Homeಕರ್ನಾಟಕವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ: ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು

ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ: ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು

- Advertisement -
- Advertisement -

ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ತುಳಿದ ಪರಿಣಾಮ ತಾಯಿ ಮತ್ತು ಮಗು ದಾರುಣವಾಗಿ ಮೃತಪಟ್ಟ ಆಘಾತಕಾರಿ ಘಟನೆ ಭಾನುವಾರ ಬೆಳಿಗ್ಗೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ)ಯ ಐವರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿತ್ತು ಮತ್ತು ನಂತರ ಅವರನ್ನು ಬಂಧಿಸಲಾಗಿತ್ತು. ಸೋಮವಾರ ಅವರನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗೋಪಾಲನ್ ಕಾಲನಿಯ ನಿವಾಸಿಗಳಾದ ಸೌಂದರ್ಯ(23) ಮತ್ತು ಅವರ ಪುತ್ರಿ ಸುವಿಕ್ಸ ಲಿಯ(9 ತಿಂಗಳು) ಮೃತರು. ಪತಿಯ ಜೊತೆ ತಮಿಳುನಾಡಿಗೆ ತೆರಳಿದ್ದ ಸೌಂದರ್ಯ ಮತ್ತು ಅವರ ಪುತ್ರಿ ಲೀಲಾ ಇಂದು ಬೆಳಗ್ಗೆ 6 ಗಂಟೆಗೆ ಬಸ್ಸಿನಲ್ಲಿ ಬೆಂಗಳೂರಿಗೆ ಬಂದಿಳಿದಿದ್ದರು. ಬಳಿಕ ತಾಯಿ-ಮಗಳು ಫುಟ್ ಪಾತ್‌ನಲ್ಲಿ ನಡೆದುಕೊಂಡು ಮನೆಯತ್ತ ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ತುಳಿದ ಪರಿಣಾಮ ಮೃತಪಟ್ಟಿದ್ದಾರೆ.

ಬೆಸ್ಕಾಂ ಕಚೇರಿಯಿಂದ 100 ಮೀಟರ್ ದೂರದಲ್ಲಿರುವ ವೈಟ್‌ಫೀಲ್ಡ್ ಮುಖ್ಯರಸ್ತೆಯ ಹೋಪ್ ಫಾರ್ಮ್ ಜಂಕ್ಷನ್ ಬಳಿ  ಈ ಘಟನೆ ನಡೆದಿದೆ.

ಈ ಘಟನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ನಿರ್ಲಕ್ಷ್ಯ ತೋರಿದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಆರಂಭದಲ್ಲಿ ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿತ್ತು ಮತ್ತು ನಂತರ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದರು.

ತಾಯಿ, ಮಗುವಿನ ಸಾವಿಗೆ ಕಾರಣರಾದ ಆರೋಪದ ಮೇಲೆ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಶ್ರೀರಾಮ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುಬ್ರಹ್ಮಣ್ಯ, ಸಹಾಯಕ ಎಂಜಿನಿಯರ್ ಚೇತನ್, ಜಂಟಿ ಎಂಜಿನಿಯರ್ ರಾಜಣ್ಣ ಮತ್ತು ಸ್ಟೇಷನ್ ಆಪರೇಟರ್ ಮಂಜುನಾಥ್ ಅವರನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.

ದುರಂತ ಸಂಭವಿಸಿ ಒಂದು ಗಂಟೆ ಕಳೆದರೂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂಬ ಆರೋಪ ಕೇಳಿಬಂದಿದೆ. ಶನಿವಾರ ರಾತ್ರಿ ಪಾದಚಾರಿ ಮಾರ್ಗದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ ಎಂದು ಆರೋಪಿಸಲಾಗಿದೆ.

ತಮಿಳುನಾಡಿನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿ ಸೌಂದರ್ಯ ತನ್ನ 9 ತಿಂಗಳ ಮಗಳು ಮತ್ತು ಪತಿ ಸಂತೋಷ್ ಕುಮಾರ್ ಅವರೊಂದಿಗೆ ಬೆಂಗಳೂರಿಗೆ ಮರಳುತ್ತಿದ್ದರು. ಬಸ್ ಇಳಿದು ಮನೆಗೆ ನಡೆದುಕೊಂಡು ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಪಾದಚಾರಿ ಮಾರ್ಗದ ಮೇಲೆ ತುಂಡಾಗಿ ಬಿದ್ದಿದ್ದ 11 ಕೆವಿ ವಿದ್ಯುತ್ ತಂತಿಯನ್ನು ತುಳಿದು ಸೌಂದರ್ಯ ಮತ್ತು ಆಕೆಯ ಮಗು ಸಜೀವ ದಹನವಾಗಿದ್ದಾರೆ. ಜೊತೆಯಲ್ಲಿದ್ದ ಸಂತೋಷ್ ಅವರನ್ನು ರಕ್ಷಿಸಲು ಯತ್ನಿಸಿದಾಗ ಅವರಿಗೆ ವಿದ್ಯುತ್ ಶಾಕ್ ತಗುಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ನಂತರ, ಸಾರ್ವಜನಿಕರು ಅವರಿಗೆ ಸಹಾಯ ಮಾಡುವ ಬದಲು ತಮ್ಮ ಮೊಬೈಲ್‌ನಲ್ಲಿ ದುರಂತವನ್ನು ರೆಕಾರ್ಡ್ ಮಾಡುವುದರಲ್ಲಿ ನಿರತರಾಗಿದ್ದಾರೆ.

ಈ ಸಂಬಂಧ ಕಾಡುಗೋಡಿ ಪೊಲೀಸರು ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಬೆಸ್ಕಾಂ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದು, ಮೃತರ ಕುಟುಂಬಕ್ಕೆ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ.

ಇದನ್ನೂ ಓದಿ: ಬೆಂಗಳೂರು: ರಸ್ತೆ ಬದಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ತಾಯಿ-ಮಗು ದಾರುಣ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...