ದಾರೆ. 20 ವರ್ಷದ ಒಮರ್ ಲಾಹಮ್ ಬೆಥ್ ಲೆಹೆಮ್‌ನ ದಕ್ಷಿಣದಲ್ಲಿರುವ ಧೈಶೆಹ್ ನಿರಾಶ್ರಿತರ ಶಿಬಿರದ ಮೇಲಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ.

ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿರುವ ಅಲ್-ಫಖೂರಾ ಶಾಲೆಯ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಅಲ್-ಫಖೂರಾ ಶಾಲೆಯನ್ನು ವಿಶ್ವಸಂಸ್ಥೆ ನಡೆಸುತ್ತಿತ್ತು. ಈ ಶಾಲೆಯನ್ನು ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯನ್ನರ ತಾತ್ಕಾಲಿಕ ಶಿಬಿರವನ್ನಾಗಿ ಪರಿವರ್ತಿಸಲಾಗಿತ್ತು.

ಮತ್ತೊಂದು ಕಟ್ಟಡದ ಮೇಲೆ ನಡೆದ ಪ್ರತ್ಯೇಕ ದಾಳಿಯಲ್ಲಿ ಒಂದೇ ಕುಟುಂಬದ 32 ಮಂದಿ ಹತ್ಯೆಗೀಡಾಗಿದ್ದು ಇವರಲ್ಲಿ 19 ಮಂದಿ ಮಕ್ಕಳು ಸೇರಿದ್ದಾರೆ. ಟಾಲ್ ಅಜ್-ಝಾತಾರ್‌ನ ಶಾಲೆಯ ಮೇಲಿನ ದಾಳಿಯಿಂದ ಅಪಾರ ಸಾವುನೋವುಗಳು ವರದಿಯಾಗಿವೆ.

ದೃಶ್ಯಗಳು ಭಯಾನಕವಾಗಿದ್ದವು. ಮಹಿಳೆಯರು ಮತ್ತು ಮಕ್ಕಳ ಶವಗಳು ನೆಲದ ಮೇಲೆ ಬಿದ್ದಕೊಂಡಿದೆ. ಜನರು ಸಹಾಯಕ್ಕಾಗಿ ಕಿರುಚುತ್ತಿದ್ದರು ಎಂದು ಅಲ್-ಫಖೂರಾ ದಾಳಿಯಲ್ಲಿ ಬದುಕುಳಿದ ಅಹ್ಮದ್ ರಾಡ್ವಾನ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಮೃತದೇಹಗಳು ಚದುರಿಹೋಗಿವೆ, ಮಾಂಸದ ತುಂಡುಗಳು ಬಿದ್ದುಕೊಂಡಿದೆ. ಯಾರೂ ಕೂಡ ತಮ್ಮ ಮಕ್ಕಳನ್ನು ಗುರುತಿಸಲು ಸಾಧ್ಯವಿಲ್ಲ. ನಮ್ಮ ಜೀವನ ನರಕವಾಗಿದೆ ಎಂದು ವ್ಯಕ್ತಿಯೋರ್ವರು ಅಲ್‌ ಜಝೀರಾ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಯುಎನ್‌ಆರ್‌ಡಬ್ಲ್ಯುಎ ಏಜೆನ್ಸಿಯ ಮುಖ್ಯಸ್ಥ ಫಿಲಿಪ್ ಲಜ್ಜರಿನಿ ಘಟನೆಯ ಭಯಾನಕ ಚಿತ್ರಗಳನ್ನು ವಿವರಿಸಿದರೆ, ಈಜಿಪ್ಟ್ ಬಾಂಬ್ ದಾಳಿಯನ್ನು ಯುದ್ಧಾಪರಾಧ ಮತ್ತು ವಿಶ್ವಸಂಸ್ಥೆಗೆ ಉದ್ದೇಶಪೂರ್ವಕ ಅವಮಾನ ಎಂದು ಕರೆದಿದೆ.

ಗಾಝಾ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ ಈವೆರೆಗೆ ಪ್ಯಾಲೆಸ್ತೀನ್‌ನಲ್ಲಿ 12,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ  5,000ಕ್ಕೂ ಹೆಚ್ಚು ಮಕ್ಕಳು ಮತ್ತು 3,300 ಮಹಿಳೆಯರು ಸೇರಿದ್ದಾರೆ. 30,000 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್ ಸರಕಾರಿ ಮಾದ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ವರದಿಯ ಪ್ರಕಾರ 1,800 ಮಕ್ಕಳು ಸೇರಿದಂತೆ ಸುಮಾರು 3,750 ಜನರು ಇನ್ನೂ ಪತ್ತೆಯಾಗಿಲ್ಲ. ಮೃತರಲ್ಲಿ ಒಟ್ಟು 200 ವೈದ್ಯರು, 22 ಸಿವಿಲ್ ಡಿಫೆನ್ಸ್ ಸಿಬ್ಬಂದಿ ಮತ್ತು 51 ಪತ್ರಕರ್ತರು ಕೂಡ ಸೇರಿದ್ದಾರೆ.

ಇಸ್ರೇಲ್‌ ಆಕ್ರಮಣದಿಂದ 25 ಆಸ್ಪತ್ರೆಗಳು ಮತ್ತು 52 ಆರೋಗ್ಯ ಕೇಂದ್ರಗಳು ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ಇದಲ್ಲದೆ 55 ಆಂಬ್ಯುಲೆನ್ಸ್‌ಗಳನ್ನು ಇಸ್ರೇಲ್‌ ಪಡೆಗಳು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇಸ್ರೇಲ್‌ ದಾಳಿಯಲ್ಲಿ ಆಸ್ಪತ್ರೆಗಳು, ಮಸೀದಿಗಳು ಮತ್ತು ಚರ್ಚ್‌ಗಳು ಸೇರಿದಂತೆ ಸಾವಿರಾರು ಕಟ್ಟಡಗಳು ಧ್ವಂಸಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...