Homeಮುಖಪುಟಮಧ್ಯಪ್ರದೇಶ: ಮತದಾನದ ವೇಳೆ ಗೌಪ‍್ಯತೆಯ ಉಲ್ಲಂಘನೆ; ಮರು ಮತದಾನಕ್ಕೆ ಆದೇಶ

ಮಧ್ಯಪ್ರದೇಶ: ಮತದಾನದ ವೇಳೆ ಗೌಪ‍್ಯತೆಯ ಉಲ್ಲಂಘನೆ; ಮರು ಮತದಾನಕ್ಕೆ ಆದೇಶ

- Advertisement -
- Advertisement -

ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಅಟರ್ ವಿಧಾನಸಭಾ ಕ್ಷೇತ್ರದ ಬೂತ್‌ವೊಂದರಲ್ಲಿ ಭಾರತೀಯ ಚುನಾವಣಾ ಆಯೋಗವು ಮರು ಮತದಾನಕ್ಕೆ ಆದೇಶಿಸಿದೆ.

ನ.17ರಂದು ಕಿಶುಪುರದಲ್ಲಿ ನಡೆದ ಮತದಾನದ ವೇಳೆ ಮತದಾರರು ಫೋಟೊ ಹಾಗೂ ವಿಡಿಯೊ ಚಿತ್ರೀಕರಣ ಮಾಡಿದ್ದರಿಂದ ಗೌಪ‍್ಯತೆಯ ಉಲ್ಲಂಘನೆಯಾಗಿದೆ. ಹೀಗಾಗಿ ಮರು ಮತದಾನಕ್ಕೆ ಆದೇಶಿಸಲಾಗಿದೆ.

ಅಧಿಕೃತ ಪ್ರಕಟಣೆಯ ಪ್ರಕಾರ, ಕಿಶುಪುರದ ಮತಗಟ್ಟೆಯಲ್ಲಿ ನ.21ರ ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ಮತದಾರರ ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗುತ್ತದೆ ಎಂದು ಆಯೋಗವು ಹೇಳಿದೆ. ಮರು ಮತದಾನದ ಆದೇಶವನ್ನು ಜಿಲ್ಲಾ ಚುನಾವಣಾಧಿಕಾರಿಗಳಿಗೆ ನೀಡಲಾಗಿದೆ.

ಮರು ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್‌ ತೆಗೆದುಕೊಂಡು ಹೋಗುವುದು ನಿಷೇಧಿಸಲಾಗಿದೆ. ಉಳಿದಂತೆ ನೀತಿ ಸಂಹಿತೆಯ ಎಲ್ಲಾ ನಿಯಮಗಳು ಜಾರಿಯಲ್ಲಿರಲಿವೆ ಎಂದು ಚುನಾವಣಾ ಆಯೋಗವು ತಿಳಿಸಿದೆ.

ಇದಲ್ಲದೆ ಗೌಪ್ಯತೆಯ ಉಲ್ಲಂಘನೆ ಸಂಬಂಧ 4 ಮತಗಟ್ಟೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ರಿಟರ್ನಿಂಗ್‌ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸಂಜೀವ್ ಶ್ರೀವತ್ಸ ತಿಳಿಸಿದ್ದಾರೆ.

ಮಧ್ಯಪ್ರದೇಶದ ಎಲ್ಲಾ 230 ವಿಧಾನಸಭಾ ಸ್ಥಾನಗಳಿಗೆ ನ.17ರಂದು ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣಾ ಆಯೋಗದ ಪ್ರಕಾರ ಶೇಕಡಾ 77.15 ರಷ್ಟು ಮತದಾನವಾಗಿದೆ.

ಬಿಜೆಪಿಯ ಹಾಲಿ ಶಾಸಕ ಅರವಿಂದ್‌ ಸಿಂಗ್‌ ಬದುರಿಯಾ ವಿರುದ್ಧ ಕಾಂಗ್ರೆಸ್‌ನಿಂದ ಮಾಜಿ ಶಾಸಕ ಹೇಮಂತ್ ಕಟಾರೆ ಕಣದಲ್ಲಿದ್ದಾರೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕಮಲ್ ನಾಥ್ ಅವರಂತಹ ರಾಜಕೀಯ ದಿಗ್ಗಜರು ಸೇರಿದಂತೆ 230 ವಿಧಾನಸಭಾ ಸ್ಥಾನಗಳಲ್ಲಿ 2,533 ಅಭ್ಯರ್ಥಿಗಳು ಮಧ್ಯಪ್ರದೇಶ ಚುನಾವಣಾ ಕಣದಲ್ಲಿದ್ದರು.

ಮಧ್ಯಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದ್ದು, ಬಾಲಾಘಾಟ್ ಜಿಲ್ಲೆಯ ಬೈಹಾರ್, ಲಾಂಜಿ ಮತ್ತು ಪರಸ್ವಾಡ ಕ್ಷೇತ್ರಗಳನ್ನು ಹೊರತುಪಡಿಸಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದೆ.

ಇದನ್ನು ಓದಿ: ಕೆಂಪು ಸಮುದ್ರದಲ್ಲಿ ಅಪಹರಣಕ್ಕೊಳಗಾದ ಹಡಗು ಇಸ್ರೇಲ್‌ಗೆ ಸೇರಿದ್ದು: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...