Homeಕರ್ನಾಟಕವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ: ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು

ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ: ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು

- Advertisement -
- Advertisement -

ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ತುಳಿದ ಪರಿಣಾಮ ತಾಯಿ ಮತ್ತು ಮಗು ದಾರುಣವಾಗಿ ಮೃತಪಟ್ಟ ಆಘಾತಕಾರಿ ಘಟನೆ ಭಾನುವಾರ ಬೆಳಿಗ್ಗೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ)ಯ ಐವರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿತ್ತು ಮತ್ತು ನಂತರ ಅವರನ್ನು ಬಂಧಿಸಲಾಗಿತ್ತು. ಸೋಮವಾರ ಅವರನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗೋಪಾಲನ್ ಕಾಲನಿಯ ನಿವಾಸಿಗಳಾದ ಸೌಂದರ್ಯ(23) ಮತ್ತು ಅವರ ಪುತ್ರಿ ಸುವಿಕ್ಸ ಲಿಯ(9 ತಿಂಗಳು) ಮೃತರು. ಪತಿಯ ಜೊತೆ ತಮಿಳುನಾಡಿಗೆ ತೆರಳಿದ್ದ ಸೌಂದರ್ಯ ಮತ್ತು ಅವರ ಪುತ್ರಿ ಲೀಲಾ ಇಂದು ಬೆಳಗ್ಗೆ 6 ಗಂಟೆಗೆ ಬಸ್ಸಿನಲ್ಲಿ ಬೆಂಗಳೂರಿಗೆ ಬಂದಿಳಿದಿದ್ದರು. ಬಳಿಕ ತಾಯಿ-ಮಗಳು ಫುಟ್ ಪಾತ್‌ನಲ್ಲಿ ನಡೆದುಕೊಂಡು ಮನೆಯತ್ತ ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ತುಳಿದ ಪರಿಣಾಮ ಮೃತಪಟ್ಟಿದ್ದಾರೆ.

ಬೆಸ್ಕಾಂ ಕಚೇರಿಯಿಂದ 100 ಮೀಟರ್ ದೂರದಲ್ಲಿರುವ ವೈಟ್‌ಫೀಲ್ಡ್ ಮುಖ್ಯರಸ್ತೆಯ ಹೋಪ್ ಫಾರ್ಮ್ ಜಂಕ್ಷನ್ ಬಳಿ  ಈ ಘಟನೆ ನಡೆದಿದೆ.

ಈ ಘಟನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ನಿರ್ಲಕ್ಷ್ಯ ತೋರಿದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಆರಂಭದಲ್ಲಿ ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿತ್ತು ಮತ್ತು ನಂತರ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದರು.

ತಾಯಿ, ಮಗುವಿನ ಸಾವಿಗೆ ಕಾರಣರಾದ ಆರೋಪದ ಮೇಲೆ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಶ್ರೀರಾಮ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುಬ್ರಹ್ಮಣ್ಯ, ಸಹಾಯಕ ಎಂಜಿನಿಯರ್ ಚೇತನ್, ಜಂಟಿ ಎಂಜಿನಿಯರ್ ರಾಜಣ್ಣ ಮತ್ತು ಸ್ಟೇಷನ್ ಆಪರೇಟರ್ ಮಂಜುನಾಥ್ ಅವರನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.

ದುರಂತ ಸಂಭವಿಸಿ ಒಂದು ಗಂಟೆ ಕಳೆದರೂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂಬ ಆರೋಪ ಕೇಳಿಬಂದಿದೆ. ಶನಿವಾರ ರಾತ್ರಿ ಪಾದಚಾರಿ ಮಾರ್ಗದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ ಎಂದು ಆರೋಪಿಸಲಾಗಿದೆ.

ತಮಿಳುನಾಡಿನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿ ಸೌಂದರ್ಯ ತನ್ನ 9 ತಿಂಗಳ ಮಗಳು ಮತ್ತು ಪತಿ ಸಂತೋಷ್ ಕುಮಾರ್ ಅವರೊಂದಿಗೆ ಬೆಂಗಳೂರಿಗೆ ಮರಳುತ್ತಿದ್ದರು. ಬಸ್ ಇಳಿದು ಮನೆಗೆ ನಡೆದುಕೊಂಡು ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಪಾದಚಾರಿ ಮಾರ್ಗದ ಮೇಲೆ ತುಂಡಾಗಿ ಬಿದ್ದಿದ್ದ 11 ಕೆವಿ ವಿದ್ಯುತ್ ತಂತಿಯನ್ನು ತುಳಿದು ಸೌಂದರ್ಯ ಮತ್ತು ಆಕೆಯ ಮಗು ಸಜೀವ ದಹನವಾಗಿದ್ದಾರೆ. ಜೊತೆಯಲ್ಲಿದ್ದ ಸಂತೋಷ್ ಅವರನ್ನು ರಕ್ಷಿಸಲು ಯತ್ನಿಸಿದಾಗ ಅವರಿಗೆ ವಿದ್ಯುತ್ ಶಾಕ್ ತಗುಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ನಂತರ, ಸಾರ್ವಜನಿಕರು ಅವರಿಗೆ ಸಹಾಯ ಮಾಡುವ ಬದಲು ತಮ್ಮ ಮೊಬೈಲ್‌ನಲ್ಲಿ ದುರಂತವನ್ನು ರೆಕಾರ್ಡ್ ಮಾಡುವುದರಲ್ಲಿ ನಿರತರಾಗಿದ್ದಾರೆ.

ಈ ಸಂಬಂಧ ಕಾಡುಗೋಡಿ ಪೊಲೀಸರು ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಬೆಸ್ಕಾಂ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದು, ಮೃತರ ಕುಟುಂಬಕ್ಕೆ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ.

ಇದನ್ನೂ ಓದಿ: ಬೆಂಗಳೂರು: ರಸ್ತೆ ಬದಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ತಾಯಿ-ಮಗು ದಾರುಣ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....