Homeಕ್ರೀಡೆಕ್ರಿಕೆಟ್ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

- Advertisement -
- Advertisement -

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ವಿರುದ್ಧ 7ವಿಕೆಟ್‌ಗಳ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.

ಕೇವಲ 47  ರನ್‌ಗಳಿಗೆ ತನ್ನ ಮೂರು ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾಗೆ ಟ್ರಾವಿಸ್ ಹೆಡ್ ಆಸರೆಯಾಗಿ ನಿಂತರು. ಅವರಿಗೆ ಲಬುಶೇನ್ ಅತ್ಯುತ್ತಮ ಸಾಥ್ ನೀಡಿದರು. ಟ್ರಾವೆಸ್‌ ಹೆಡ್‌ 120 ಎಸೆತಗಳಲ್ಲಿ 15 ಬೌಂಡರಿ 4 ಸಿಕ್ಸರ್‌ ಸಹಿತ 137 ರನ್‌ ಗಳಿಸಿ ವಿನ್ನಿಂಗ್‌ ಶಾಟ್‌ ಹೊಡೆಯುವ ಯತ್ನದಲ್ಲಿ ಮುಹಮ್ಮದ್‌ ಸಿರಾಜ್‌ ಬೌಲಿಂಗ್‌ ನಲ್ಲಿ ಶುಭಮನ್‌ ಗಿಲ್‌ ಗೆ ಕ್ಯಾಚಿತ್ತು ನಿರ್ಗಮಿಸಿದರು. ಬಳಿಕ ಬಂದ ಗ್ಲೆನ್‌ ಮ್ಯಾಕ್ಸ್‌ವೆಲ್‌ 2 ರನ್‌ ಗಳಿಸುವ ಮೂಲಕ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾಗಿದ್ದಾರೆ.

ಭಾರತದ ಪರ ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದರೆ, ಶಮಿ 1 ವಿಕೆಟ್ ಪಡೆದರು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಆರಂಭ ಉತ್ತವಾಗಿದ್ದರೂ ನಂತರ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಆಸರೆಯಾದರು. ಈ ಇಬ್ಬರು ಆಟಗಾರರು ಅರ್ಧ ಶತಕ ಸಿಡಿಸಿ ಔಟಾದರು.

ಭಾರತ ಪರ ರೋಹಿತ್ ಶರ್ಮಾ 47 ರನ್ ಗಳಿಸಿ ಔಟಾದರೆ, ಶುಭ್ಮನ್ ಗಿಲ್ 4 ರನ್ ಗಳಿಗೆ ಔಟಾದರು. ಇನ್ನು ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ಪೆವಿಲಿಯನ್ ಸೇರಿದರು. ನಂತರ ವಿರಾಟ್ ಕೊಹ್ಲಿ 54 ರನ್ ಸಿಡಿಸಿ ಔಟಾದರೆ ಕೆಎಲ್ ರಾಹುಲ್ 66 ರನ್ ಗೆ ಔಟಾದರು. ಬಳಿಕ ಬಂದ ರವೀಂದ್ರ ಜಡೇಜಾ 9 ರನ್ ಬಾರಿಸಿ ಹೆಜಲ್ವುಡ್ ಎಸೆತದಲ್ಲಿ ಕೀಪರ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಯಾದವ್ 18 ರನ್ ಗಳಿಸಿ ಔಟಾದರೆ, ಶಮಿ 6, ಜಸ್ ಪ್ರೀತ್ ಬುಮ್ರಾ 1 ಮತ್ತು ಕುಲದೀಪ್ ಯಾದವ್ 10 ರನ್ ಗಳಿಸಿ ಔಟಾದರು. ಇನ್ನು ಮೊಹಮ್ಮದ್ ಸಿರಾಜ್ 9 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ.

ಆಸ್ಟ್ರೇಲಿಯಾ ಪರ ಬೌಲಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್ 3, ಪ್ಯಾಟ್ ಕಮಿನ್ಸ್ ಮತ್ತು ಹೆಜಲ್ವುಡ್ ತಲಾ 2 ವಿಕೆಟ್, ಗ್ಲೇನ್ ಮ್ಯಾಕ್ಸ್ ವೇಲ್ ಮತ್ತ ಜಂಪಾ ತಲಾ 1 ವಿಕೆಟ್ ಪಡೆದಿದ್ದಾರೆ.

ಆಸ್ಟ್ರೇಲಿಯಾ ವಿಜಯದ ರನ್ ಹೊಡೆಯುತ್ತಿದ್ದಂತೆ ಭಾರತದ ಆಟಗಾರರ ಕಣ್ಣಾಲಿಗಳು ತುಂಬಿದ್ದವು. ರೋಹಿತ್ ಶರ್ಮಾ ತಲೆ ತಗ್ಗಿಸಿಕೊಂಡು ಪೆವಿಲಿಯನ್‌ನತ್ತ ಹೊರಟರು. ಸಿರಾಜ್ ಅವರನ್ನು ಬೂಮ್ರಾ ಸಮಾಧಾನ ಪಡಿಸುತ್ತಾ ತಮ್ಮ ಕಣ್ಣುಗಳನ್ನೂ ಒರೆಸಿಕೊಂಡರು. ವಿರಾಟ್ ಮುಖದಲ್ಲಿಯೂ ಜೀವಕಳೆ ಬತ್ತಿಹೋಗಿತ್ತು. ಕೆ.ಎಲ್. ರಾಹುಲ್ ಕುಸಿದು ಕುಳಿತಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೈಕ್ ಮುಂದೆ ಬಂದು ನಿಂತ ರೋಹಿತ್, ’ಇವತ್ತಿನ ದಿನದಲ್ಲಿ ನಾವು ನಿರೀಕ್ಷಿಸಿದಷ್ಟು ಚೆನ್ನಾಗಿ ಆಡಲಿಲ್ಲ. ಇನ್ನೂ 20–30 ರನ್‌ಗಳನ್ನು ಹೆಚ್ಚು ಗಳಿಸಿದ್ದರೆ ಚೆನ್ನಾಗಿತ್ತು. ಬ್ಯಾಟಿಂಗ್ ಚೆನ್ನಾಗಿರಲಿಲ್ಲ ಎಂದು ಹೇಳಿದ್ದಾರೆ. 280 ರನ್‌ಗಳ ಗುರಿಯನ್ನು ಒಡ್ಡುವುದು ನಮ್ಮ ಗುರಿಯಾಗಿತ್ತು. ವಿರಾಟ್ ಮತ್ತು ರಾಹುಲ್ ಬ್ಯಾಟಿಂಗ್ ಮಾಡುವಾಗ ಇದು ಸಾಧ್ಯ ಎನಿಸಿತ್ತು. ನಾಲ್ಕನೇ ವಿಕೆಟ್‌ಗೆ ಅವರು ಉತ್ತಮ ಜೊತೆಯಾಟ ಹೆಣೆದಿದ್ದರು. ಆದರೆ ನಂತರ ವಿಕೆಟ್‌ಗಳು ಉರುಳತೊಡಗಿದಾಗ ಹಿನ್ನಡೆಯಾಯಿತು ಎಂದು ಹೇಳಿದ್ದಾರೆ.

ಇದನ್ನು ಓದಿ: ಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...