Homeಕ್ರೀಡೆಕ್ರಿಕೆಟ್ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

- Advertisement -
- Advertisement -

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ವಿರುದ್ಧ 7ವಿಕೆಟ್‌ಗಳ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.

ಕೇವಲ 47  ರನ್‌ಗಳಿಗೆ ತನ್ನ ಮೂರು ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾಗೆ ಟ್ರಾವಿಸ್ ಹೆಡ್ ಆಸರೆಯಾಗಿ ನಿಂತರು. ಅವರಿಗೆ ಲಬುಶೇನ್ ಅತ್ಯುತ್ತಮ ಸಾಥ್ ನೀಡಿದರು. ಟ್ರಾವೆಸ್‌ ಹೆಡ್‌ 120 ಎಸೆತಗಳಲ್ಲಿ 15 ಬೌಂಡರಿ 4 ಸಿಕ್ಸರ್‌ ಸಹಿತ 137 ರನ್‌ ಗಳಿಸಿ ವಿನ್ನಿಂಗ್‌ ಶಾಟ್‌ ಹೊಡೆಯುವ ಯತ್ನದಲ್ಲಿ ಮುಹಮ್ಮದ್‌ ಸಿರಾಜ್‌ ಬೌಲಿಂಗ್‌ ನಲ್ಲಿ ಶುಭಮನ್‌ ಗಿಲ್‌ ಗೆ ಕ್ಯಾಚಿತ್ತು ನಿರ್ಗಮಿಸಿದರು. ಬಳಿಕ ಬಂದ ಗ್ಲೆನ್‌ ಮ್ಯಾಕ್ಸ್‌ವೆಲ್‌ 2 ರನ್‌ ಗಳಿಸುವ ಮೂಲಕ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾಗಿದ್ದಾರೆ.

ಭಾರತದ ಪರ ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದರೆ, ಶಮಿ 1 ವಿಕೆಟ್ ಪಡೆದರು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಆರಂಭ ಉತ್ತವಾಗಿದ್ದರೂ ನಂತರ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಆಸರೆಯಾದರು. ಈ ಇಬ್ಬರು ಆಟಗಾರರು ಅರ್ಧ ಶತಕ ಸಿಡಿಸಿ ಔಟಾದರು.

ಭಾರತ ಪರ ರೋಹಿತ್ ಶರ್ಮಾ 47 ರನ್ ಗಳಿಸಿ ಔಟಾದರೆ, ಶುಭ್ಮನ್ ಗಿಲ್ 4 ರನ್ ಗಳಿಗೆ ಔಟಾದರು. ಇನ್ನು ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ಪೆವಿಲಿಯನ್ ಸೇರಿದರು. ನಂತರ ವಿರಾಟ್ ಕೊಹ್ಲಿ 54 ರನ್ ಸಿಡಿಸಿ ಔಟಾದರೆ ಕೆಎಲ್ ರಾಹುಲ್ 66 ರನ್ ಗೆ ಔಟಾದರು. ಬಳಿಕ ಬಂದ ರವೀಂದ್ರ ಜಡೇಜಾ 9 ರನ್ ಬಾರಿಸಿ ಹೆಜಲ್ವುಡ್ ಎಸೆತದಲ್ಲಿ ಕೀಪರ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಯಾದವ್ 18 ರನ್ ಗಳಿಸಿ ಔಟಾದರೆ, ಶಮಿ 6, ಜಸ್ ಪ್ರೀತ್ ಬುಮ್ರಾ 1 ಮತ್ತು ಕುಲದೀಪ್ ಯಾದವ್ 10 ರನ್ ಗಳಿಸಿ ಔಟಾದರು. ಇನ್ನು ಮೊಹಮ್ಮದ್ ಸಿರಾಜ್ 9 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ.

ಆಸ್ಟ್ರೇಲಿಯಾ ಪರ ಬೌಲಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್ 3, ಪ್ಯಾಟ್ ಕಮಿನ್ಸ್ ಮತ್ತು ಹೆಜಲ್ವುಡ್ ತಲಾ 2 ವಿಕೆಟ್, ಗ್ಲೇನ್ ಮ್ಯಾಕ್ಸ್ ವೇಲ್ ಮತ್ತ ಜಂಪಾ ತಲಾ 1 ವಿಕೆಟ್ ಪಡೆದಿದ್ದಾರೆ.

ಆಸ್ಟ್ರೇಲಿಯಾ ವಿಜಯದ ರನ್ ಹೊಡೆಯುತ್ತಿದ್ದಂತೆ ಭಾರತದ ಆಟಗಾರರ ಕಣ್ಣಾಲಿಗಳು ತುಂಬಿದ್ದವು. ರೋಹಿತ್ ಶರ್ಮಾ ತಲೆ ತಗ್ಗಿಸಿಕೊಂಡು ಪೆವಿಲಿಯನ್‌ನತ್ತ ಹೊರಟರು. ಸಿರಾಜ್ ಅವರನ್ನು ಬೂಮ್ರಾ ಸಮಾಧಾನ ಪಡಿಸುತ್ತಾ ತಮ್ಮ ಕಣ್ಣುಗಳನ್ನೂ ಒರೆಸಿಕೊಂಡರು. ವಿರಾಟ್ ಮುಖದಲ್ಲಿಯೂ ಜೀವಕಳೆ ಬತ್ತಿಹೋಗಿತ್ತು. ಕೆ.ಎಲ್. ರಾಹುಲ್ ಕುಸಿದು ಕುಳಿತಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೈಕ್ ಮುಂದೆ ಬಂದು ನಿಂತ ರೋಹಿತ್, ’ಇವತ್ತಿನ ದಿನದಲ್ಲಿ ನಾವು ನಿರೀಕ್ಷಿಸಿದಷ್ಟು ಚೆನ್ನಾಗಿ ಆಡಲಿಲ್ಲ. ಇನ್ನೂ 20–30 ರನ್‌ಗಳನ್ನು ಹೆಚ್ಚು ಗಳಿಸಿದ್ದರೆ ಚೆನ್ನಾಗಿತ್ತು. ಬ್ಯಾಟಿಂಗ್ ಚೆನ್ನಾಗಿರಲಿಲ್ಲ ಎಂದು ಹೇಳಿದ್ದಾರೆ. 280 ರನ್‌ಗಳ ಗುರಿಯನ್ನು ಒಡ್ಡುವುದು ನಮ್ಮ ಗುರಿಯಾಗಿತ್ತು. ವಿರಾಟ್ ಮತ್ತು ರಾಹುಲ್ ಬ್ಯಾಟಿಂಗ್ ಮಾಡುವಾಗ ಇದು ಸಾಧ್ಯ ಎನಿಸಿತ್ತು. ನಾಲ್ಕನೇ ವಿಕೆಟ್‌ಗೆ ಅವರು ಉತ್ತಮ ಜೊತೆಯಾಟ ಹೆಣೆದಿದ್ದರು. ಆದರೆ ನಂತರ ವಿಕೆಟ್‌ಗಳು ಉರುಳತೊಡಗಿದಾಗ ಹಿನ್ನಡೆಯಾಯಿತು ಎಂದು ಹೇಳಿದ್ದಾರೆ.

ಇದನ್ನು ಓದಿ: ಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...