HomeಮುಖಪುಟINDIA ಬಣದಿಂದ ವಿದ್ಯಾರ್ಥಿಗಳ ಒಕ್ಕೂಟ ರಚನೆ

INDIA ಬಣದಿಂದ ವಿದ್ಯಾರ್ಥಿಗಳ ಒಕ್ಕೂಟ ರಚನೆ

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲೆ ಪ್ರತಿಪಕ್ಷಗಳ INDIA ಬಣವು ವಿದ್ಯಾರ್ಥಿ ಸಂಘಟನೆಯನ್ನು ರಚನೆ ಮಾಡುತ್ತಿದ್ದು, ವಿದ್ಯಾರ್ಥಿಗಳು ಮತ್ತು ಯುವಕರಿಗೆ ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಮುಂದಿಟ್ಟು  ದೆಹಲಿ ಮತ್ತು ಚೆನ್ನೈನಲ್ಲಿ ರ್ಯಾಲಿಗಳನ್ನು ನಡೆಸಲು ಮುಂದಾಗಿದೆ.

ಕಾಂಗ್ರೆಸ್, ಆರ್‌ಜೆಡಿ, ಎಸ್‌ಪಿ, ಎಎಪಿ, ಸಿಪಿಐಎಂ ಮತ್ತು ಸಿಪಿಐ ಮುಂತಾದ ಪಕ್ಷಗಳ ಅಂಗಸಂಸ್ಥೆಗಳಾದ 16 ವಿದ್ಯಾರ್ಥಿ ಸಂಘಟನೆಗಳು ‘ಯುನೈಟೆಡ್ ಸ್ಟೂಡೆಂಟ್ಸ್ ಆಫ್ ಇಂಡಿಯಾ’ ಹೆಂಬ ಹೆಸರಿನಲ್ಲಿ ಒಟ್ಟುಗೂಡಲು ಮುಂದಾಗಿದ್ದಾರೆ.

ವಿದ್ಯಾರ್ಥಿಗಳ ಒಕ್ಕೂಟವು  ಶಿಕ್ಷಣವನ್ನು ಉಳಿಸಿ, ಎನ್‌ಇಪಿಯನ್ನು ತಿರಸ್ಕರಿಸಿ. ಭಾರತ ಉಳಿಸಿ, ಬಿಜೆಪಿಯನ್ನು ತಿರಸ್ಕರಿಸಿ ಎಂಬ ಘೋಷವಾಕ್ಯದೊಂದಿಗೆ ಒಗ್ಗೂಡಿದೆ.

ವಿದ್ಯಾರ್ಥಿ ಸಂಘಟನೆಯ ಒಕ್ಕೂಟ ರಚನೆಯ ಭಾಗವಾಗಿ ನ.1ರಂದು ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಆನ್‌ಲೈನ್‌ ಸಭೆ ನಡೆಸಿದ್ದು, ಶಿಕ್ಷಣ ಮತ್ತು ಉದ್ಯೋಗ ರಕ್ಷಣೆಗಾಗಿ ಹೋರಾಟವನ್ನು ಬಲಪಡಿಸುವ ಬಗ್ಗೆ ನಿರ್ಧಾರವನ್ನು ಕೈಗೊಂಡಿದ್ದಾರೆ.

ವಿದ್ಯಾರ್ಥಿ ಸಂಘಟನೆಗಳಾದ AISA, AISB, AISF, CRJD, CYSS, DMK ವಿದ್ಯಾರ್ಥಿ ವಿಭಾಗ, DSF, ದ್ರಾವಿಡ ವಿದ್ಯಾರ್ಥಿಗಳ ಒಕ್ಕೂಟ, NSUI, ಪ್ರಗತಿಶೀಲ ವಿದ್ಯಾರ್ಥಿಗಳ ವೇದಿಕೆ, PSU, RLD ಛತ್ರ ಸಭಾ, ಸಮಾಜವಾದಿ ಛತ್ರ ಸಭಾ , ಸತ್ರೋ ಮುಕ್ತಿ ಸಂಗ್ರಾಮ್ ವಿದ್ಯಾರ್ಥಿಗಳ ಸಂಘಟನೆಗಳು ಒಕ್ಕೂಟದ ಭಾಗವಾಗಿರಲಿದೆ.

ಸಂಘಪರಿವಾರದ ಶಕ್ತಿಗಳು ದೇಶದ ಶಿಕ್ಷಣ ಕ್ಷೇತ್ರ, ಪ್ರಜಾಸತ್ತಾತ್ಮಕ, ಜಾತ್ಯತೀತ ಮತ್ತು ಪ್ರಗತಿಪರ ಮೌಲ್ಯಗಳ ಮೇಲೆ ತಮ್ಮ ದಾಳಿಯನ್ನು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಇದರ ವಿರುದ್ಧ ಹೋರಾಡಲು ವಿದ್ಯಾರ್ಥಿಗಳ ಒಕ್ಕೂಟ ರಚನೆಗೆ ಮುಂದಾಗಿದೆ.

ಒಕ್ಕೂಟವು ದೆಹಲಿ ಮತ್ತು ಚೆನ್ನೈನಲ್ಲಿ ಒಕ್ಕೂಟವು ರ್ಯಾಲಿಯನ್ನು ಆಯೋಜಿಸಲು ತೀರ್ಮಾನಿಸಿದೆ. ಇಂದು ಈ ಬಗ್ಗೆ ಮಾತುಕತೆಗೆ ವಿದ್ಯಾರ್ಥಿಗಳ ಸಂಘಟನೆ ದೆಹಲಿಯಲ್ಲಿ ಸಭೆ ಸೇರಲಿದೆ.

ಇದನ್ನು ಓದಿ: ತೇಜಸ್ವಿ ಸೂರ್ಯ ವಿರುದ್ಧ ಪೋಸ್ಟರ್‌ ಹಾಕಿದ ಆಟೋ ಚಾಲಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....