Homeಮುಖಪುಟ‘3 ವರ್ಷಗಳಿಂದ ಏನು ಮಾಡುತ್ತಿದ್ದರು?’: ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ

‘3 ವರ್ಷಗಳಿಂದ ಏನು ಮಾಡುತ್ತಿದ್ದರು?’: ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ

- Advertisement -
- Advertisement -

ವಿಧಾನಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳನ್ನು ತೆರವುಗೊಳಿಸುವಲ್ಲಿ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ವಿಳಂಬ ಮಾಡುತ್ತಿರುವ ಕುರಿತು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಈ ಬಗ್ಗೆ ಸೋಮವಾರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪುನರಾರಂಭಿಸುತ್ತಿದ್ದಂತೆ ರಾಜ್ಯಪಾಲರನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

”ಶಾಸಕಾಂಗ ಸಭೆಯ ಕರ್ತವ್ಯಗಳನ್ನು ನಿರ್ವಹಿಸಲು ಅಡ್ಡಿಪಡಿಸಿದ್ದಾರೆ” ಎಂದು ಆರೋಪಿಸಿ ರಾಜ್ಯಪಾಲ ರವಿ ಅವರ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ರವಿ ಅವರು ಹಲವು ಬಿಲ್‌ಗಳನ್ನು ಬಾಕಿ ಇರಿಸಿರುವುದು ಮಾತ್ರವಲ್ಲದೆ ಹಲವು ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮತ್ತು ವಿಚಾರಣೆಗೆ ಅನುಮತಿ ನೀಡಿಲ್ಲ ಎಂದು ರಾಜ್ಯ ಸರ್ಕಾರ ತನ್ನ ಅರ್ಜಿಯಲ್ಲಿ ಆರೋಪಿಸಿದೆ.

ತನ್ನ ಒಪ್ಪಿಗೆಗಾಗಿ ಮಂಡಿಸಿದ ಮಸೂದೆಗಳ ಬಗ್ಗೆ ರಾಜ್ಯಪಾಲರ ನಿಷ್ಕ್ರಿಯತೆ ಗಂಭೀರ ಕಾಳಜಿಯ ವಿಷಯವಾಗಿದೆ ಎಂದು ನವೆಂಬರ್ 10 ರಂದು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಗಮನಿಸಿತು. ತಮಿಳುನಾಡು ವಿಧಾನಸಭೆಯು ರವಿ ಅವರು ಹಿಂದಿರುಗಿಸಿದ 10 ಮಸೂದೆಗಳ ಕುರಿತು ಶನಿವಾರ ಸುಪ್ರೀಂಗೆ ತಿಳಿಸಿದೆ.

”ಈ ಮಸೂದೆಗಳು 2020ರಿಂದ ಬಾಕಿ ಇವೆ. ಮೂರು ವರ್ಷ ಅವರೇನು ಮಾಡುತ್ತಿದ್ದರು?” ಎಂದು ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.

ರಾಜ್ಯಪಾಲ ಸಿ ಎನ್‌ ರವಿ ಅವರು ತಮ್ಮ ಬಳಿ ಬಾಕಿ ಇದ್ದ 10 ಮಸೂದೆಗಳನ್ನು ವಾಪಸ್‌ ಕಳುಹಿಸಿದ ವಿದ್ಯಮಾನದ ಕುರಿತಂತೆ ಸುಪ್ರೀಂ ಕೋರ್ಟ್‌ ಈ ಪ್ರಶ್ನೆಯನ್ನೆತ್ತಿದೆ. ಈ 10 ಮಸೂದೆಗಳಲ್ಲಿ ಎರಡು ಮಸೂದೆಗಳನ್ನು ರಾಜ್ಯದಲ್ಲಿ ಈ ಹಿಂದೆ ಆಡಳಿತದಲ್ಲಿದ್ದ ಎಐಎಡಿಎಂಕೆ ಸರ್ಕಾರದ ಅವಧಿಯ ವೇಳೆ ವಿಧಾನಸಭೆ ಅಂಗೀಕರಿಸಿತ್ತು.

ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ ಪರ್ಡಿವಾಲ ಹಾಗೂ ಮಜೋಜ್‌ ಮಿಶ್ರಾ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತು. ಕೇರಳ ಸರ್ಕಾರದ ಪರ ಹಿರಿಯ ವಕೀಲ ಕೆ.ಕೆ ವೇಣುಗೋ‍‍ಪಾಲ್ ಅವರು ಹಾಜರಾದರು.

ಇದೊಂದು ವ್ಯಾಧಿಯಾಗಿಬಿಟ್ಟಿದೆ. ಸಂವಿಧಾನದ 168 ನೇ ವಿಧಿಯ ಅಡಿಯಲ್ಲಿ ಶಾಸಕಾಂಗದ ಭಾಗವಾಗಿದ್ದಾರೆಂದು ರಾಜ್ಯಪಾಲರು ತಿಳಿದುಕೊಂಡಿರುವುದಿಲ್ಲ ಎಂದು ವೇಣುಗೋಪಾಲ್ ಹೇಳಿದರು. ಸಂವಿಧಾನದ 162ನೇ ವಿಧಿಯನ್ವಯ ರಾಜ್ಯಪಾಲರು ಶಾಸಕಾಂಗ ಭಾಗ. ಮೂರು ಸುಗ್ರೀವಾಜ್ಞೆಗಳಿಗೆ ಒಪ್ಪಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಬಳಿಕ ಅದರ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದೆ. ಸುಮಾರು 8 ಮಸೂದೆಗಳು ಕಳೆದ 7–21 ತಿಂಗಳಿನಿಂದ ರಾಜ್ಯಪಾಲರ ಬಳಿಯೇ ಇದೆ ಎಂದು ಕೆ.ಕೆ ವೇಣುಗೋಪಾಲ್ ಕೋರ್ಟ್‌ನ ಗಮನಕ್ಕೆ ತಂದರು.

ಕೇಂದ್ರ ಹಾಗೂ ರಾಜ್ಯಪಾಲರ ಕಚೇರಿಯ ಜತೆಗೆ, ವಿಚಾರಣೆ ಸಂಬಂಧ ನೀವು ಅಥವಾ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ಅವರು ಸಹಾಯ ಮಾಡಬೇಕು ಎಂದು ಅಟಾರ್ನಿ ಜನರಲ್ ವಿ. ವೆಂಕಟರಮಣಿ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್‌ ಜಾರಿ ಮಾಡಿತು. ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು. ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ ಮಾಡುವ ಮೂಲಕ ರಾಜ್ಯಪಾಲರು ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಕೇರಳ ಸರ್ಕಾರ ಆರೋಪಿಸಿತ್ತು.

ತೆಲಂಗಾಣ, ಪಂಜಾಬ್ ಮತ್ತು ಕೇರಳ ರಾಜ್ಯಗಳ ರಾಜ್ಯಪಾಲರು ಶಾಸಕಾಂಗ ಮತ್ತು ಕಾರ್ಯಾಂಗದ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿವೆ.

ಏಳು ತಿಂಗಳಿಂದ ಎರಡು ವರ್ಷಗಳ ಅವಧಿಗೆ ತಮ್ಮ ಬಳಿ ಬಾಕಿ ಇರುವ ಎಂಟು ಮಸೂದೆಗಳನ್ನು ಪರಿಗಣಿಸಲು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ವಿಳಂಬ ಮಾಡಿದ ವಿರುದ್ಧ ಕೇರಳ ಸರ್ಕಾರದ ಮನವಿಯ ಕುರಿತು ಪೀಠವು ಸೋಮವಾರ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಾಲಯವು ಡಿಸೆಂಬರ್ 1 ರಂದು ತಮಿಳುನಾಡು ಸರ್ಕಾರದ ಮನವಿಯನ್ನು ಮತ್ತು ಶುಕ್ರವಾರ ಕೇರಳ ಸರ್ಕಾರದ ಮನವಿಯನ್ನು ಆಲಿಸಲಿದೆ.

ಇದನ್ನೂ ಓದಿ: ಮಸೂದೆಗಳಿಗೆ ಅಂಕಿತ ಹಾಕಲು ವಿಳಂಬ: ಕೇರಳ ಗವರ್ನರ್‌, ಕೇಂದ್ರಕ್ಕೆ ಸುಪ್ರೀಂ ನೊಟೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...