Homeಮುಖಪುಟಟರ್ಕಿಯಿಂದ ಭಾರತಕ್ಕೆ ತೆರಳುತ್ತಿದ್ದ ಹಡಗನ್ನು ಅಪಹರಿಸಿದ ಯಮನ್‌ನ ಬಂಡುಕೋರರು

ಟರ್ಕಿಯಿಂದ ಭಾರತಕ್ಕೆ ತೆರಳುತ್ತಿದ್ದ ಹಡಗನ್ನು ಅಪಹರಿಸಿದ ಯಮನ್‌ನ ಬಂಡುಕೋರರು

- Advertisement -
- Advertisement -

ಟರ್ಕಿಯಿಂದ ಭಾರತಕ್ಕೆ ತೆರಳುತ್ತಿದ್ದ ಸರಕು ಹಡಗನ್ನು ಭಾನುವಾರ ಯಮನ್‌ನ ಹೌತಿ ಬಂಡುಕೋರರು ಕೆಂಪು ಸಮುದ್ರದಲ್ಲಿ ಅಪಹರಿಸಿದ್ದಾರೆ. ಹಡಗಿನ 25 ಸಿಬ್ಬಂದಿಯನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಇಸ್ರೇಲ್‌ನೊಂದಿಗಿನ ಭಾರತ ಸಂಪರ್ಕ ಹೊಂದಿದೆ ಎನ್ನುವ ಕಾರಣಕ್ಕೆ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಹಡಗನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಗಾಜಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ನಿಲ್ಲಿಸುವವರೆಗೂ ಅಂತರರಾಷ್ಟ್ರೀಯ ನೀರಿನಲ್ಲಿ ಇಸ್ರೇಲಿಗಳಿಗೆ ಸಂಪರ್ಕ ಹೊಂದಿದ ಅಥವಾ ಒಡೆತನದ ಹಡಗುಗಳನ್ನು ಗುರಿಯಾಗಿಸುವುದನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಹೌತಿಗಳ ಮುಖ್ಯ ಸಮಾಲೋಚಕ ಮತ್ತು ವಕ್ತಾರ ಮೊಹಮ್ಮದ್ ಅಬ್ದುಲ್-ಸಲಾಮ್, ”ಇಸ್ರೇಲಿ ಹಡಗುಗಳನ್ನು ಅಪಹರಿಸುವ ಮೂಲಕ ಯಮನ್ ಸಶಸ್ತ್ರ ಪಡೆಗಳ ಗಂಭೀರತೆಯನ್ನು ಸಾಬೀತುಪಡಿಸುವ ಪ್ರಾಯೋಗಿಕ ಹೆಜ್ಜೆಯನ್ನು ಇಟ್ಟಿವೆ.. ಇದು ಆರಂಭ” ಎಂದು ಹೇಳಿದ್ದಾರೆ.

ಇಸ್ರೇಲಿ ರಕ್ಷಣಾ ಪಡೆ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ”ದಕ್ಷಿಣ ಕೆಂಪು ಸಮುದ್ರದಲ್ಲಿ ಯಮನ್ ಬಳಿ ಹೌತಿಗಳು ಸರಕು ಹಡಗನ್ನು ಅಪಹರಿಸಿದ್ದು ಜಾಗತಿಕ ಪರಿಣಾಮದ ಅತ್ಯಂತ ಗಂಭೀರ ಘಟನೆಯಾಗಿದೆ.
ಹಡಗು ಭಾರತಕ್ಕೆ ಹೋಗುವ ಮಾರ್ಗದಲ್ಲಿ ಟರ್ಕಿಯಿಂದ ಹೊರಟಿತು, ಇಸ್ರೇಲಿಗಳು ಸೇರಿದಂತೆ ವಿವಿಧ ರಾಷ್ಟ್ರಗಳ ನಾಗರಿಕರು ಹಡಗಿನಲ್ಲಿ ಇದ್ದರು. ಇದು ಇಸ್ರೇಲಿ ಹಡಗು ಅಲ್ಲ” ಎಂದು ಹೇಳಿಕೊಂಡಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ”ಅಂತರಾಷ್ಟ್ರೀಯ ಹಡಗಿನ ಮೇಲೆ ಇರಾನ್ ದಾಳಿಯನ್ನು ಇಸ್ರೇಲ್ ತೀವ್ರವಾಗಿ ಖಂಡಿಸುತ್ತದೆ” ಎಂದು ಹೇಳಿದೆ.

”ಬ್ರಿಟಿಷ್ ಕಂಪನಿಯ ಒಡೆತನದ ಮತ್ತು ಜಪಾನಿನ ಸಂಸ್ಥೆಯಿಂದ ನಿರ್ವಹಿಸಲ್ಪಡುವ ಹಡಗನ್ನು ಇರಾನ್ ಮಾರ್ಗದರ್ಶನದೊಂದಿಗೆ ಯೆಮೆನೈಟ್ ಹೌತಿ ಮಿಲಿಟಿಯಾ ಹೈಜಾಕ್ ಮಾಡಿದೆ” ಎಂದು ಹೇಳಿದೆ.

ಗಾಜಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ಯುದ್ಧ ಏಳನೇ ವಾರಕ್ಕೆ ಕಾಲಿಟ್ಟಿರುವ ಸಂದರ್ಭದಲ್ಲಿ ಈ ಅಪಹರಣ ಸಂಭವಿಸಿದೆ. ಇಲ್ಲಿಯವರೆಗೆ, ಇಸ್ರೇಲಿ ಪಡೆಗಳ ನಿರಂತರ ವಾಯು ಮತ್ತು ನೆಲದ ದಾಳಿಯಲ್ಲಿ 13,000 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದವರು ಸಾವಿಗೀಡಾಗಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.

ಇದನ್ನೂ ಓದಿ: ಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...